Sunday 31 May 2020

TEAM

A Businessman gets stranded on a lonely highway in the US.
The tyres of his car get stuck badly in a mud pool.

He looks around for help and finally finds an old farmer.
The businessman goes to him asking for help to get his car out of the mud.

Farmer gauges the situation, and agrees to help him and says, let us take the help of warwick, an old bull at the farm.

The farmer ties the bull to the car and start shouting loudly, "FRED, PULL!... JACK, PULL!... JOHN, PULL... WARWICK, PULL..."

As the farmer keeps shouting these words, the bull Warwick gets the car out of the pool of mud.

The Businessman is relieved but has a doubt in his mind.
He thanks the farmer and asks him, "You said the bull’s name was Warwick, and he was alone, then who were Fred, Jack & John?"

The Farmer answered, "See, Warwick is old and is also blind. He does not know he is pulling this car alone. The moment he hears the other names, he thinks he is in a team, and he gives his best".

So is the case with all of us.
The very thought that there are others in this same situation as us, gives us a great deal of comfort, hope, confidence and enthuses us to put our heart and soul into any task that we undertake.

It's not without reason that the very word *TEAM* is said to stand for *"Together  Everyone Achieves More"*.

This too shall pass...
Let's work as a team to overcome the crisis ...

_*Interesting and Valuable Share of Shri Manoj Dhareshwar from Facebook:*_ *VERY GOOD ANALYSIS*

During World War II, numerous fighter planes were getting hit by anti-aircraft guns.

Air Force officers wanted to add some protective armor/shield to the planes. The question was *"where"?*

The planes could only support few more kilos of weight. A group of mathematicians and engineers were called for a short consulting project.

Fighter planes returning from missions were analysed for bullet holes per square foot. They found 1.93 bullet holes/sq. foot near the tail of the planes whereas only 1.11 bullet holes/sq. foot close to the engine.

The Air Force officers thought that since the tail portion had the greatest density of bullets, that would be the logical location for putting an anti-bullet shield.

A mathematician named Abraham Wald said exactly the opposite; *More protection is needed where the bullet holes aren't - that is -around the engines.*

His judgement surprised everyone.  He said *We are counting the planes that returned from a mission. Planes with lots of bullet holes in the engine did not return at all*.

*Debrief*

If you go to the recovery room at the hospital, you’ll see a lot more people with bullet holes in their legs than people with bullet holes in their chests.  _That’s not because people don’t get shot in the chest; it’s because the people who get shot in the chest don’t recover._

*Remember* the words of Einstein-
*Not everything that counts can be counted, and not everything that can be counted, counts*.

Source:
From the book -
*"How Not To Be Wrong",* by Jordan Ellenberg.

*Count how Safe we are at Home.*
_*After relaxations of lockdown, remember our engines will be exposed.🌹😇*_

*👇Read this very interesting☺*

*One day a florist went to a barber for a haircut.*
*After the cut, he asked about his bill, and the barber replied,* *'I cannot accept money from you, I'm doing community service this week.*

*The florist was pleased and left the shop.*

*When the barber went to open his shop the next morning, there was a 'Thank You' card and a dozen roses waiting for him at his door.*

*Later, a grocer comes in for a haircut, and when he tried to pay his bill, the barber again replied, 'I cannot accept money from you , I'm doing community service this week.*

*The grocer was happy and left the shop.*

*The next morning when the barber went to open up, there was a 'Thank You' card and a bag of fresh vegetables waiting for him at his door.*

*Then a politician came in for a haircut, and when he went to pay his bill, the barber again replied, 'I cannot accept money from you. I'm doing community service this week.*

*The politician was very happy and left the shop.*

*The next morning, when the barber went to open up,*
*there were a dozen politicians lined up waiting for a free haircut.*

*And that, my friends, illustrates the fundamental difference between the citizens of our country and the politicians who run it.*

*If you don't share this, someone will miss a good laugh.*

😃😃😂😝😜

Be vocal about local ...

ಧ್ವನಿಯಾಗು ದೇಶೀಯ ಭಾವಕ್ಕೆ ...
ಇದನ್ನು ಒಂದು ಹೊಸ ಅಲೆಯನ್ನಾಗಿ ಎಬ್ಬಿಸಬೇಕು. ಒಂದು ಹೊಸ ವಾತಾವರಣವನ್ನು ನಿರ್ಮಾಣ ಮಾಡಬೇಕು. ಯಾಕೆಂದರೆ it is nothing but Swadeshi ಅಷ್ಟೇ.
ನಾವು 10 ರೂಪಾಯಿ ಕೊಟ್ಟು ಒಂದು ಬ್ರಿಟಾನಿಯ ಬಿಸ್ಕತ್ತನ್ನು ತೆಗೆದುಕೊಂಡರೆ ಅದರಲ್ಲಿ 6 ರೂಪಾಯಿಯನ್ನು ಡಾಲರ್ ಆಗಿ convert ಮಾಡಿಕೊಂಡು ಅಮೆರಿಕಾಕ್ಕೆ ತಗೊಂಡು ಹೋಗುತ್ತಾರೆ. Indian economic system is a drained out. ನಮ್ಮ ಹಣ ನಮ್ಮಲ್ಲೇ ಹರಿದಾಡದಿದ್ದರೆ it leads to our rupee depreciation or devaluation. ನಮ್ಮ ಮಾರುಕಟ್ಟೆಯಲ್ಲೇ ನಮ್ಮ ಹಣ ತಿರುಗಾಡುವ ಹಾಗೆ ಮಾಡಿದರೆ it will appreciate. Thats what his indication.  ಈ ಸಮಯದಲ್ಲಿ ನಮ್ಮ ರೂಪಾಯಿಯ ಅಪಮೌಲ್ಯ ಆಗಬಾರದೆಂದರೆ we should go for local. ಯಾವುದೇ ಸ್ವದೇಶೀ ಬಿಸ್ಕತ್ತನ್ನು ಕೊಳ್ಳಿ , ಜಯಂತಿ.. ಪಾಂಡುರಂಗ ಕಾಫಿ ಕುಡಿಯಿರಿ ತೊಂದರೆಯಿಲ್ಲ. But don't go for Nescafe or Bru...
Be local ಅಂತ ಮಾತ್ರ ಹೇಳಬಹುದಿತ್ತು ಆದರೆ ನರೇಂದ್ರ ಮೋದಿಯವರು ಹಾಗೆ ಹೇಳಲಿಲ್ಲ. Be vocal ಅಂತ ಹೇಳಿದ್ದಾರೆ. ಅಂದ್ರೆ ಸ್ವದೇಶಿಯನ್ನು ನಾವೆಲ್ಲ ಪ್ರಸಾರ ಮಾಡಬೇಕು ಅಂತ. Create a new environment so that ನಮ್ಮ ಸಮಾಜದ ನಮ್ಮ ದೇಶದ ದುಡ್ಡು ನಮ್ಮ ದೇಶದಲ್ಲೇ ಸುತ್ತಾಡುವಂತಾಗಬೇಕು. It should not go to London, America, Belgium or Chaina. ಚೀನಾದಿಂದ ಮಕ್ಕಳ ಆಟದ ಸಾಮಾನುಗಳೆಲ್ಲ ತುಂಬಾ ಕಡಿಮೆ ಬೆಲೆಗೆ ಬರುತ್ತೆ ಅಂತಾ ತಗೊಂಡ್ರೆ it will hit our Rupee. ಆ rupee ಗೆ ಒದೇ ಬಿತ್ತು ಅಂದ್ರೆ ಯಾವ ಮನೆಯವರು ಕಡಿಮೆ ಬೆಲೆ ಅಂತ ಮಕ್ಕಳ ಆಟದ ಸಾಮಾನುಗಳನ್ನ ತಗೊಂಡಿದ್ದರೋ ಅವರೂ ಒದೇ ತಿಂದ ಹಾಗೇನೇ.
ಈಗ ಅಮೇರಿಕಾ ಮತ್ತು ಚೀನಾ they are agreeing on a fact, ಭಾರತಕ್ಕೆ UNನಲ್ಲಿನ Security Council ನಲ್ಲಿ ಒಂದು ಸ್ಥಾನವನ್ನು ಕೊಡಬೇಕು ಅಂತ. Because the leadership is strong ಅಂತ. ನೆನ್ನೆ ಮೊನ್ನೆ ತಾನೇ ಅವರು ಭಾರತದ leadership strong  ಅಂತ ಮಾತನಾಡಿರೋದು, India may get s seat in Security Council ಅಂತ. But Modi did not scared about it. ನಾನು ಹೊಸ ರೀತಿಯ Economy Systemನ್ನ ಸೃಷ್ಟಿಸಲು ಪ್ರಯತ್ನಿಸುತ್ತಿದ್ದೀನಿ ಅದಕ್ಕಾಗಿ ನಮ್ಮನ್ನು ಉದ್ದೇಶಿಸಿ Be Vocal about Local ಅಂದ್ರು. ಈ ಮಾತನ್ನ ಹೇಳಿದರೆ ಅಮೆರಿಕಾದ ಡೊನಾಲ್ಡ್ ಟ್ರಂಪ್ ಗೆ ಅಥವಾ ಚೀನಾದವರಿಗೆ ಯಾವ ತರಹದ ಸಿಟ್ಟು ಬರುತ್ತೋ ಎಂಬುದರ ಬಗ್ಗೆ ತಲೆ ಕೆಡಿಸಿಕೊಳ್ಳಲೂ ಇಲ್ಲ ಅವರ ಬಗ್ಗೆ ಹೆದರಿಕೊಳ್ಳಲೂ ಇಲ್ಲ ಅಥವಾ Security Council ನಲ್ಲಿ ಸ್ಥಾನ ಸಿಗತ್ತೋ ಇಲ್ಲವೋ ಎಂದು ಆತಂಕಗೊಳ್ಳಲ್ಲೂ ಇಲ್ಲ. ಬೇಕಾದ್ರೆ ನೀವು Security Council ನಲ್ಲಿ seat ನ್ನೂ ಕೊಡಬೇಡಿ, ಯಾವಾಗ ತಗೋಬೇಕೋ ಆವಾಗ ತಗೋತೀವಿ ಅನ್ನೋ ಎದೆಗಾರಿಕೆಯೊಂದಿಗೆ we will re-build India on a new theme ಎಂದು ಪರೋಕ್ಷವಾಗಿ ಹೇಳಿದ್ದಾರೆ. ಕೊರೋನಾ ಬರುವುದಕ್ಕಿಂತ ಮೊದಲು ಯಾವ ಆರ್ಥಿಕ ವ್ಯವಸ್ಥೆ ಇತ್ತೋ ಅದರಿಂದ drastic changeನ್ನು ಕೊಡಬೇಕು ಎಂಬುದು ಅವರ ಸ್ಪಷ್ಟ ನಿಲುವಾಗಿದೆ.
ಕಳೆದ ಒಂದು ವಾರದಿಂದ ಟಿ ವಿ ಸಂವಾದಗಳಲ್ಲಿ ಯಾರ್ಯಾರು guestಗಳು ಬಂದಿದ್ದರೋ ವಿಶೇಷವಾಗಿ CNBC, CNBC Awaz, Economic Times ಇವುಗಳಲ್ಲಿ ಬರೋವರೆಲ್ಲ ಹೇಳುತ್ತಾ ಇದ್ದದ್ದು at least ಒಂದು 7-8 lakh crores if possible 10 lakh crores package anounce ಮಾಡಬೇಕು ಅಂತ. But he anounced 20 lakh crores package !!!
ಹಾಗಾದ್ರೆ ಚಿಕ್ಕಮಗಳೂರಿನ ಬಟ್ಟೆ ಅಂಗಡಿಗಳಲ್ಲಿ ಯಾವ ಬಟ್ಟೆ ಖರ್ಚಾಗಬೇಕು? ಕಂಚಿ.. ಈರೋಡ್ ಇಂದ ಬರುವ ಬಟ್ಟೆ ಖರ್ಚಾದ್ರೆ ಅದರಲ್ಲಿ ಕರ್ನಾಟಕಕ್ಕೂ ಲಾಭ ಉಂಟು, ತಮಿಳು ನಾಡಿಗೂ ಲಾಭ ಉಂಟು. ಚನ್ನೈ ನಲ್ಲಿ ಮೈಸೂರ್ ಸ್ಯಾಂಡಲ್ ಸೋಪ್ ಖರ್ಚಾದ್ರೆ ಅದರಿಂದ ತಮಿಳು ನಾಡಿಗೂ ಲಾಭ, ಕರ್ನಾಟಕಕ್ಕೂ ಲಾಭ.
ಇದೆಲ್ಲ ಬಿಟ್ಟು ವಿದೇಶದ ಯಾವುದೋ ಸೋಪ್ , ಶಾಂಪೂ ಖರ್ಚಾದ್ರೆ ನಾವು ಅಂಗಡಿಯವನಿಗೆ ಕೊಡೊ ದುಡ್ಡು supplier ಮೂಲಕ ಫ್ಯಾಕ್ಟರಿ ಗೆ ಹೋಗಿ ಕೊನೆಗೆ ಡಾಲರ್ ಆಗಿಯೋ, ಪೌಂಡ್ ಆಗಿಯೋ ಪರಿವರ್ತನೆಯಾಗಿ ವಿದೇಶಗಳಿಗೆ ಹೋಗುತ್ತೆ. ಹೀಗೆ ಆಗುತ್ತಲಿದ್ದರೆ  ಇವತ್ತಿನ ನಮ್ಮ economy ಯಲ್ಲಿ ನೂರು ರೂಪಾಯಿ ಇದ್ದದ್ದು  ಮುಂದಿನ ವರ್ಷಕ್ಕೆ ಆ ನೂರು ರೂಪಾಯಿಯ ಬದಲು 90 ರೂಪಾಯಿ ಉಳಿಯುತ್ತೆ. ಇನ್ನು ಉಳಿದ 10 ರೂಪಾಯಿ ನಮ್ಮ ಬಳಿ ಇರುವುದೇ ಇಲ್ಲಾ. ವರ್ಷದಲ್ಲಿ 10% ದುಡ್ಡು it will convert into Dollar or Pound. ಹಾಗಾಗಿಯೇ ಮೋದಿಯವರು ಕರೆ ಕೊಟ್ಟಿರೋದು ... "ಧ್ವನಿಯಾಗು ದೇಶೀಯ ಭಾವಕ್ಕೆ" ( Be Vocal about Local) ಅಂತ.
ಇದನ್ನು ಜನಕ್ಕೆ ಅರ್ಥ ಮಾಡಿಸದೇ ಬಿಡಬಾರದು. ನಮ್ಮಲ್ಲಿನ ದೊಡ್ಡ ಕೊರತೆ ಅಂದ್ರೆ ನಾವು ಯಾವುದನ್ನೂ permanent ಆಗಿ hammer ಮಾಡಿ ಮಾಡಿ logical end ತನಕ ತಗೊಂಡು ಹೋಗೋಲ್ಲ. ಯಾವುದೊ ಒಂದು ಸಲ ಮನಸ್ಸಿಗೆ ಬಂದಾಗ, ಸೂಚನೆ ಬಂದಾಗ, ಸ್ವದೇಶೀ ಆಂದೋಲನ ಅಕ್ಟೋಬರ್ 15 ರಿಂದ 30 ರ ತನಕ ಅಂತ ಹೇಳಿ ಮಾಡಿ ಕೈ ಬಿಟ್ಟು ಬಿಡುತ್ತೇವೆ. ಇದು ಹಂಗಲ್ಲ... ಇದು ಪ್ರತಿ ದಿನ ಶಾಖೆಗಳಲ್ಲಿ, ಕಾರ್ಯಕ್ರಮಗಳಲ್ಲಿ, ಬೇರೆ ಬೇರೆ ಮನೆಗಳಿಗೆ ಸಂಪರ್ಕಕ್ಕೆ ಹೋದಾಗ, ಸಾರ್ವಜನಿಕ ಭಾಷಣಗಳಲ್ಲಿ, ವಿಶೇಷವಾಗಿ ತಾಯಂದಿರ ನಡುವೆ ಚರ್ಚೆ ಆಗುತ್ತಲೇ ಇರಬೇಕಾದುದು. Logical End ಮಾತ್ರವೇ ನಮಗೆ ಗೌರವ ತಂದುಕೊಡೋದು. ಇದನ್ನು ಮಾಡಬೇಕು.
ಮೋದಿ ಒಬ್ಬ ದೇಶದ ಪ್ರಧಾನ ಮಂತ್ರಿಯಾಗಿ ವಿದೇಶಿ ಕಂಪನಿ ವಸ್ತುಗಳನ್ನು ತಗೋಬೇಡಿ ಎಂದು ಹೇಳುವ ಹಾಗಿಲ್ಲ. Modi, he should carefully craft and draft his words.... BE VOCAL ABOUT LOCAL ಅಂತ ಏನು ಹೇಳಿದ್ದಾರೋ ಅದರ ಹಿಂದಿನ ಸಂದೇಶವನ್ನು ನಾವು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕಿದೆ ಜೊತೆಗೆ ಅರ್ಥ ಮಾಡಿಸಲೂ ಬೇಕಾಗಿದೆ.

🏹🐒 ವಾಲಿವಧೆಯ ಧರ್ಮಸೂಕ್ಷ್ಮತೆ 🏹🐒

ವಾಲಿ-ಸುಗ್ರೀವರ ಮಧ್ಯೆ ಘನಘೋರ ಕದನವೇ ನಡೆದಿತ್ತು. ಜಯ ಯಾರ ಕೊರಳಿಗೆಂದು ಇನ್ನೂ ನಿಶ್ಚಯವಾಗಿರಲಿಲ್ಲ. ಯಾರೂ ಯಾರಿಗೆ ಕಡಿಮೆಯಿಲ್ಲವೆಂಬಂತಿತ್ತು. ಆದರೆ ವಾಲಿ ಸುಗ್ರೀವನಿಗಿಂತಲೂ ಬಲಶಾಲಿ ಬರುಬರುತ್ತಾ ವಾಲಿಯ ಕೈ ಮೇಲಾಗುತ್ತಾ ಬಂತು ಸುಗ್ರೀವ ದಣಿಯುತ್ತಾ ಬಂದ ಸಹಾಯಕ್ಕಾಗಿ ಸುತ್ತಮುತ್ತಲೂ ನೋಡಹತ್ತಿದ ವಾಲಿಯ ಕೈಮೇಲಾಗುತ್ತಿರುವುದನ್ನು ಗ್ರಹಿಸಿದ ರಾಮ ಮರೆಯಿಂದಲೇ ವಾಲಿಯ ಮೇಲೆ ಬಾಣವನ್ನು ಪ್ರಯೋಗಿಸಿದ.”ರಾಮಬಾಣ” ಎಂದರೆ ಕೇಳಬೇಕೇ..? ಇಟ್ಟಗುರಿ ತಪ್ಪಿದ ನಿದರ್ಶನಗಳಿಲ್ಲ ಬಾಣ ನೇರವಾಗಿ ಬಂದು ವಾಲಿಯ ವಕ್ಷಸ್ಥಳವನ್ನು ಛೇದಿಸಿತು ಬುಡಕಡಿದ ಮರದಂತೇ ರಣವಿಕ್ರಮ ವಾಲಿ ಧರೆಗುರುಳಿದ.

ವಾಲಿಯ ತೇಜಸ್ಸು ಅಲ್ಪವಾಗಿತ್ತು ಆಗಲೋ ಈಗಲೋ ಪ್ರಾಣವಾಯು ಜಾರುವಂತಿತ್ತು ನಿತ್ರಾಣನಾಗಿದ್ದ ಬುದ್ಧಿಗೆಟ್ಟಿದ್ದ ಅಂತಹ ಪರಿಸ್ಥಿತಿಯಲ್ಲೂ ಶ್ರೀರಾಮನನ್ನು ನಿಂದಿಸಿದ. ವಾಲಿ : ”ರಾಮ..ಸುಗ್ರೀವನೊಡನೆ ಯುದ್ಧ ಮಾಡುತ್ತಿದ್ದ ನನ್ನ ಮೇಲೆ ಮರೆಯಲ್ಲೇ ನಿಂತು ಬಾಣವನ್ನು ಪ್ರಯೋಗಿಸಿ ಯಾವ ಪುರುಷಾರ್ಥವನ್ನು ಸಂಪಾದಿಸಿದೆ..?
ಶ್ರೀರಾಮ ಕುಲೀನ, ಸತ್ವಗುಣಸಂಪನ್ನ, ಕರುಣಾಮಯ, ತೇಜಸ್ವಿ, ಧರ್ಮಕಾರ್ಯಗಳಲ್ಲೇ ನಿರತನಾಗಿರುವವ ಎಂದು ಇಡೀ ಪ್ರಪಂಚ ಹಾಡಿ ಹೊಗಳುತ್ತದೆ. ಅಂತಹ ಗುಣಗಳು ನಿನ್ನಲ್ಲಿವೆಯೆಂದು ತಿಳಿದು, ನನ್ನ ಪತ್ನಿ ತಾರೆ ತಡೆದರೂ ಸುಗ್ರೀವನೊಡನೆ ಯುದ್ಧ ಮಾಡಲು ಬಂದೆ. ಕೋಪಾವಿಷ್ಟನಾಗಿ ಇನ್ನೊಬ್ಬನ ಮೇಲೆ ಯುದ್ಧ ಮಾಡುತ್ತಿರುವಾಗ ಧರ್ಮಾತ್ಮನಾದ ನೀನು ಮಧ್ಯಪ್ರವೇಶ ಮಾಡುವುದಿಲ್ಲವೆಂಬ ಭಾವನೆ ನನಗಿತ್ತು. ಆದರೆ ರಾಮ, ನೀನು ಮಾಡಿದ್ದೇನು..?
ನೀನು ಹೃದಯಶೂನ್ಯನೆಂದು ಭಾವಿಸುತ್ತೇನೆ. ಧರ್ಮದ ಸೋಗನ್ನು ಹಾಕಿಕೊಂಡು ಧರ್ಮಾತ್ಮನಂತೇ ಭುವಿಯ ಮೇಲೆ ತಿರುಗುತ್ತಿರುವವ ನೀನು. ನಿನ್ನ ಆಚಾರ-ವಿಚಾರಗಳು ಧರ್ಮಕ್ಕೆ ವಿರುದ್ಧ. ಬೂದಿಮುಚ್ಚಿದ ಕೆಂಡದಂತೇ ಸತ್ಪುರುಷರ ವೇಷವನ್ನು ಧರಿಸಿರುವ ಪಾಪಿ..!!
ನಿನಗಾಗಲೀ, ನಿನ್ನ ದೇಶಕ್ಕಾಗಲೀ ನಾನೇನಾದರೂ ಹಾನಿ ಮಾಡಿದ್ದುಂಟೇ..? ನಿನ್ನನ್ನು ಅವಮಾನಿಸಿದವನಲ್ಲ, ನಿನ್ನ ದೇಶಕ್ಕೆ ದ್ರೋಹ ಬಗೆದವನೂ ಅಲ್ಲ. ನಾನು ನಿನ್ನೊಡನೆ ಯುದ್ಧ ಮಾಡಲು ಬಂದವನಲ್ಲ, ಯುದ್ಧವನ್ನು ಮಾಡುತ್ತಲೂ ಇರಲಿಲ್ಲ. ಹಾಗಿದ್ದೂ ನನ್ನ ಮೇಲೇಕೆ ವೈರವನ್ನು ಸಾಧಿಸಿದೆ..?ಧರ್ಮಾತ್ಮನಾದ ದಶರಥನ ಪುತ್ರ ನೀನು. ವೇದವೇದಾಂಗಗಳನ್ನೂ ಅಭ್ಯಾಸ ಮಾಡಿ ಧರ್ಮಸೂಕ್ಷ್ಮತೆಗಳನ್ನು ತಿಳಿದುಕೊಂಡವನು. ನಿನ್ನಂತವನು ವನಚಾರಿಗಳಾದ ನಮ್ಮಂತಹ ಬಡಪಾಯಿಗಳ ವಿಷಯದಲ್ಲಿ ಹೀಗೆ ಮಾಡಬಹುದೇ..?
ಹೆಣ್ಣು, ಹೊನ್ನು, ಮಣ್ಣು ಈ ಮೂರು ವಿಷಯಗಳು ಯುದ್ಧಕ್ಕೆ ಕಾರಣವಾಗಿರುತ್ತವೆ.
ಈ ಮೂರರಲ್ಲಿ ಯಾವುದಕ್ಕಾಗಿ ನನ್ನನ್ನು ಸಂಹರಿಸಿದೆ..? ಈ ವನದ ಮೇಲೆ ನಿನಗೆ ಆಸೆಯುಂಟಾಯಿತೇ..? ಅಥವಾ ಸುಗ್ರೀವನಿಗೆ ಸಂತಸವನ್ನುಂಟು ಮಾಡಬೇಕೆಂಬ ಉದ್ದೇಶದಿಂದ ನನ್ನನ್ನು ವಧಿಸಿದೆಯಾ..? ಸೀತೆಯ ಅಪಹರಣದ ವಿಷಯವನ್ನು ನನಗೆ ತಿಳಿಸಿದ್ದರೆ ನಾನೇ ಅವಳನ್ನು ತಂದು ನಿನಗೊಪ್ಪಿಸುತ್ತಿದ್ದೆ. ದುರಾತ್ಮನಾದ ರಾವಣನ ಕುತ್ತಿಗೆಯನ್ನು ಹಿಡಿದು ಜೀವಸಹಿತನಾಗಿ ತಂದು ನಿನ್ನ ವಶಕ್ಕೊಪ್ಪಿಸುತ್ತಿದ್ದೆ. ದಂಡನೀತಿ, ವಿನಯ, ನಿಗ್ರಹ, ಅನುಗ್ರಹ ಇವು ರಾಜನಲ್ಲಿರಬೇಕಾದ ಮುಖ್ಯ ಗುಣಗಳು. ಆದರೆ ನಿನ್ನಲ್ಲಿ ಯಾವ ಗುಣಗಳೂ ಕಾಣಿಸುತ್ತಿಲ್ಲ. ನಿನಗೆ ಕಾಮವೇ ಪ್ರಧಾನ. ಕೋಪಿಷ್ಟ, ಅಸ್ಥಿರವಾದ ಮನವುಳ್ಲವ, ರಾಜವ್ಯವಹಾರದಲ್ಲಿ ಜ್ಞಾನವಿಲ್ಲದವ, ಸದಾ ಧನುಸ್ಸಿನಲ್ಲೇ ಆಸಕ್ತಿಯುಳ್ಳವ. ನಿನಗೆ ಧರ್ಮದಲ್ಲಿ ಶ್ರದ್ಧೆಯಿಲ್ಲ, ಇಂದ್ರಿಯಗಳಲ್ಲಿ ನಿಯಂತ್ರಣವಿಲ್ಲ.”ವಾಲಿಯನ್ನು ಅನಾವಶ್ಯಕವಾಗಿ ಕೊಂದುದೇಕೆ..?” ಎಂಬ ಪ್ರಶ್ನೆಯನ್ನು ಯಾರಾದರೂ ಕೇಳಿದರೆ ಏನೆಂದು ಉತ್ತರಿಸುವೆ ರಾಮ..?
ನನ್ನ ಮಾಂಸಕ್ಕಾಗಿ ಕೊಂದೆಯಾ..? ಚರ್ಮಕ್ಕಾಗಿ ಕೊಂದೆಯಾ..? ಅದೂ ಸಾಧ್ಯವಿಲ್ಲ.
ಏಕೆಂದರೆ ಕಪಿಗಳ ಮಾಂಸ, ಚರ್ಮ ನಿಷಿದ್ಧ. ಸರಿ, ಪ್ರಾಣಿಗಳ ಮರಣ ಕಾಲಪುರುಷನಿಗೆ ಅಧೀನವಾದದ್ದು. ವಿಧಿನಿಯಮದಂತೇ ನಾನು ಮರಣಹೊಂದುತ್ತೇನೆ. ಆದರೆ ಅದೃಶ್ಯನಾಗಿ ನಿಂತು, ನನ್ನನ್ನು ಕೊಂದದ್ದು ಸರಿಯೆಂದು ಸರ್ವಸಮ್ಮತವಾಗುವಂತೇ ಉತ್ತರ ನೀಡಲು ನೀನು ಸಮರ್ಥನಾ ಶ್ರೀರಾಮ..?”ವಾಲಿ ಶ್ರೀರಾಮನ ಉತ್ತರವನ್ನು ನಿರೀಕ್ಷಿಸುತ್ತಾನೆ.

ವಾಲಿಯ ಪ್ರಶ್ನೆಗಳಿಂದ ಸ್ವಲ್ಪವೂ ವಿಚಲಿತನಾಗದ ರಾಮ ಹೀಗೆ ಉತ್ತರಿಸುತ್ತಾನೆ.”ಕಪಿಶ್ರೇಷ್ಠ ವಾಲಿ.. ಸಮಸ್ತ ಭೂಮಂಡಲವೇ ಇಕ್ಷ್ವಾಕುವಂಶದವರಿಗೆ ಸೇರಿದ್ದು. ಮನುಷ್ಯರ, ಮೃಗ, ಪಕ್ಷಿಗಳ ನಿಗ್ರಹಾನುಗ್ರಹ ಮಾಡುವಂತಹ ಅಧಿಕಾರ ಇಕ್ಷ್ವಾಕುವಂಶದವರಿಗಿದೆ. ಇಕ್ಷ್ವಾಕುವಂಶವನ್ನೀಗ ಧರ್ಮಾತ್ಮ, ಸತ್ಯಸಂಧ, ಭರತ ಆಳುತ್ತಿದ್ದಾನೆ. ನಾವೂ ಹಾಗೂ ಇತರ ರಾಜರು ಭರತನಿಂದ ಧರ್ಮೋದ್ಧಾರದ ಆದೇಶವನ್ನು ಪಡೆದು ವಿಶ್ವದಲ್ಲಿ ಧರ್ಮಪರಂಪರೆಯನ್ನು ವೃದ್ಧಿಗೊಳಿಸಬೇಕೆಂಬ ಆಶಯದಿಂದ ಭೂಪ್ರದಕ್ಷಿಣೆ ಮಾಡುತ್ತಿದ್ದೇವೆ. ಧರ್ಮಭ್ರಷ್ಟರಾದ ಯಾವುದೇ ಜೀವಿಗಳನ್ನು ಶಿಕ್ಷಿಸಲು ನಮಗೆ ಅಧಿಕಾರವಿದೆ. ನೀನು ಧರ್ಮಕ್ಕೆ ಲೋಪ ಮಾಡಿ, ಅಧರ್ಮಿಯಾಗಿರುವೆ. ಅತಿನಿಂದ್ಯವಾದ ತಪ್ಪುಗಳನ್ನು ಮಾಡಿರುವೆ. ಸನಾತನಧರ್ಮದ ನಿಯಮಗಳನ್ನು ಧಿಕ್ಕರಿಸಿ ತಮ್ಮನ ಪತ್ನಿಯೊಂದಿಗೆ ಸಂಬಂಧವನ್ನು ಬೆಳೆಸಿರುವೆ. ನಿನ್ನನ್ನು ವಧಿಸಲು ಮುಖ್ಯ ಕಾರಣ ಇದೇ. ಸುಗ್ರೀವ ಇನ್ನೂ ಜೀವಂತವಿರುವಾಗ, ಸೊಸೆಯ ಸ್ಥಾನದಲ್ಲಿರುವ, ಆತನ ಪತ್ನಿ ರುಮೆಯಲ್ಲಿ ಕಾಮಾಂಧನಾಗಿ ಏಕೆ ವರ್ತಿಸಿದೆ..? ಯಾವನು ತನ್ನ ಮಗಳ ವಿಷಯದಲ್ಲಿ, ತಂಗಿಯ ವಿಷಯದಲ್ಲಿ ಹಾಗೂ ತಮ್ಮನ ಹೆಂಡತಿಯ ವಿಷಯದಲ್ಲಿ ಕಾಮುಕನಾಗಿ ವರ್ತಿಸುವನೋ ಆತನಿಗೆ ಮರಣದಂಡನೆ ಶಿಕ್ಷೆಯನ್ನು ಧರ್ಮಶಾಸ್ತ್ರದಲ್ಲಿ ವಿಧಿಸಲಾಗಿದೆ. ಮೇಲಾಗಿ ಒಂದು ದೇಶದ ರಾಜನೇ ಇಂತಹ ಅನಿಂದ್ಯವಾದ ಕರ್ಮವನ್ನು ಮಾಡಿದರೆ ಧರ್ಮವೆಲ್ಲಿ ಉಳಿಯುವುದು..?”
ಯಥಾ ರಾಜಾ ತಥಾ ಪ್ರಜಾಃ”
ಪ್ರಜೆಗಳೆಲ್ಲರೂ ಅಧರ್ಮಿಗಳಾಗುತ್ತಾರೆ. ಕಾಮಪ್ರವೃತ್ತನಾದ ನೀನು ತಮ್ಮನ ಹೆಂಡತಿಯೊಡನೆ ಸಂಬಂಧ ಇರಿಸಿಕೊಂಡದ್ದಕಾಗಿ ಮರಣದಂಡನೆಯನ್ನು ವಿಧಿಸಲಾಗಿದೆ. ಮರಣದಂಡನೆಗೆ ಒಳಗಾದವರನ್ನು ಹೇಗಾದರೂ ಶಿಕ್ಷಿಸಬಹುದು. ಕಲ್ಲುಗಾಣಕ್ಕಾದರೂ ಹಾಕಬಹುದು, ವಿಷವುಣಿಸಬಹುದು, ನೇಣುಹಾಕಬಹುದು, ಬೆಟ್ಟದಮೇಲಿಂದ ತಳ್ಳಬಹುದು. ಮರೆಯಲ್ಲಿ ನಿಂತು ಬಾಣಪ್ರಯೋಗವನ್ನು ಮಾಡಿಯೂ ಕೊಲ್ಲಬಹುದು. ಮರಣದಂಡನೆಗೆ ಒಳಗಾಗಿರುವ ವ್ಯಕ್ತಿಯನ್ನು ಧರ್ಮಮಾರ್ಗದಲ್ಲೇ ಶಿಕ್ಷಿಸಬೇಕೆಂಬ ಯಾವುದೇ ನಿಯಮವಿಲ್ಲ.

ಇನ್ನು ನನ್ನ ಹಾಗೂ ಸುಗ್ರೀವನ ಸಂಬಂಧದ ಬಗ್ಗೆ ಹೇಳುತ್ತೇನೆ. ನನಗೆ ಹೇಗೆ ಲಕ್ಷ್ಮಣನೊಂದಿಗೆ ಸಖ್ಯವಿದೆಯೋ ಹಾಗೇ ಸುಗ್ರೀವನೊಂದಿಗಿದೆ. ಪತ್ನೀ ಹಾಗೂ ರಾಜ್ಯದ ಸಂಬಂಧದಿಂದಾಗಿ ಈ ಸಖ್ಯವಾಗಿದೆ. ಧರ್ಮಾತ್ಮನಾದ ಸುಗ್ರೀವ ಸದಾ ಪ್ರಜೆಗಳ ಸೌಖ್ಯವನ್ನೇ ಬಯಸುತ್ತಾನೆ. ಅಗ್ನಿಸಾಕ್ಷಿಯಾಗಿ ಆತನೊಂದಿಗೆ ಸೌಖ್ಯಮಾಡಿಕೊಂಡು ಎಲ್ಲ ವಾನರರ ಸಮಕ್ಷದಲ್ಲಿ ವಾಲಿಯನ್ನು ಸಂಹರಿಸುತ್ತೇನೆಂದು ಪ್ರತಿಜ್ಞೆ ಮಾಡಿದ್ದೆ. ರಾಮನ ಪ್ರತಿಜ್ಞೆಯೆಂದೂ ಸುಳ್ಳಾಗಿಲ್ಲ. ಅದಕ್ಕಾಗಿ ನಿನ್ನ ವಧೆಯಾಗಲೇಬೇಕಿತ್ತು.

ರಾಜರು ಬಲೆಗಳಿಂದಲೂ, ಇನ್ನೂ ಹಲವಾರು ಕಪಟವಿಧಾನಗಳಿಂದಲೂ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಮೃಗಗಳನ್ನು ವಧಿಸುತ್ತಾರೆ. ಮೃಗಗಳು ಓಡುತ್ತಿರಲಿ, ಹೆದರಿಕೊಂಡಿರಲಿ, ಎದುರಾಗಿ ನಿಂತಿರಲಿ, ಪ್ರಮತ್ತವಾಗಿರಲಿ, ಅಪ್ರಮತ್ತವಾಗಿರಲಿ, ಯಾವುದೇ ರೂಪದಲ್ಲಿರಲಿ, ಪ್ರಾಣಿಗಳನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ವಧಿಸುವುದು ತಪ್ಪಲ್ಲ. ನೀನೂ ಕೂಡ ಶಾಖಾಮೃಗ. ನಿನ್ನನ್ನು ಪರೋಕ್ಷವಾಗಿ ವಧಿಸಿದ್ದರಲ್ಲಿ ಯಾವುದೇ ತಪ್ಪಿಲ್ಲ. ಯಾವ ದೋಷವೂ ಇಲ್ಲ. ಈ ಕಾರಣದಿಂದ ಸುಗ್ರೀವನೊಂದಿಗೆ ಯುದ್ಧ ಮಾಡುತ್ತಿದ್ದ ನಿನ್ನನ್ನು ವಧಿಸಿದೆ.

ಯಾವುದೇ ಜೀವಜಂತುವಿರಲಿ, ಪಾಪಗಳನ್ನು ಮಾಡಿದಾಗ ರಾಜನಿಂದ ಯಥೋಚಿತವಾದ ಶಿಕ್ಷೆಯನ್ನು ಪಡೆದು ಅದನ್ನು ಅನುಭವಿಸಿ ಪರಿಶುದ್ಧರಾಗಿ, ಪುಣ್ಯವಂತರಾಗಿ, ಸಾಧುಪುರುಷರಂತೇ ಸ್ವರ್ಗಲೋಕವನ್ನು ಸೇರುತ್ತಾರೆ. ವಾಲಿ.. ಈಗ ನಿನ್ನ ತಪ್ಪಿಗೆ ಶಿಕ್ಷೆಯಾಗಿದೆ. ಆ ಶಿಕ್ಷೆಯನ್ನನುಭವಿಸಿ ಸ್ವರ್ಗವನ್ನು ಸೇರುತ್ತಿರುವೆ”ಎಂದು ರಾಮ ವಾಲಿಯನ್ನು ಅನುಗ್ರಹಿಸುತ್ತಾನೆ. ವಾಲಿಯ ಸಂದೇಹಗಳೆಲ್ಲಾ ನಿವಾರಣೆಯಾಗುತ್ತವೆ.

ರಾಮನನ್ನು ನಿಂದಿಸಿದ್ದಕ್ಕೆ ಪಶ್ಚಾತ್ತಾಪವಾಗುತ್ತದೆ. ”ನರಶ್ರೇಷ್ಟ ರಾಮ ! ನೀನು ಹೇಳಿದ್ದೆಲ್ಲಾ ಸಮುಚಿತವಾಗಿವೆ. ಹಿಂದೆ ನಾನು ಪ್ರಮಾದದಿಂದಾಡಿದ ಮಾತುಗಳನ್ನು ಮನ್ನಿಸು. ನೀನು ಧರ್ಮಾರ್ಥಕಾಮಗಳ ತತ್ವವನ್ನು ಸಂಪೂರ್ಣವಾಗಿ ತಿಳಿದಿರುವೆ. ನಿನ್ನ ಅಂತಃಕರಣ ಸ್ಥಿರ ಹಾಗೂ ನಿರ್ಮಲವಾಗಿದೆ. ನಾನು ಧರ್ಮಭ್ರಷ್ಟರಲ್ಲಿ ಅಗ್ರಗಣ್ಯನಾಗಿದ್ದೇನೆ. ಧರ್ಮದಿಂದ ಪತಿತನಾಗಿದ್ದೇನೆ. ನನ್ನ ಅಪರಾಧಗಳನ್ನೆಲ್ಲ ಮನ್ನಿಸಿ, ಸದ್ಗತಿಯನ್ನು ಕರುಣಿಸು ದೇವ”ಎಂದು ದೀನನಾಗಿ ರಾಮನಲ್ಲಿ ಪ್ರಾರ್ಥಿಸುತ್ತಾನೆ.

🙏ಶನಿದೇವ ಮತ್ತು ವಿಕ್ರಮಾದಿತ್ಯನ ಕಥೆ 🔔

ಕರ್ನಾಟಕ ರಾಜ್ಯದ ಯಕ್ಷಗಾನಗಳಲ್ಲಿ ವಿಕ್ರಮಾದಿತ್ಯನ ಕಥೆ ಬೆರೆತ ಶನಿ ಮಹಾತ್ಮನ ಕಥಾಪ್ರಸಂಗಗಳನ್ನು ಮಂಡಿಸಲಾಗುತ್ತದೆ. ಈ ಕಥೆಯ ಪ್ರಕಾರ, ವಿಕ್ರಮ ಅದ್ಧೂರಿಯಾಗಿ ನವರಾತ್ರಿಯನ್ನು ಆಚರಿಸುತ್ತಿದ್ದನು ಮತ್ತು ಪ್ರತಿ ದಿನ ಒಂದೊಂದು ಗ್ರಹದ ಬಗ್ಗೆ ಮಥನವನ್ನು ಏರ್ಪಡಿಸುತ್ತಿದ್ದನು. ಕೊನೆಯ ದಿನ ಅದು ಶನಿ ಮಹಾತ್ಮನ ಬಗೆಯದಾಗಿತ್ತು. ಬ್ರಾಹ್ಮಣನು ಶನಿ ಮಹಾತ್ಮನ ಬಗ್ಗೆ ವಿವರಿಸುತ್ತ ಶನಿ ಮಹಾತ್ಮನ ಶಕ್ತಿಯ ಬಗ್ಗೆ ಮತ್ತು ಧರಣಿಯಲ್ಲಿ ಧರ್ಮ ಸ್ಥಾಪಿಸುವುದರಲ್ಲಿ ಆತನ ಪಾತ್ರದ ಬಗ್ಗೆ ಹೇಳುತ್ತಾನೆ. ಆ ಬ್ರಾಹ್ಮಣನು ಆ ಸಮಾರಂಭದಲ್ಲಿ ವಿಕ್ರಮನ ಜಾತಕದ ಪ್ರಕಾರ ಶನಿ ಗ್ರಹವು 12ನೇ ಹಂತದಲ್ಲಿ ಪ್ರವೇಶಿಸುತ್ತಿದೆ ಇದು ಬಹಳ ಕೆಡುಕಿಗೆ ಕಾರಣವಾಗುತ್ತದೆ ಎಂದನು. ಆದಾಗ್ಯೂ ವಿಕ್ರಮನಿಗೆ ತೃಪ್ತಿ ಆಗಲಿಲ್ಲ; ಶನಿ ಕೇವಲ ತೊಂದರೆ ಮಾಡುವವನಷ್ಟೇ ತನ್ನ ಸ್ವಂತ ತಂದೆ (ಸೂರ್ಯನಿ)ಗೂ, ಗುರು (ಬೃಹಸ್ಪತಿ)ಗೂ ತೊಂದರೆ ಕೊಟ್ಟವನೆಂದ. ಆದುದರಿಂದ ತನ್ನ ಪೂಜೆ ಸ್ವೀಕರಿಸಲು ಶನಿಗೆ ಅರ್ಹತೆಯಿಲ್ಲವೆಂದು ಬಿಟ್ಟ ವಿಕ್ರಮ. ಶ್ರೀ ದೇವಿಯ ಸಂಪೂರ್ಣ ಆಶೀರ್ವಾದವು ತನಗಿದೆಯೆಂದು ವಿಕ್ರಮನಿಗೆ ಬಹಳ ಹೆಮ್ಮೆ ಇತ್ತು. ನವರಾತ್ರಿಯ ಆಚರಣೆಯ ಈ ಸಂದರ್ಭದಲ್ಲಿ ಜನಸಮೂಹದ ಮುಂದೆ ತನಗೆ ಅವಮಾನವಾಯಿತೆಂದು ಶನಿ ಮಹಾತ್ಮನಿಗೆ ಕೋಪವುಂಟಾಯಿತು. ವಿಕ್ರಮ ತನ್ನನ್ನು ಪೂಜಿಸುವಂತೆ ಮಾಡುವುದಾಗಿ ಶನಿ ಮಹಾತ್ಮ ಸವಾಲನ್ನೆಸೆದ. ಶನಿ ಮಹಾತ್ಮ ಆಕಾಶದಲ್ಲಿ ಮಾಯವಾದಾಗ ವಿಕ್ರಮ ಅದೊಂದು ಆಕಸ್ಮಿಕವಷ್ಟೆ ಮತ್ತು ತನಗಿರುವ ಆಶೀರ್ವಾದದಿಂದ ತನಗೊದಗುವ ಎಲ್ಲಾ ಸವಾಲುಗಳನ್ನು ಎದುರಿಸುವುದಾಗಿ ಹೇಳಿದ. ಬ್ರಾಹ್ಮಣನು ಜಾತಕದ ಪ್ರಕಾರ ಹೇಳಿರುವುದು ಸರಿಯಿರಬಹುದು ಆದರೆ ಶನಿ ಅಷ್ಟೊಂದು ದೊಡ್ದವನೆಂದು ತಾನು ಒಪ್ಪಿಕೊಳ್ಳಲು ಸಿದ್ಧನಿಲ್ಲ ಎಂದನು ವಿಕ್ರಮ. "ಏನು ನಡೆಯಬೇಕೋ ಅದು ನಡೆದೇ ತೀರುತ್ತದೆ, ಏನು ನಡೆಯುವುದಿಲ್ಲವೋ ಅದು ನಡೆಯುವುದೇ ಇಲ್ಲಾ" ಆದುದರಿಂದ ತಾನು ಶನಿಯ ಸವಾಲನ್ನು ಸ್ವೀಕರಿಸುವುದಾಗಿಯೂ ಹೇಳಿದ.

ಒಂದು ದಿನ ಕುದುರೆ ಮಾರಾಟಗಾರನೊಬ್ಬ ಅರಮನೆಗೆ ಬಂದು ವಿಕ್ರಮನ ಸಾಮ್ರಾಜ್ಯದಲ್ಲಿ ಯಾರೂ ತನ್ನ ಕುದುರೆಯನ್ನು ಕೊಳ್ಳಲಾರರು ಎಂದು ಹೇಳಿದನು. ಈ ಕುದುರೆ ಕ್ಷಣಾರ್ಧದಲ್ಲಿ ಆಕಾಶಕ್ಕೆ ನೆಗೆದು ಮರು ಕ್ಷಣವೇ ಭೂಮಿಗೆ ಮರಳುವ ವಿಶೇಷಣವನ್ನು ಹೊಂದಿರುವುದಾಗಿ ಹೇಳಿದ. ಈ ರೀತಿ ಅದು ಹಾರಬಹುದು ಅಥವಾ ಭೂಮಿಯ ಮೇಲೆ ಓಡಬಹುದು. ವಿಕ್ರಮನಿಗೆ ಇದನ್ನು ನಂಬಲು ಸಿದ್ಧನಿರಲಿಲ್ಲ ಅದಕ್ಕಾಗಿ ಒಮ್ಮೆ ಆ ಕುದುರೆಯ ಮೇಲೆ ಸವಾರಿ ಮಾಡಿ ಆನಂತರ ಕೊಂಡುಕೊಳ್ಳುವುದಾಗಿ ಹೇಳಿದನು. ಮಾರಾಟಗಾರನು ಇದಕ್ಕೆ ಒಪ್ಪಿದ ಮೇಲೆ ವಿಕ್ರಮನು ಆ ಕುದುರೆ ಮೇಲೆ ಕುಳಿತು ಅದಕ್ಕೊಂದು ಚಾಟಿ ಏಟು ಕೊಟ್ಟನು. ಮಾರಾಟಗಾರನು ಹೇಳಿದ ಹಾಗೆ ಆ ಕುದುರೆ ಅವನನ್ನು ಆಕಾಶಕ್ಕೆ ಎಳೆದುಕೊಂಡು ಹೋಯಿತು. ಎರಡನೆಯ ಏಟಿಗೆ ಅದು ಭೂಮಿಗೆ ಬರಬೇಕಿತ್ತು ಆದರೆ ಬರಲಿಲ್ಲ. ಬದಲಾಗಿ ವಿಕ್ರಮನನ್ನು ದೂರಕ್ಕೆ ಕರೆದುಕೊಂಡು ಹೋಗಿ ಕಾಡಿನೊಳಕ್ಕೆ ಎಸೆಯಿತು. ವಿಕ್ರಮನಿಗೆ ಗಾಯಗಳಾದವು ಮತ್ತು ಮರಳಿ ಬರಲು ದಾರಿ ಹುಡುಕುತ್ತಿದ್ದನು. ಇದೆಲ್ಲಾ ವಿಧಿಯಷ್ಟೇ ಇನ್ನೇನೂ ಇರಲಾರದು ಎನ್ನುತ್ತ ಕುದುರೆ ಮಾರಾಟಗಾರನ ರೂಪದಲ್ಲಿ ಬಂದ ಶನಿ ಮಹಾತ್ಮನನ್ನು ಕಾಣಲು ವಿಫಲಗೊಂಡ. ಕಾಡಿನಲ್ಲಿ ದಾರಿಯನ್ನು ಅರಸುತ್ತಿದ್ದಾಗ ಡಕಾಯಿತರು ವಿಕ್ರಮನನ್ನು ದಾಳಿಮಾಡಿದರು. ಅವನನ್ನು ಥಳಿಸಿ ಅವನು ಧರಿಸಿದ್ದ ಆಭರಣಗಳನೆಲ್ಲಾ ದೋಚಿದರು. ಇನ್ನೂ ಪರಿಸ್ಥಿಯ ಅರಿವಿಲ್ಲದ ವಿಕ್ರಮ ಕಳ್ಳರು ತನ್ನ ಕಿರೀಟವನಷ್ಟೇ ಒಯ್ದರು ತನ್ನ ತಲೆಯನ್ನಲ್ಲವಲ್ಲಾ ಎಂದನು. ಬಾಯಾರಿಕೆಗೆ ಹತ್ತಿರ ಕಂಡ ನದಿಯೊಂದರ ಬಳಿ ಸಾಗಿದ್ದಾಗ ಕಾಲು ಜಾರಿ ವಿಕ್ರಮನನ್ನು ಎಷ್ಟೋ ದೂರಕ್ಕೆ ಎಳೆದುಕೊಂಡು ಹೋಗಿಬಿಟ್ಟಿತು.

ವಿಕ್ರಮನು ಬಹು ಕಷ್ಟದಿಂದ ಒಂದು ಪಟ್ಟಣದ ಬಳಿಗೆ ಬಂದನು, ಹಸಿದುಕೊಂಡು ಮರದ ನೆರಳಲ್ಲಿ ಕುಳಿತನು. ವಿಕ್ರಮ ಕುಳಿತ ಮರದ ಎದುರಿಗೆ ಒಂದು ಅಂಗಡಿ ಇತ್ತು, ಆ ಅಂಗಡಿ ಒಡೆಯನಿಗೆ ಸದಾ ಹಣದ್ದೇ ಚಿಂತೆ. ವಿಕ್ರಮನು ಆ ಮರದ ಕೆಳಗೆ ಕುಳಿತ್ತದ್ದೇ ತಡ ಆ ಅಂಗಡಿಗೆ ಅಧಿಕ ಜನರು ಬಂದು ಒಳ್ಳೆ ವ್ಯಾಪಾರವಾಯಿತು. ಹಣದ ದುರಾಸೆಯ ಆ ವರ್ತಕ ಇದನ್ನು ಗ್ರಹಿಸಿ, ವಿಕ್ರಮನನ್ನು ಮನೆಗೆ ಆಹ್ವಾನಿಸಿ ಊಟ ಬಡಿಸಿಸಿದನು. ಅಂಗಡಿಯಲ್ಲಿ ಒಳ್ಳೆ ವ್ಯಾಪಾರ ಕಂಡ ವರ್ತಕನು ಇದನ್ನು ಮುಂದುವರೆಸುವ ದೆಸೆಯಿಂದ ವಿಕ್ರಮನನ್ನು ತನ್ನಲ್ಲೇ ಉಳಿಸಿಕೊಳ್ಳುವ ಯೋಜನೆಯನ್ನು ಹೂಡಿದನು ಅದರ ಪ್ರಕಾರ ತನ್ನ ಮಗಳನ್ನು ವಿಕ್ರಮನನ್ನು ಮದುವೆಯಾಗಲು ಹೇಳುತ್ತಾನೆ. ಊಟವಾದ ನಂತರ ವಿಕ್ರಮನು ಕೋಣೆಯೊಂದರಲ್ಲಿ ವಿಶ್ರಮಿಸುತ್ತಿದ್ದಾಗ ವರ್ತಕನ ಮಗಳು ಆ ಕೋಣೆಯನ್ನು ಪ್ರವೇಶಿಸಿದಳು. ವಿಕ್ರಮನು ಪವಡಿಸಿದ ಹಾಸಿಗೆಯ ಬಳಿ ವಿಕ್ರಮನು ಎಚ್ಚರಗಗೊಳುವುದನ್ನೇ ಕಾಯುತ್ತಿದ್ದಳು. ನಿಧಾನಕ್ಕೆ ಅವಳಿಗೂ ನಿದ್ದೆ ಆವರಿಸಿದಂತಾಯಿತು. ತನ್ನ ಒಡವೆಗಳನೆಲ್ಲಾ ತೆಗೆದು ಬಾತುಕೋಳಿಯ ಚಿತ್ರಪಟ ನೇತು ಹಾಕಿದ್ದ ಮೊಳೆಗೆ ತಗುಲಿಹಾಕಿದಳು. ಆನಂತರ ನಿದ್ದೆಗೆ ಶರಣಾದಳು. ಎಚ್ಚರಗೊಂಡ ವಿಕ್ರಮನು ನೋಡುತ್ತಾನೆ, ಚಿತ್ರಪಟದಲ್ಲಿ ಮೂಡಿದ್ದ ಬಾತುಕೋಳಿ ಆ ಪಟಕ್ಕೆ ತಗುಲಿಹಾಕಿದ್ದ ಒಡವೆಗಳನ್ನು ನುಂಗುತ್ತಿತ್ತು. ಆಶ್ಚರ್ಯದಿಂದ ನೋಡುತ್ತಿರುವಂತೆಯೇ ನಿದ್ದೆಯಿಂದೆದ್ದ ವರ್ತಕನ ಮಗಳು ತಾನಿಟ್ಟಿದ್ದ ಸ್ಥಳದಲ್ಲಿ ಒಡವೆಗಳು ಕಾಣೆಯಾಗಿರುವುದನ್ನು ಕಂಡು ತನ್ನ ತಂದೆಯನ್ನು ಕೂಗಿ ವಿಕ್ರಮನೇ ಅದನ್ನು ಕದ್ದಿರುವುದಾಗಿ ಹೇಳಿದಳು.

ವಿಕ್ರಮನನ್ನು ರಾಜನ ಬಳಿಗೆ ಕರೆದೊಯ್ಯಲಾಯಿತು. ವರ್ತಕನ ಆರೋಪವನ್ನು ಆಲಿಸಿದ ರಾಜನು ವಿಕ್ರಮನ ಕೈ-ಕಾಲುಗಳನ್ನು ಕತ್ತರಿಸಿ ಕಾಡಿಗೆ ಬಿಟ್ಟುಬಿಡಬೇಕೆಂದು ಆಜ್ಞಾಪಿಸಿದನು. ನಡೆದಾಡಲು ಸಾಧ್ಯವಾಗದೆ ರಕ್ತ ಸುರಿಸಿಕೊಂಡು ನರಳುತ್ತಿದ್ದ ವಿಕ್ರಮನನ್ನು, ಆ ದಾರಿಯಲ್ಲಿ ಉಜ್ಜಯಿನಿಯ ತನ್ನ ತವರು ಮನೆಯಿಂದ ಗಂಡನ ಮನೆಗೆ ಹಾದು ಹೋಗುತ್ತಿದ್ದ ಮಹಿಳೆಯೊಬ್ಬಳು ಗುರುತಿಸಿದಳು. ಆತನ ಬಗ್ಗೆ ವಿಚಾರಿಸಿ, ಕುದುರೆ ಸವಾರಿ ಮಾಡುತ್ತ ಮಾಯವಾದ ರಾಜನ ಬಗ್ಗೆ ಉಜ್ಜಯಿನಿಯ ಜನರು ಆತಂಕಗೊಂಡಿದ್ದಾರೆ ಎಂದು ಹೇಳಿದಳು. ಆಕೆಯ ಭಾವ-ಮೈದುನರಿಗೆ ವಿಕ್ರಮನನ್ನು ತನ್ನ ಮನೆಯಲ್ಲಿ ಉಳಿಸಿಕೊಳ್ಳಬೇಕೆಂದು ವಿನಂತಿಸಿಕೊಂಡಳು. ಅವಳ ಕುಟುಂಬವು ನೌಕರರ ವರ್ಗದವರಾಗಿದ್ದು; ವಿಕ್ರಮನು ಕೆಲಸ ಕೇಳಿದನು. ತಾನು ಹೊಲದಲ್ಲಿ ಕುಳಿತು ಎತ್ತುಗಳು ಕಾಳುಗಳನ್ನು ಬೇರ್ಪಡಿಸುವುಕ್ಕಾಗಿ ತಿರುಗುವುದಕ್ಕೆ ಕೂಗಿ-ಕೂಗಿ ಅದನ್ನು ಮಾಡಿಸುತ್ತೇನೆ ಎಂದನು. ಬಹು ಕಾಲದವರೆಗು ಇನೊಬ್ಬರ ಮನೆಯಲ್ಲಿ ಅತಿಥಿಯಾಗಿ ಉಳಿಯಲು ತನಗಷ್ಟವಿಲ್ಲ ಎಂದನು.

ಒಂದು ಸಂಜೆ ವಿಕ್ರಮನು ಕಾರ್ಯನಿರತನಾಗಿದ್ದಾಗ ಜೋರಾಗಿ ಬೀಸಿದ ಗಾಳಿಗೆ ದೀಪ ಹಾರಿತು. ಆಗ ದೀಪಕ ರಾಗವನ್ನು ಹಾಡಿ ದೀಪಗಳನ್ನು ಹೊತ್ತಿಸಿದನು. ಈ ರಾಗವು ಪಟ್ಟಣದ ಎಲ್ಲಾ ದೀಪಗಳನ್ನು ಹೊತ್ತಿಸಿತು-ಆ ಪಟ್ಟಣದ ರಾಜಕುಮಾರಿ ದೀಪಕ ರಾಗವನ್ನು ಹಾಡಿ ದೀಪವನ್ನು ಹೊತ್ತಿಸಿದವರು ಯಾರೇ ಆಗಿರಲಿ ಅವರನ್ನು ತಾನು ಮದುವೆಯಾಗುವುದಾಗಿ ಘೋಶಿಸಿದಳು. ಅಂಗವಿಕಲನಾದ ವಿಕ್ರಮನಿಂದಾಗಿ ದೀಪ ಹೊತ್ತಿದ್ದನ್ನು ಕಂಡು ಚಕಿತಳಾದರೂ ರಾಜಕುಮಾರಿ ಅವನನ್ನೇ ಮದುವೆಯಾಗುವುದಾಗಿ ನಿರ್ಧರಿಸಿದಳು. ವಿಕ್ರಮನನ್ನು ನೋಡಿದ ರಾಜನಿಗೆ ತಾನು ಕಳ್ಳತನದ ಅಪರಾಧಕ್ಕೆ ಕೈ-ಕಾಲು ಮುರಿಸಿ ಕಾಡಿಗಟ್ಟಿದ್ದ ವ್ಯಕ್ತಿ ಈತನೇ ಎಂದು ನೆನಪಾಗಿ ಈಗ ತನ್ನ ಮಗಳನ್ನೇ ಮದುವೆಯಾಗಲು ಪ್ರಯತ್ನಿಸುತ್ತಿದ್ದಾನೆಂದು ಕೋಪೋದ್ರೇಕಗೊಂಡ. ತನ್ನ ಕತ್ತಿಯನ್ನು ಹೊರತೆಗೆದು ವಿಕ್ರಮನ ತಲೆಯನ್ನು ತೆಗೆಯಲು ಮುಂದಾದ. ಆ ಸಮಯದಲ್ಲಿ ವಿಕ್ರಮನಿಗೆ ಇದೆಲ್ಲಾ ಶನಿ ಮಹಾತ್ಮನ ಶಕ್ತಿಯಿಂದ ಉಂಟಾಗುತ್ತಿದೆ ಎಂದು ಅರಿವಾಗುತ್ತದೆ. ಇನ್ನೇನು ಸಾಯುವ ಕ್ಷಣ ಸಮೀಪವಿದೆ ಎನ್ನುವಾಗ ಶನಿ ಮಹಾತ್ಮನನ್ನು ಪ್ರಾರ್ಥಿಸುತ್ತಾನೆ. ತನ್ನ ತಪ್ಪುಗಳನ್ನು ಒಪ್ಪಿಕೊಂಡು ಶನಿ ಮಹಾತ್ಮನ ಶಕ್ತಿಯ ಬಗ್ಗೆ ಹೆಮ್ಮೆ ಪಡುವುದಾಗಿ ಪ್ರಾರ್ಥಿಸುತ್ತಾನೆ. ಶನಿ ಮಹಾತ್ಮ ಪ್ರತ್ಯಕ್ಷನಾಗಿ ವಿಕ್ರಮನ ಕೈ-ಕಾಲುಗಳನ್ನು ಮೊದಲಿನ ರೀತಿಯಲ್ಲೇ ಮಾಡಿ ಒಡವೆಗಳನ್ನು ಮತ್ತು ಆತನಿಗೆ ಸೇರಿದ್ದ ಎಲ್ಲವನ್ನು ಮರಳಿ ಕೊಟ್ಟನು. ವಿಕ್ರಮನು ತಾನು ಅನುಭವಿಸಿದ ಹಿಂಸೆಯನ್ನು ಸಾಮಾನ್ಯರಿಗೆ ಕೊಡದಿರಲು ಪ್ರಾರ್ಥಿಸಿದನು. ತನ್ನಂಥ ಬಲಿಷ್ಠನೇ ತಾಳುವುದಕ್ಕೆ ಆಗದಿದ್ದ ಮೇಲೆ ಇನ್ನು ಸಾಮಾನ್ಯರು ತಡೆದುಕೊಳ್ಳಲಾರರು ಎಂದನು. ಸಾಮಾನ್ಯರಿಗೆ ನೋವು ಕೊಡದಿರಲು ಶನಿ ಮಹಾತ್ಮ ಒಪ್ಪಿದನು. ರಾಜನಿಗೆ ಇದೆಲ್ಲಾ ಗೊತ್ತಾಗಿ ತನ್ನ ರಾಜ್ಯವನ್ನು ವಿಕ್ರಮನ ಸಾಮ್ರಾಜ್ಯಕ್ಕೆ ಒಪ್ಪಿಸಿ ತನ್ನ ಮಗಳನ್ನು ಮದುವೆ ಮಾಡಿ ಕೊಡುವುದಾಗಿ ಹೇಳಿದನು. ಇದೇ ಸಮಯಕ್ಕೆ ಹಿಂದೆ ಉಲ್ಲೇಖಿಸಿರುವ ವರ್ತಕನು ಅರಮನೆಗೆ ಓಡೋಡಿ ಬಂದು ಆಭರಣಗಳನ್ನು ನುಂಗಿದ ಚಿತ್ರ ಪಟದಲ್ಲಿದ್ದ ಬಾತು ಕೋಳಿ ತನ್ನ ಬಾಯಿಂದ ಆಭರಣಗಳನ್ನು ಕಕ್ಕಿತು ಎಂದು ಹೇಳಿದನು. ವರ್ತಕನೂ ತನ್ನ ಮಗಳನ್ನು ರಾಜ ವಿಕ್ರಮನಿಗೆ ಧಾರೆ ಎರೆದು ಕೊಡುವುದಾಗಿ ಹೇಳುತ್ತಾನೆ. ವಿಕ್ರಮನು ಉಜ್ಜಯಿನಿಗೆ ಮರಳಿ ಶನಿ ಮಹಾತ್ಮನ ಆಶೀರ್ವಾದದಿಂದ ಶ್ರೇಷ್ಠ ಸಾಮ್ರಾಟನೆನ್ನಿಸಿಕೊಂಡ

ನೀಲಾಂಜನ ಸಮಾಭಾಸಂ ರವಿಪುತ್ರಂ ಯಮಾಗ್ರಜಂ! ಛಾಯಾ ಮಾರ್ತಾಂಡ ಸಂಭೂತಂ ತಂ ನಮಾಮಿ ಶನೈಶ್ಚರಂ!!

*"ಸಂನ್ಯಾಸ"*

*ಸನ್ಯಾಸದಲ್ಲಿ ನಾಲ್ಕು ವಿಧಗಳು. ಕುಟೀಚಕ, ಬಹೂದಕ, ಹಂಸ ಮತ್ತು ಪರಮಹಂಸ.*

*ಸಂನ್ಯಾಸಿಗಳಿಗೆಂದು ಶ್ರೀ ಶಂಕರಾಚಾರ್ಯರು ದಶನಾಮಿ ಪದ್ಧತಿಯನ್ನು ಪರಿಚಯಿಸಿದರು.*

*1.ತೀರ್ಥ  2.ಆಶ್ರಮ  3.ವನ  4.ಅರಣ್ಯ  5. ಗಿರಿ  6.ಪರ್ವತ 7. ಸಾಗರ  8.ಸರಸ್ವತೀ  9.ಭಾರತೀ ಮತ್ತು 10. ಪುರೀ – ಇವು ಸಂನ್ಯಾಸ ಪರಂಪರೆಯ ಹತ್ತು ಉಪಾಧಿಗಳು.*

*ಈ ದಶನಾಮಗಳನ್ನು ಯಾರಿಗೆ ನೀಡಲಾಗುತ್ತದೆ ಅನ್ನುವ ಕಿರು ವಿವರವು ನಿಮ್ಮ ಮುಂದಿದೆ :*

*ಭಾರತೀ ನಾಮ ವಿದ್ಯಾಭಾರೇಣ ಸಂಪೂರ್ಣಃ ಸರ್ವಭಾರಂ ಪರಿತ್ಯಜೇತ್ |*
*ದುಃಖ ಭಾರಂ ನ ಜಾನತಿ ಭಾರತೀ ಪರಿಕೀರ್ತಿತಃ ||*

*ಯಾವ ವ್ಯಕ್ತಿಯು ವಿದ್ಯೆಯ ಭಾರದಿಂದ ಪರಿಪೂರ್ಣನಾಗಿ, ಪ್ರಪಂಚದ ಸಮಸ್ತ ಭಾರಗಳನ್ನೂ ತ್ಯಜಿಸುತ್ತಾರೋ  ಮತ್ತು ದುಃಖದ ಭಾರವನ್ನು ತಿಳಿದಿರುವುದಿಲ್ಲವೋ ಅವರಿಗೆ ‘ಭಾರತೀ’ ಎಂಬ ಉಪಾಧಿ ನೀಡಲಾಗುತ್ತದೆ.*

*ಸರಸ್ವತೀ ನಾಮ ಸ್ವರಜ್ಞಾನ ವಶೋ ನಿತ್ಯಂ ಸ್ವರವಾದೀ ಕಿವೀಶ್ವರಃ |*
*ಸಂಸಾರ ಸಾಗರೇ ಸಾರಾಭಿಜ್ಞೋ ಯಃ ಸಃ ಸರಸ್ವತೀ ||*

*ಯಾರು ಸ್ವರದ ಜ್ಞಾನವನ್ನು ಹೊಂದಿದ್ದು, ಸಕಲ ವೇದಗಳ ಸ್ವರಗಳನ್ನು ಸಂಪೂರ್ಣವಾಗಿ ತಿಳಿದಿರುತ್ತಾರೋ; ಮತ್ತು ಸಂಸಾರದ ಸತ್ವ ಪರೀಕ್ಷೆಯನ್ನು ಮಾಡುತ್ತಾರೋ ಅವರ ಪದವಿಯನ್ನು ‘ಸರಸ್ವತೀ’ ಎಂದು ಕರೆಯುತ್ತಾರೆ.*

*ತೀರ್ಥ ನಾಮ ತ್ರಿವೇಣೀ ಸಂಗಮೇ ತೀರ್ಥೇ ತತ್ವಮಸ್ಯಾದಿ ಲಕ್ಷಣೇ|*
*ಸ್ನಾಯತ್ ತತ್ವಾರ್ಥ ಭಾವೇನ ತೀರ್ಥ ನಾಮಾ ಸ ಉಚ್ಯತೇ||*

*ತತ್ವಮಸಿ, ಪ್ರಜ್ಞಾನಂ ಬ್ರಹ್ಮ, ಶಿವೋಹಮ್  ಎಂಬವು ಜ್ಞಾನಗಳ ತ್ರಿವೇಣೀ ಸಂಗಮ. ಆ ಸಂಗಮರೂಪವಾದ ತೀರ್ಥದಲ್ಲಿ ತತ್ತ್ವಾರ್ಥವನ್ನು ತಿಳಿಯಬೇಕೆಂಬ ಅಪೇಕ್ಷೆಯಿಂದ ಯಾವ ವ್ಯಕ್ತಿಯು ಸ್ನಾನ ಮಾಡುತ್ತಾರೋ ಅವರು ತೀರ್ಥ ಎಂಬ ಹೆಸರಿಂದ ಕರೆಯಲ್ಪಡುತ್ತಾರೆ.*

*ಆಶ್ರಮ ನಾಮ ಆಶ್ರಮ ಗ್ರಹಣೀ ಪ್ರೌಢಃ ಆಶಾಪಾಶ ವಿವರ್ಜಿತಃ |*
*ಯಾತಾಯಾತ ವಿನಿರ್ಮುಕ್ತ ಏತದಾಶ್ರಮ ಲಕ್ಷಣ ||*

*ಯಾವ ವ್ಯಕ್ತಿಯ  ಹೃದಯದಿಂದ ಆಸೆ, ಮಮತೆ, ಮೋಹ… ಇತ್ಯಾದಿ ಬಂಧನಗಳು ಸಂಪೂರ್ಣವಾಗಿ ನಾಶವಾಗಿರುತ್ತವೋ, ಆಶ್ರಮದ ನಿಯಮಗಳನ್ನು ಧರಿಸಲು ದೃಢಮನಸ್ಕನಾಗಿರುತ್ತಾರೋ ಮತ್ತು ಸಂಪೂರ್ಣ ವಿರಕ್ತನಾಗಿರುತ್ತಾರೋ ಅವರಿಗೆ ‘ಆಶ್ರಮ’ ಎಂಬ ಉಪಾಧಿ.*

*ವನ ನಾಮ ದೀಕ್ಷೆ ಸುರಮ್ಯನಿರ್ಜನೇದೇಶೇ ವಾಸಂ ನಿತ್ಯಂ ಕರೋತಿ ಯಃ|*
*ಆಶಾಪಾಶ ವಿನಿರ್ಮುಕ್ತೋ ವನ ನಾಮ ಸ ಉಚ್ಯತೇ||*

*ಯಾವ ಮನುಷ್ಯನು ಸುಂದರವಾದ, ಶಾಂತವಾದ ಮತ್ತು ನಿರ್ಜನವಾದ ವನದಲ್ಲಿ ವಾಸ ಮಾಡುತ್ತಾ, ಪ್ರಪಂಚದ ಬಂಧನಗಳಿಂದ ಸಂಪೂರ್ಣವಾಗಿ ವಿಮುಕ್ತನಾಗಿರುತ್ತಾನೋ ಅವರ ಹೆಸರು ‘ವನ’ ಎಂದು.*

*ಅರಣ್ಯ ನಾಮ ಅರಣ್ಯೇ ಸಂಸ್ಥಿತೋ ನಿತ್ಯ ಆನಂದಂ ನಂದನೇವನೇ|*
*ತ್ವಕ್ತಾ ಸರ್ವಮಿದಂ ವಿಶ್ವಂ ಅರಣ್ಯಂ ಲಕ್ಷಣಂ ಕಿಲ ||*

*ಯಾರು ಪ್ರಾಪಂಚಿಕವಾದ ಸರ್ವವನ್ನೂ ತ್ಯಜಿಸಿ ಅರಣ್ಯದಲ್ಲಿ ವಾಸಮಾಡುತ್ತಾ (ನಂದನವನದಲ್ಲಿ ವಾಸಮಾಡುತ್ತಾ) ಆನಂದವನ್ನು ಸರ್ವದಾ ಅನುಭವಿಸುತ್ತಲಿರುತ್ತಾರೋ ಅವರಿಗೆ ‘ಅರಣ್ಯ’ ಎಂದು ಹೆಸರು.*

*ಗಿರಿ ನಾಮ ವಾಸೋ ಗಿರಿವರೇ ನಿತ್ಯಂ ಗೀತಾಭ್ಯಾಸೇ ಹಿ ತತ್ಪರಃ |*
*ಗಂಭೀರಾಚಲ ಬುದ್ಧೆಶ್ಚ ಗಿರಿ ನಾಮ ಸ ಉಚ್ಯತೇ ||*

*ಯಾರು ಗೀತಾಭ್ಯಾಸದಲ್ಲಿ ತತ್ಪರರಾಗಿ, ಎತ್ತರವಾದ ಪರ್ವತಗಳ ಶಿಖರಗಳ ಮೇಲೆ ವಾಸಮಾಡುತ್ತಾ, ಗಂಭೀರವಾದ ಮತ್ತು ನಿಶ್ಚಿತವಾದ ಬುದ್ಧಿಯನ್ನು ಹೊಂದಿರುತ್ತಾರೋ ಅವರಿಗೆ ‘ಗಿರಿ’ ಎಂದು ಹೆಸರು.*

*ಪರ್ವತ ನಾಮ ವಸೇತ್ಪರ್ವತ ಮೂಲೇಷು ಪ್ರೌಢೋ ಯೋ ಧ್ಯಾನತತ್ಪರಃ |*
*ಸಾರಾಸಾರಂ ವಿಚಾನಾತಿ ಪರ್ವತಃ ಪರಿಕೀರ್ತೀತಃ ||*

*ಸಮಾಧಿಸ್ಥರಾಗಿ ಯಾರು ಪರ್ವತಗಳ ತಪ್ಪಲು ಪ್ರದೇಶಗಳಲ್ಲಿ ವಾಸಮಾಡುತ್ತಾ, ಸತ್ಯಾಸತ್ಯಗಳ ಜ್ಞಾನ ಹೊಂದಿರುತ್ತಾರೋ ಅವರಿಗೆ ‘ಪರ್ವತ’ ಎಂದು ಹೆಸರು.*

*ಸಾಗರ ನಾಮ ವಸೇತ್ಸಾಗರ ಗಂಭಿರೇ ಘನ ರತ್ನ ಪರಿಗ್ರಹಃ |*
*ಮರ್ಯಾದದಶ್ಚಾನ ಲಂಘ್ಯೇತ ಸ ಸಾಗರಃ ಪರಿಕೀರ್ತಿತಃ ||*

*ಸಮುದ್ರದ ಸಮೀಪದಲ್ಲಿ ವಾಸ ಮಾಡುತ್ತಾ ಯಾರು ಅಧ್ಯಾತ್ಮ ಶಾಸ್ತ್ರದ ಉಪದೇಶ ಗ್ರಹಣ ಮಾಡುತ್ತಾರೋ ಮತ್ತು ಆಶ್ರಮ ನಿಯಮಗಳನ್ನು ಸ್ವಲ್ಪವೂ ಉಲ್ಲಂಘಿಸುವುದಿಲ್ಲವೋ ಅವರು ಸಮುದ್ರಕ್ಕೆ ಸಮಾನರಾದುದರಿಂದ ‘ಸಾಗರ’ ಎಂದು ಕರೆಯಲ್ಪಡುತ್ತಾರೆ.*

*ಪುರೀ ನಾಮ ಜ್ಞಾನ ತತ್ತ್ವೇನ ಸಂಪೂರ್ಣಃ ಪೂರ್ಣ ತತ್ತ್ವೇ ಪದೇ ಸ್ಥಿತಃ |*
*ಪರಬ್ರಹ್ಮರತೋ ನಿತ್ಯಂ ಪುರೀ ನಾಮ ಸ ಉಚ್ಯತೇ ||*

*‘ಪುರೀ’ ಎಂದರೆ ತತ್ವಜ್ಞಾನದಿಂದ ಪೂರ್ಣನಾಗಿರುವುದು, ಪೂರ್ಣಪದಗಳಲ್ಲಿ ಸ್ಥಿತನಾಗಿರುವುದು, ಪರಬ್ರಹ್ಮ ಚಿಂತನೆಯಲ್ಲಿ ನಿರತನಾಗಿರುವುದು. ಈ ರೀತಿ ನಿರತರಾಗಿರುವ ಸನ್ಯಾಸಿಗಳು ‘ಪುರೀ’ ಎಂಬ ಪದವಿಗೆ ಅಧಿಕಾರಿಯಾಗುತ್ತಾರೆ.*

ಒಣ ಕೊಬ್ಬರಿಯಿಂದ ಸಿಗುವ ಲಾಭ ತಿಳಿದರೆ ಪ್ರತಿ ದಿನ ತಪ್ಪದೇ ತಿನ್ನುತ್ತೀರಿ .!!!

ಒಂದು ಚಿಕ್ಕ ತುಂಡು ಒಣಕೊಬ್ಬರಿಯನ್ನು ಸೇವಿಸುವುದರಿಂದ ಏನೆಲ್ಲ ಲಾಭಗಳಿವೆ ಹಾಗೂ ಯಾವೆಲ್ಲ ರೋಗಗಳಿಗೆ ಇದು ಒಳ್ಳೆಯದು ಎಂದು ತಿಳಿಯೋಣ ಬನ್ನಿ

ಸಾಮಾನ್ಯವಾಗಿ ಈಗ ಕಂಡು ಬರುವ ಮುಖ್ಯ ಆರೋಗ್ಯ ಸಮಸ್ಯೆಗಳೆಂದರೆ ನಿಶ್ಶಕ್ತಿ,ಆಯಾಸ ,ಗಂಟುಗಳಲ್ಲಿ ನೋವು,ಸೊಂಟ ನೋವು,ರಕ್ತಹೀನತೆ,ಅಜೀರ್ಣ,ಕೂದಲು ಉದುರುವುದು,ಕಡಿಮೆ ರೋಗ ನಿರೋಧಕ ಶಕ್ತಿಯನ್ನು ಹೊಂದಿರುವುದು,ಜ್ಞಾಪಕ ಶಕ್ತಿಯ ತೊಂದರೆ ಇದಕ್ಕಾಗಿ ಹಾಗೂ ಇದನ್ನು ಸರಿಪಡಿಸಿಕೊಳ್ಳಲು ಹಲವಾರು ಮೆಡಿಸಿನ್ ಟ್ಯಾಬ್ಲೆಟ್ ಗಳ ಸೇವನೆ ಕೂಡ ಮಾಡಲಾಗುತ್ತಿದೆ.ಆದರೆ ಫಲಿತಾಂಶ ಆ ಔಷಧಿಗಳನ್ನು ಸೇವಿಸುವ ತನಕ ಅಷ್ಟೇ ಆಮೇಲೆ ಯಾವುದೇ ರೀತಿಯ ಫಲಿತಾಂಶ ದೊರೆಯುವುದಿಲ್ಲ.

ಇದಕ್ಕಾಗಿ ನಾವು ನಮ್ಮ ಪ್ರತಿನಿತ್ಯದ ಆಹಾರದಲ್ಲಿ ಕೆಲವು ವಸ್ತುಗಳನ್ನು ತಪ್ಪದೇ ಸೇವಿಸಬೇಕು.ಇದರಲ್ಲಿ ಸಂಪೂರ್ಣವಾದ ಪೋಷಕಾಂಶಗಳಿದ್ದು ನಮ್ಮ ದೇಹದಲ್ಲಿನ ವಿಟಮಿನ್ ಕೊರತೆಗಳನ್ನು ಪೂರ್ಣಗೊಳಿಸಬೇಕು.

ಒಣಕೊಬ್ಬರಿಇದನ್ನು ಸೂಪರ್ ಫುಡ್ ಎಂದು ಕರೆದರು ತಪ್ಪಾಗುವುದಿಲ್ಲ.ಅಷ್ಟು ಪೋಷಕಾಂಶಗಳನ್ನು ಹೊಂದಿದೆ ಈ ಒಣಕೊಬ್ಬರಿ.ತುಂಬಾ ಜನರಿಗೆ ಒಣಕೊಬ್ಬರಿ ಎಂದರೆ ತುಂಬಾನೇ ಇಷ್ಟ.ಮನೆಯಲ್ಲಿ ಹಿರಿಯರು ಇದ್ದರೆ ಅವರು ಕೂಡ ಮಕ್ಕಳಿಗೆ ಒಣ ಕೊಬ್ಬರಿಯನ್ನು ತಿನ್ನಲು ಸಲಹೆ ಮಾಡುತ್ತಾರೆ.ಒಣ ಕೊಬ್ಬರಿಯಲ್ಲಿ ಒಳ್ಳೆಯ ಕೊಲೆಸ್ಟ್ರಾಲ್,ನಾರಿನಾಂಶ,ಕಾಪರ್,ಸೆಲೆನಿಯಂ ಎನ್ನುವ ಪೋಷಕಾಂಶಗಳಿವೆ.

ಹಾಗಿದ್ರೆ ಯಾವ ರೀತಿಯಲ್ಲಿ ಒಣಕೊಬ್ಬರಿಯನ್ನು ಸೇವಿಸಿದರೆ ಒಳ್ಳೆಯದು ಎಂದು ನೋಡುವುದಾದರೆ 20 ರಿಂದ 25 ಗ್ರಾಂ ನಷ್ಟು ಪ್ರತಿ ದಿನ ಒಂದು ಚಿಕ್ಕ ತುಂಡು ಒಣಕೊಬ್ಬರಿಯನ್ನು ಜಗಿದು ತಿನ್ನುವ ಅಭ್ಯಾಸವನ್ನು ರೂಢಿಸಿಕೊಳ್ಳಿ.ಇದನ್ನು ದಿನದಲ್ಲಿ ಯಾವುದೇ ಸಮಯದಲ್ಲಿ ಬೇಕಾದರೂ ಚಿಕ್ಕ ತುಂಡು ಒಣಕೊಬ್ಬರಿಯನ್ನು ನೀವು ಸೇವಿಸಬಹುದು.

ಒಣಕೊಬ್ಬರಿ ಪ್ರತಿನಿತ್ಯ ಸೇವಿಸುವುದರಿಂದ ಸಿಗುವ ಲಾಭಗಳೇನು ಹಾಗೂ ಯಾವ ರೀತಿಯ ರೋಗಗಳಿಗೆ ಒಣಕೊಬ್ಬರಿ ಸೇವನೆ ಒಳ್ಳೆಯದು ಎಂಬುದನ್ನು ನೋಡುವುದಾದರೆ.ಒಣಕೊಬ್ಬರಿ ಸೇವಿಸುವುದರಿಂದ ನಮ್ಮ ದೇಹದ ಮೂಳೆಗಳು ಬಲಶಾಲಿಯಾಗುತ್ತದೆ.ಇದು ನಮ್ಮ ಮೂಳೆಗಳ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.ಮೂಳೆಗಳ ಅಂಗಾಂಶ ಅಂದರೆ ಟಿಶುಗಳಲ್ಲಿ ಕಣಜ ಅಂಶಗಳು ಹೆಚ್ಚಾಗಿ ಇರುತ್ತದೆ.ಇದು ಕಡಿಮೆಯಾದರೆ ದೇಹದ ಯಾವುದೇ ಭಾಗಕ್ಕೂ ಇದು ತೊಂದರೆ ನೀಡಬಹುದು.

ಒಣ ಕೊಬ್ಬರಿಯ ಸೇವನೆಯಿಂದ ಈ ಮೂಳೆಗಳಲ್ಲಿನ ಖನಿಜಾಂಶ ಅಂದ್ರೆ ಮಿನರಲ್ಗಳ ಕಡಿಮೆ ಯನ್ನು ಪೂರ್ಣಗೊಳಿಸಿ ಕೊಳ್ಳಬಹುದು.ಒಣ ಕೊಬ್ಬರಿಯಿಂದ ದೊರೆಯುವ ಈ ಮಿನರಲ್ ದೇಹಕ್ಕೆ ಬೇಗನೆ ಸೇರಿಬಿಡುತ್ತದೆ.ಇದರಿಂದಾಗಿ ಆರ್ಥರೈಟಿಸ್ ನಂತಹ ತೊಂದರೆಯಿಂದ ಪಾರಾಗಬಹುದು.ಇನ್ನು ಕೆಲವರ ಗಂಟುಗಳಲ್ಲಿ ಕಟಕಟ ಶಬ್ದವಾಗುತ್ತಿರುತ್ತದೆ. ಇದು ಮೂಳೆಗಳಲ್ಲಿರುವ ಲೂಬ್ರಿಕೇನ್ಟ್ ನ ಕೊರತೆಯಿಂದ ಆಗುತ್ತದೆ.ಇಂಥವರು ಒಣಕೊಬ್ಬರಿಯ ಸೇವನೆ ಮಾಡಬೇಕು. ಒಣಕೊಬ್ಬರಿ ಯಲ್ಲಿ ನೈಸರ್ಗಿಕವಾದ ಎಣ್ಣೆ ಹಾಗೂ ಖನಿಜ ಇರುವುದರಿಂದ ಇದು ಮೂಳೆಗಳನ್ನು ಬಲಶಾಲಿಯಾಗಿಸಿ ಈ ಸಮಸ್ಯೆಯೂ ಸರಿಹೋಗುತ್ತದೆ.

ಮೆದುಳು ಚುರುಕಾಗಿರುತ್ತದೆ. ಒಣ ಕೊಬ್ಬರಿ ಸೇವನೆಯಿಂದ ನಿಮ್ಮ ಮೆದುಳು ಚುರುಕಾಗುತ್ತದೆ.ಇದರಿಂದ ಮೆದುಳಿನ ಫಂಕ್ಷನ್ ಇಂಪ್ರೂವ್ ಆಗುತ್ತದೆ.ನಿಮಗೆ ಜ್ಞಾಪಕ ಶಕ್ತಿ ಹೆಚ್ಚಾಗಬೇಕು ಹಾಗೂ ಮೆದುಳು ಚುರುಕಾಗಿ ಇರಬೇಕು ಅಂದರೆ ತಪ್ಪದೇ ನೀವು ಒಣ ಕೊಬ್ಬರಿಯನ್ನು ಸೇವಿಸಲೇಬೇಕು.ಪೈಲ್ಸ್ ಅಥವಾ ಮೂಲವ್ಯಾಧಿ ಸಮಸ್ಯೆಯೂ ಕೂಡ ಒಣಕೊಬ್ಬರಿ ಒಳ್ಳೆಯ ಔಷಧಿ.ಇದನ್ನು ಮೂಲವ್ಯಾಧಿ ಇರುವವರು ಸೇವಿಸುವುದರಿಂದ ಮೂಲವ್ಯಾಧಿ ಸಮಸ್ಯೆ ಸರಿಹೋಗುತ್ತದೆ.ಒಣ ಕೊಬ್ಬರಿಯಲ್ಲಿ ಹೇರಳವಾದ ನಾರಿನ ಅಂಶವಿರುವುದರಿಂದ ಇದು ಮಲಬದ್ಧತೆಯ ಸಮಸ್ಯೆಯನ್ನು ಕೂಡ ಸರಿಪಡಿಸುತ್ತದೆ.

ರಕ್ತಹೀನತೆಯ ಸಮಸ್ಯೆಯನ್ನು ಗುಣಪಡಿಸುತ್ತದೆ. ಮಹಿಳೆಯರಲ್ಲಿ ಸಾಮಾನ್ಯವಾಗಿ ರಕ್ತಹೀನತೆಯ ಸಮಸ್ಯೆ ಹೆಚ್ಚಾಗಿ ಕಾಡುತ್ತದೆ.ರಕ್ತಹೀನತೆಯ ಸಮಸ್ಯೆ ಹೆಚ್ಚಾದರೆ ಶರೀರದಲ್ಲಿ ಶಕ್ತಿಯಿರುವುದಿಲ್ಲ,ತಲೆಸುತ್ತು,ಮೊದಲಾದ ತೊಂದರೆ ಎದುರಾಗುತ್ತದೆ.ಇಂತಹ ಸಮಸ್ಯೆಯಿಂದ ಬಳಲುತ್ತಿರುವವರು ಒಣಕೊಬ್ಬರಿಯ ಸೇವನೆ ಮಾಡುವುದು ತುಂಬಾನೇ ಒಳ್ಳೆಯದು ಏಕೆಂದರೆ ಒಣ ಕೊಬ್ಬರಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಬ್ಬಿಣ ಅಂಶವಿದೆ ಆದ್ದರಿಂದ ಶರೀರದಲ್ಲಿ ರಕ್ತವನ್ನು ಹೆಚ್ಚು ಮಾಡಲು ಒಣಕೊಬ್ಬರಿಯ ಸೇವನೆಯನ್ನು ತಪ್ಪದೇ ಮಾಡಿ.

ಪದೇ ಪದೇ ತಲೆನೋವು ಅಥವಾ ಮೈಗ್ರೇನ್ ಸಮಸ್ಯೆಯಿಂದ ಬಳಲುತ್ತಿದ್ದರೆ ಒಣಕೊಬ್ಬರಿಯನ್ನು ಹೀಗೆ ಬಳಸಿದರೆ ಸಂಪೂರ್ಣವಾಗಿ ಸಮಸ್ಯೆಯಿಂದ ಪರಿಹಾರವನ್ನು ಕಂಡುಕೊಳ್ಳಬಹುದು.ತುರಿದ ಕೊಬ್ಬರಿ 20 ರಿಂದ 25 ಗ್ರಾಂ ತೆಗೆದುಕೊಳ್ಳಿ 20 ರಿಂದ 25 ಗ್ರಾಂ ನಷ್ಟು ಕಲ್ಲು ಸಕ್ಕರೆ ತೆಗೆದುಕೊಳ್ಳಿ.ಇವೆರಡನ್ನು ಸೂರ್ಯ ಉದಯಿಸುವುದಕ್ಕಿಂತ ಮೊದಲು ಸೇವಿಸಿ.ಜಗಿದು ಜಗಿದು ಸೇವಿಸಬೇಕು.ಈ ರೀತಿಯಾಗಿ ನೀವು ಪ್ರತಿನಿತ್ಯ ಸೇವಿಸಿದರೆ ಸ್ವಲ್ಪ ದಿನದಲ್ಲೇ ಎಷ್ಟೇ ಹಳೆಯದಾದ ತಲೆನೋವಿದ್ದರು ಹಾಗೂ ಮೈಗ್ರೇನ್ ಸಮಸ್ಯೆ ಕಡಿಮೆಯಾಗುತ್ತದೆ.

ಥೈರಾಡ್ ಸಮಸ್ಯೆ ಇರುವವರು ಒಣಕೊಬ್ಬರಿ ಸೇವನೆ ಮಾಡುವುದು ತುಂಬಾನೇ ಒಳ್ಳೆಯದು. ಥೈರಾಯ್ಡ್ ಸಮಸ್ಯೆ ದೇಹದಲ್ಲಿ ಸೆಲೆನಿಯಂ ಕೊರತೆಯಿಂದ ಉಂಟಾಗುತ್ತದೆ.ಒಣ ಕೊಬ್ಬರಿಯಲ್ಲಿ ಸೆಲೆನಿಯಂ ಅಧಿಕ ಪ್ರಮಾಣದಲ್ಲಿ ಇರುತ್ತದೆ.ನಿಮಗೆ ಹೈಪರ್ ಥೈರಾಯ್ಡ್ ಇರಲಿ ಅಥವಾ ಹೈಪೋ ಥೈರಾಯ್ಡ್ ಇರಲಿ ನೀವು ತಪ್ಪದೆ ಒಣಕೊಬ್ಬರಿ ಸೇವಿಸಿ.ಇದು ನಿಮ್ಮ ಥೈರಾಯ್ಡ್ ಹಾರ್ಮೋನನ್ನು ಸರಿಯಾಗಿ ಇಡುತ್ತದೆ.

ಇನ್ನು ಒಣಕೊಬ್ಬರಿ ಹೃದಯದ ಆರೋಗ್ಯಕ್ಕೂ ತುಂಬಾನೇ ಒಳ್ಳೆಯದು.ಇದರಲ್ಲಿರುವ ಫೈಬರ್ ಹೃದಯವನ್ನು ಆರೋಗ್ಯವಾಗಿಡುತ್ತದೆ.ಒಣಕೊಬ್ಬರಿಯ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.ಪುರುಷರಲ್ಲಿ ಹಾಗೂ ಮಹಿಳೆಯರಲ್ಲಿ ಬಂಜೆತನದ ಸಮಸ್ಯೆಯನ್ನು ನಿವಾರಿಸುತ್ತದೆ.ಇದರಿಂದಾಗಿ ಇಂತಹ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿ ನಿತ್ಯವೂ ತಪ್ಪದೆ ಒಣಕೊಬ್ಬರಿಯನ್ನು ಸೇವನೆ ಮಾಡುವುದು ಉತ್ತಮ.

ನಿದ್ರಾಹೀನತೆಯ ಸಮಸ್ಯೆಯನ್ನು ಸರಿಪಡಿಸುವ ಶಕ್ತಿ ಒಣಕೊಬ್ಬರಿಗಿದೆ.ಇಂತಹ ಸಮಸ್ಯೆಯಿಂದ ಬಳಲುತ್ತಿರುವವರು ರಾತ್ರಿ ಮಲಗುವ ಮೊದಲು ಒಂದು ಗ್ಲಾಸ್ ಬಿಸಿ ಹಾಲಿಗೆ ಎರಡು ಚಮಚ ತುರಿದ ಒಣ ಕೊಬ್ಬರಿಯನ್ನು ಹಾಕಿ ಕುಡಿಯುವುದರಿಂದ ಚೆನ್ನಾಗಿ ನಿದ್ರೆ ಬರುತ್ತದೆ.

ಒಣಕೊಬ್ಬರಿಯನ್ನು ಸೇವಿಸುವುದರಿಂದ ಅಜೀರ್ಣತೆಯ ಸಮಸ್ಯೆಯೂ ಕೂಡ ಸರಿ ಹೋಗುತ್ತದೆ.ಇನ್ನು ಒಣ ಕೊಬ್ಬರಿಯನ್ನು ಮಧುಮೇಹಿಗಳು ಕೂಡ ಸೇವನೆ ಮಾಡಬಹುದು.ಇದು ರಕ್ತದಲ್ಲಿ ಅಧಿಕ ಗ್ಲುಕೋಸ್ ಮಟ್ಟವನ್ನು ಕಡಿಮೆ ಮಾಡುತ್ತದೆ.ಕೊಬ್ಬರಿಯ ಸೇವನೆಯಿಂದ ಕೂದಲು ಉದುರುವ ಸಮಸ್ಯೆಯೂ ಬೇಗನೆ ಕಡಿಮೆಯಾಗುತ್ತದೆ.ಒಣಕೊಬ್ಬರಿ ಒಂದು ಒಳ್ಳೆಯ ಆ್ಯಂಟಿ ಬಯಾಟಿಕ್ ತರ ಕೆಲಸ ಮಾಡುತ್ತದೆ.ಇದರಿಂದಾಗಿ ಯಾವುದೇ ರೀತಿಯ ಅಲರ್ಜಿ ಅಥವಾ ಯಾವುದೇ ರೋಗಗಳು ನಮ್ಮ ದೇಹವನ್ನು ಸುಲಭವಾಗಿ ಸೇರಲು ಸಾಧ್ಯ ಇಲ್ಲ.

ಒಣ ಕೊಬ್ಬರಿ ನಮ್ಮ ಕಣ್ಣುಗಳ ಆರೋಗ್ಯಕ್ಕೂ ತುಂಬಾನೇ ಒಳ್ಳೆಯದು.ಇನ್ನು ಇದರಿಂದ ಹಲವಾರು ಲಾಭಗಳು ದೊರೆಯುತ್ತದೆ.ಇದರ ಸೇವನೆಯ ನಂತರ ಸ್ವಲ್ಪ ದಿನಗಳಲ್ಲಿಯೇ ನಿಮ್ಮ ದೇಹದಲ್ಲಿ ಒಳ್ಳೆಯ ವ್ಯತ್ಯಾಸ ಕಂಡುಬರುತ್ತದೆ.ನಮಗೆ ಯಾವುದೇ ರೋಗ ಇರಲಿ ಇಲ್ಲದಿರಲಿ ಇಂತಹ ಅದ್ಭುತವಾದ ಆಹಾರವನ್ನು ನಮ್ಮ ಪ್ರತಿನಿತ್ಯ ಆಹಾರ ಕ್ರಮದಲ್ಲಿ ಸೇರಿಸಿಕೊಂಡರೆ ನಮ್ಮ ದೇಹವು ಆರೋಗ್ಯವಾಗಿರುತ್ತದೆ. ಯಾವುದೇ ರೋಗವು ನಮ್ಮ ಹತ್ತಿರವೂ ಸುಳಿಯುವುದಿಲ್ಲ.
ನಮ್ಮ ಸ್ನೇಹಿತರ ಸಂಗ್ರಹ .ಅವರಿಗೆ ವಂದನೆಗಳು .

Friday 29 May 2020

🐩 ಸುಖವೆಂಬ ಮರೀಚಿಕೆಯ ಬೆನ್ನು ಹತ್ತಿ ಕೊನೆಗೆ ಜಿಗುಪ್ಸೆ ಹೊಂದಿದ್ದ ಯಯಾತಿ 🐦

ಮಹಾಭಾರತ ಮತ್ತು ಭಾಗವತ ಭಾರತ ಭೂಮಿಯ ಸಂಸ್ಕೃತಿ ಮತ್ತು ವೈಚಾರಿಕತೆಗಳ ಜೀವಂತ ಪ್ರತಿಬಿಂಬಗಳು. ಈ ಮಹಾಕಥಾನಕಗಳಲ್ಲಿ ಬರುವ ಸಹಸ್ರಾರು ಉಪಕಥೆಗಳು ಮಾನವ ಜೀವನದ ಅನೇಕ ಸಂಕೀರ್ಣ ಪಾತ್ರಗಳನ್ನು ಜನರ ಮುಂದಿಡುತ್ತವೆ. ಈ ಪಾತ್ರಗಳು ಅನೇಕ ಪಾಠಗಳನ್ನು ಹೇಳುತ್ತವೆ. ಭಾಗವತದಲ್ಲಿ ಬರುವ ಋಷಭದೇವ, ಅಜಾಮಿಳ, ವೃತ್ರಾಸುರ, ಗಜೇಂದ್ರ, ನಹುಷ ಮತ್ತು ಯಯಾತಿಯಂತಹ ವ್ಯಕ್ತಿತ್ವಗಳು ಚಿತ್ರಿಸುವ ಮಾನವ ಜೀವನದ ಸನ್ನಿವೇಶಗಳು ಮತ್ತು ಅವುಗಳಿಂದ ಹೊರಬಂದು ಮುಕ್ತನಾಗುವ ಪರಿ ಇಂದಿಗೂ ಪ್ರಸ್ತುತ.

ಅಧುನಿಕತೆಯ "Materialism"ನ ಮೃಗಜಲದ ಬೆನ್ನು ಹತ್ತಿ ಸುಖವನ್ನು ಅರಸುತ್ತ ನಡೆಯುತ್ತಿರುವ ನಮಗೆಲ್ಲರಿಗೂ ಅತ್ಯಂತ ಪ್ರಸ್ತುತವೆನಿಸುವ ಒಂದು ಕಥೆ ಯಯಾತಿ ರಾಜನದು. ಯಯಾತಿ ರಾಜ ಪುರಾಣ ಪ್ರಸಿದ್ಧ ನಹುಷ ರಾಜ ಮತ್ತು ಸಾಕ್ಷಾತ್ ಮಹಾದೇವ ಮತ್ತು ಪಾರ್ವತಿ ಮಾತೆಯ ಪುತ್ರಿಯಾದ ಅಶೋಕಸುಂದರಿಯರ ಸುಪುತ್ರ.

ನಹುಷ ರಾಜನಿಗೆ ಆರು ಜನ ಗಂಡು ಮಕ್ಕಳು. ನಹುಷನಿಗೆ ವಿರಜೆಯಲ್ಲಿ ಹುಟ್ಟಿದ ಹಿರಿಯವನಾದ ಯತಿ ಚಿಕ್ಕಂದಿನಿಂದಲೇ ವಿರಾಗಿ. ಚಿನ್ನದ ಚಮಚವನ್ನು ಕಚ್ಚಿಕೊಂಡು ಹುಟ್ಟಿದವನಾದರೂ ರಾಜಸಹಜವಾದ ಭೋಗ ಭಾಗ್ಯಗಳಲ್ಲಿ ಅವನಿಗೆ ಎಳ್ಳಷ್ಟೂ ಮೋಹವಿರಲಿಲ್ಲ. ಅವನು ಪಾರಂಪರಿಕವಾಗಿ ಒದಗಿದ ರಾಜ ಪಟ್ಟವನ್ನು ತಿರಸ್ಕರಿಸಿ ತಪಸ್ಸು ಮಾಡಲು ಅಡವಿಗೆ ಹೊರಟು ಹೋದ. ಎರಡನೇಯವನಾದ ಯಯಾತಿ ಮಹಾರಾಜನಾದ.

ಯಯಾತಿ ಮಹಾರಾಜನಾಗಿ ಇಡೀ ಜಗತ್ತನ್ನೇ ಗೆದ್ದು ಚಕ್ರವರ್ತಿ ಎನಿಸಿಕೊಳ್ಳುತ್ತಾನೆ. ತನ್ನ ನಾಲ್ಕು ತಮ್ಮಂದಿರನ್ನು ನಾಲ್ಕು ದಿಕ್ಕುಗಳ ರಾಜ್ಯಗಳನ್ನೆಲ್ಲಾ ಮೇಲ್ವಿಚಾರಣೆ ಮಾಡಲು ನೇಮಕ ಮಾಡುತ್ತಾನೆ. ಅಂತಹ ಚಕ್ರವರ್ತಿ ಕ್ಷತ್ರಿಯವೀರ ಯಯಾತಿ ಅಸುರರ ಗುರುವಾದ ಶುಕ್ರಾಚಾರ್ಯರ ಮಗಳು ದೇವಯಾನಿಯನ್ನು ಮದುವೆಯಾದನೆಂಬ ಕಥೆ ಅನೇಕರಿಗೆ ಗೊತ್ತು. ತನ್ನ ತಂದೆಯ ಶಿಷ್ಯನಾದ ಮತ್ತು ದೇವಗುರು ಬೃಹಸ್ಪತಿಯ ಮಗ ಕಚನಿಂದ ತಿರಸ್ಕೃತಳಾದ ದೇವಯಾನಿ ಮುಂಗೋಪಿ. ತನ್ನ ಅತಿ ಕೋಪದಿಂದಲೇ ಕಚನನ್ನು ಶಪಿಸಿ ಆತನಿಂದ ಮರುಶಪಿತಳಾದ ದೇವಯಾನಿ ಮತ್ತೊಮ್ಮೆ ತನ್ನ ಕೋಪದ ಪ್ರಭಾವದಿಂದಲೇ ತನ್ನ ಗೆಳತಿ ಮತ್ತು ದಾನವರಾಜ ವೃಷಪರ್ವನ ಮಗಳು ಶರ್ಮಿಷ್ಠೆಯನ್ನು ತನ್ನ ಬಟ್ಟೆಗಳನ್ನು ಹಾಕಿಕೊಂಡಿದ್ದಕ್ಕಾಗಿ ನಿಂದಿಸುತ್ತಾಳೆ. ರಾಜಕುವರಿ ಶರ್ಮಿಷ್ಠೆ, ದೇವಯಾನಿಯ ಅಹಂಕಾರದ ಮಾತುಗಳಿಂದ ಕೆರಳಿ, ಅವಳ ಬಟ್ಟೆಗಳನ್ನ ಕಿತ್ತುಕೊಂಡು ನಗ್ನಳಾದ ಅವಳನ್ನು ಪಾಳು ಬಿದ್ದ ಭಾವಿಯೊಂದಕ್ಕೆ ತಳ್ಳಿ ಬಿಟ್ಟು ಅಲ್ಲಿಂದ ಹೊರಟು ಹೋಗಿ ಬಿಡುತ್ತಾಳೆ.


ವನವಿಹಾರಕ್ಕೆ ಬಂದ ಚಕ್ರವರ್ತಿ ಯಯಾತಿ ಪಾಳುಭಾವಿಯಿಂದ ಬರುತ್ತಿದ್ದ ಆರ್ತನಾದವನ್ನು ಕೇಳಿ ಅಲ್ಲಿಗೆ ಹೋಗಿ ನೋಡಲು ನಗ್ನ ಸುಂದರಿಯಾದ ದೇವಯಾನಿ ಕಾಣುತ್ತಾಳೆ. ತನ್ನ ಹೊದಿಕೆಯನ್ನು ಅವಳಿಗೆ ಕೊಟ್ಟು, ಅವಳ ಕೈ ಹಿಡಿದು ಅವಳನ್ನು ಮೇಲಕ್ಕೆತ್ತುತ್ತಾನೆ. ತನ್ನ ಕೈಹಿಡಿದ ಮಹಾರಾಜ ಯಯಾತಿಯೇ ತನ್ನ ಪತಿ ಎಂದು ದೇವಯಾನಿ ಭಾವಿಸುತ್ತಾಳೆ. ದೇವಯಾನಿಯ ಅಪೂರ್ವ ಸೌಂದರ್ಯವನ್ನು ಕಂಡು ಪರವಶನಾದ ಯಯಾತಿ ಕೂಡ ಆಕೆ ತನಗೆ ಒಲಿದುದನ್ನು ತನ್ನ ಭಾಗ್ಯ ಎಂದುಕೊಳ್ಳುತ್ತಾನೆ.

ದೇವಯಾನಿ ಮನೆಗೆ ಮರಳಿ ತಂದೆಗೆ ಶರ್ಮಿಷ್ಠೆ ಮಾಡಿದ ಕೃತ್ಯವನ್ನು ಹೇಳಿ, ಅವಳ ತಂದೆಯ ರಾಜ್ಯವನ್ನು ತಾನು ಬಿಟ್ಟು ಹೋಗುವುದಾಗಿ ಹೇಳುತ್ತಾಳೆ. ಮಗಳ ಪ್ರೀತಿಯಲ್ಲಿ ಅಂಧರಾದ ಶುಕ್ರಾಚಾರ್ಯರು ಅವಳೊಂದಿಗೆ ದೇಶ ಬಿಟ್ಟು ಹೊರಟು ನಿಲ್ಲುತ್ತಾರೆ. ತನ್ನ ರಾಜ್ಯಕ್ಕೆ ಅವರ ಅಗತ್ಯವನ್ನು ಅರಿತ ವೃಷಪರ್ವ ಮಹಾರಾಜನು ಶುಕ್ರಾಚಾರ್ಯರಿಗೆ ತಮ್ಮ ತಪ್ಪುಗಳನ್ನು ಕ್ಷಮಿಸಬೇಕೆಂದು ಕೇಳಿಕೊಳ್ಳುತ್ತಾನೆ. ಕೊನೆಗೆ ವೃಷಪರ್ವನ ಮಗಳು ಶರ್ಮಷ್ಠೆ ದೇವಯಾನಿಯ ದಾಸಿಯಾಗಿರಲು ಒಪ್ಪಿಕೊಂಡ ಮೇಲೆ ಶುಕ್ರಾಚಾರ್ಯರು ದಾನವಗುರುವಾಗಿ ಮುಂದುವರೆಯಲು ಅಂಗೀಕರಿಸುತ್ತಾರೆ.

ಮುಂದೆ ದೇವಯಾನಿಯ ಇಚ್ಛೆಯಂತೆ ಶುಕ್ರಾಚಾರ್ಯರು ಅವಳನ್ನು ಚಕ್ರವರ್ತಿ ಯಯಾತಿಗೆ ಧಾರೆಯೆರೆದು ಕೊಡುತ್ತಾರೆ. ದೇವಯಾನಿಯ ಜೊತೆ ಅವಳ ದಾಸಿಯಾದ ಶರ್ಮಿಷ್ಠೆ ಕೂಡ ಚಕ್ರವರ್ತಿ ಯಯಾತಿಯ ರಾಜ್ಯಕ್ಕೆ ತೆರಳುತ್ತಾಳೆ. ದೇವಯಾನಿಯಂತಹ ಅದ್ಭುತ ಸುಂದರಿಯೊಂದಿಗೆ ಸಕಲ ಭೋಗ ಭಾಗ್ಯಗಳನ್ನು ಅನುಭವಿಸುತ್ತಿದ್ದರೂ ಯಯಾತಿಯ ಕಣ್ಣಿಗೆ ಶರ್ಮಿಷ್ಠೆ ಬಿದ್ದ ಮೇಲೆ ಅವನು ಅವಳಲ್ಲಿ ಕೂಡ ಅನುರಕ್ತನಾದ. ಅವಳು ಕೂಡ ಯಯಾತಿಯನ್ನು ಕಂಡು ಅವನ ಪ್ರೀತಿಯನ್ನು ಬಯಸುತ್ತಾಳೆ.

ದೇವಯಾನಿಗೆ ತಿಳಿಯದಂತೆ ಯಯಾತಿ ಶರ್ಮಿಷ್ಠೆಯನ್ನು ಕೂಡ ವರಿಸುತ್ತಾನೆ. ದೇವಯಾನಿಯಲ್ಲಿ ಯದು ಮತ್ತು ತುರ್ವಸುಗಳನ್ನು ಪುತ್ರರಾಗಿ ಪಡೆದರೆ, ಶರ್ಮಿಷ್ಠೆಯಲ್ಲಿ ದ್ರುಹ್ಯು, ಅನು ಮತ್ತು ಪುರುಗಳನ್ನು ಪುತ್ರರಾಗಿ ಪಡೆಯುತ್ತಾನೆ. ಆದರೆ ಯಯಾತಿ ಮತ್ತು ಶರ್ಮಿಷ್ಠೆಯರ ಸಂಗಮದ ವಿಷಯ ತಿಳಿದು ಕ್ರುದ್ಧಳಾದ ದೇವಯಾನಿ ತನ್ನ ತಂದೆ ಶುಕ್ರಾಚಾರ್ಯರಿಗೆ ದೂರು ನೀಡುತ್ತಾಳೆ. ಶುಕ್ರಾಚಾರ್ಯರು ಸಿಟ್ಟಿನಿಂದ ಯಯಾತಿಗೆ ವೃದ್ಧನಾಗಿ ಹೋಗೆಂದು ಶಪಿಸುತ್ತಾರೆ. ಯಯಾತಿ ಕ್ಷಮೆ ಬೇಡಲು ಬೇರೆ ಯಾರಾದರೂ ಅವನ ವೃದ್ಧಾಪ್ಯವನ್ನು ಪಡೆದುಕೊಂಡು ತಮ್ಮ ಯೌವನವನ್ನು ಅವನಿಗೆ ಕೊಡಲು ಒಪ್ಪಿದರೆ ಹಾಗಾಗಬಹುದು ಎಂಬ ಪರಿಹಾರವನ್ನು ಶುಕ್ರಾಚಾರ್ಯರು ನೀಡುತ್ತಾರೆ.

ಯಯಾತಿಗೆ ಇನ್ನೂ ಭೋಗ ಜೀವನದಲ್ಲಿ ಅಪಾರ ಆಸಕ್ತಿ. ಆದುದರಿಂದ ಆತನು ಆಗ ತಾನೇ ಯೌವನದ ಹೊಸ್ತಿಲಲ್ಲಿದ್ದ ತನ್ನ ಪುತ್ರರಿಗೆ ಅವರ ಯೌವನವನ್ನು ತನಗೆ ಧಾರೆಯೆರೆಯಲು ಕೇಳಿಕೊಳ್ಳುತ್ತಾರೆ. ಯದು ಮೊದಲಾದ ಬೇರಾವ ರಾಜಕುಮಾರರು ಅದನ್ನು ಒಪ್ಪುವುದಿಲ್ಲ. ಕೊನೆಯ ಪುತ್ರ ಪುರು ಮಾತ್ರ ತಂದೆಯ ಮಾತನ್ನು ಒಪ್ಪಿ ತನ್ನ ಯೌವನವನ್ನು ತಂದೆಗೆ ನೀಡಿ ತಾನು ವೃದ್ಧಾಪ್ಯವನ್ನು ಪಡೆದುಕೊಳ್ಳುತ್ತಾನೆ.

ಅನೇಕ ವರ್ಷಗಳ ಭೋಗ ಜೀವನದ ನಂತರವೂ ತಣಿಯದ ತನ್ನ ಭೋಗಾಸಕ್ತಿಯ ಮೇಲೆ ಕೊನೆಗೆ ಯಯಾತಿಗೆ ಜಿಗುಪ್ಸೆ ಉಂಟಾಗುತ್ತದೆ. ಯೌವನದ ಹೊಸ್ತಿಲಲ್ಲೇ ತನ್ನ ಮಗ ವೃದ್ಧಾಪ್ಯ ಅನುಭವಿಸುವಂತೆ ಮಾಡಿದ ಅವನಿಗೆ ಅಪಾರ ಪಶ್ಚಾತ್ತಾಪ ಉಂಟಾಗುತ್ತದೆ. ಕೊನೆಗೆ ಅವನು ತನ್ನ ವೃದ್ಧಾಪ್ಯವನ್ನು ಮಗನಿಂದ ವಾಪಸ್ಸು ಪಡೆದು ಅವನಿಗೆ ಯೌವನವನ್ನು ಮರಳಿಸಿ ಅವನಿಗೆ ರಾಜ್ಯಾಭಿಷೇಕ ಮಾಡಿ ತಾನು ತಪಸ್ಸಿಗೆ ಹೊರಟು, ಕೊನೆಗೆ ಲೌಕಿಕ ಲಾಲಸೆಗಳಿಂದ ಬಿಡುಗಡೆ ಪಡೆದು ಭಗವಂತನ ಕೃಪೆಯಿಂದ ಮುಕ್ತಿ ಪಡೆಯುತ್ತಾನೆ.


ಪುರಾಣ ಕಾಲದ ಯಯಾತಿ, ಸುಖವೆಂಬ ಮರೀಚಿಕೆಯ ಬೆನ್ನು ಹತ್ತಿ ತನ್ನ ಬದುಕಿನ ವೈಚಾರಿಕ ಮತ್ತು ಅಧ್ಯಾತ್ಮಿಕ ಆಯಾಮಗಳನ್ನು ತಿರಸ್ಕರಿಸಿ ಕೊನೆಗೆ ಜಿಗುಪ್ಸೆ ಹೊಂದುವ ಜನರ ಪ್ರತಿನಿಧಿಯಾಗುತ್ತಾನೆ. ಮಗನಿಂದ ತನ್ನ ಸುಖಕ್ಕಾಗಿ ಬಲಿದಾನ ಬಯಸುವ ಅನೇಕ ಮಹತ್ವಾಕಾಂಕ್ಷಿ ತಂದೆ ತಾಯಿಯರ ಪ್ರತಿನಿಧಿ ಕೂಡ ಆಗುತ್ತಾನೆ

*ಬದರೀ ಕ್ಷೇತ್ರ ಮಹಾತ್ಮೆ-* ✨

🏔️ಬದರಿಯು ಭರತಖಂಡದ ಸರ್ವಶ್ರೇಷ್ಠ ಪುಣ್ಯಕ್ಷೇತ್ರ.

🏔️ಇದರ ವರ್ಣನೆಯು ಮಹಾಭಾರತ, ಹರಿವಂಶ, ಭಾಗವತ ಮೊದಲಾದ ಇತಿಹಾಸ ಪುರಾಣಗಳಲ್ಲಿ ವಿಫುಲವಾಗಿ ಬಂದಿದೆ.

🏔️ಭರತಖಂಡದ ಆಧ್ಯಾತ್ಮಿಕ ರಾಜಧಾನಿ ಎಂಬುದಾಗಿ ಭಾಗವತವು ವರ್ಣಿಸಿದೆ. ಆದ್ದರಿಂದಲೇ ಬದರಿ ಯಾತ್ರೆಗೆ ಭಾರತದ ಧಾರ್ಮಿಕ ಜನತೆಯಲ್ಲಿ ಅತ್ಯುನ್ನತ ಸ್ಥಾನ ಲಭಿಸಿದೆ.

🏔️ಬದರಿಯು ಅತ್ಯುನ್ನತ ಕ್ಷೇತ್ರವಾದುದರಿಂದಲೇ ಇದರ ಸ್ವಾಮಿಯಾದ ನಾರಾಯಣನೇ ಸರ್ವೋತ್ತಮ ದೇವತೆಯಾಗಿರುವನು ಎಂಬುದು ಸಿದ್ಧವಾಗುವುದು.

🏔️ಇಲ್ಲಿ ಹರಿಯುವ ಗಂಗಾ(ಅಲಕಾನಂದಾ) ನದಿಯು ಜಗತ್ತಿನ ಸರ್ವಶ್ರೇಷ್ಠ ನದಿಯಾಗಿದೆ.

🏔️ಇದು ಮೂಲತಃ ನಾರಾಯಣನ ಪಾದೋದಕ ಎಂಬುದೂ ಗಮನಾರ್ಹ.

🏔️ಪ್ರಾಚೀನ ಯುಗಗಳ ಧ್ರುವ, ಪೃಥು, ಪ್ರಿಯವ್ರತ ಮೊದಲಾದ ಸಕಲ ರಾಜರುಗಳೂ, ನಾರದಾದಿಮುನಿಗಳೂ, ಬ್ರಹ್ಮಾದಿದೇವತೆಗಳೂ ಬಹಳವಾಗಿ ಸೇವಿಸಿದ ಕ್ಷೇತ್ರ ಎಂಬುದು ಇದರ ಅಸಾಧಾರಣ ವೈಶಿಷ್ಟ್ಯ.

🏔️ಧರ್ಮಪುತ್ರತ್ವೇನ ಅವತರಿಸಿದ ಶ್ರೀಮನ್ನಾರಾಯಣನು ನರನೊಂದಿಗೆ ಲೋಕಶಿಕ್ಷಣಕ್ಕಾಗಿ ತಪಸ್ಸು ಮಾಡಿದ ಸ್ಥಳ.

🏔️ಇಂದ್ರಪ್ರೇಷಿತರಾದ ಕಾಮಾದಿಗಳು ಪರಾಜಿತರಾದ ಸ್ಥಳ.
ಉರ್ವಶಿಯು ಶ್ರೀಮನ್ನಾರಾಯಣನಿಂದ ಜನ್ಮ ತಳೆದ ಸ್ಥಳ.

🏔️ಶ್ರೀಕೃಷ್ಣರೂಪದಿಂದ ಶ್ರೀಹರಿಯು ಘಂಟಾಕರ್ಣರಿಗೆ ಮೋಕ್ಷವಿತ್ತ ಸ್ಥಳ.

🏔️ಪಾಂಡವರು ಅವತರಿಸಿದ ಸ್ಥಳ.
ಪಾಂಡವರು ಬಾಲ್ಯವನ್ನು ಕಳೆದದ್ದಲ್ಲದೇ ತಮ್ಮ ತೀರ್ಥಯಾತ್ರೆಯ ಕಾಲದಲ್ಲೂ ಮಹಾಪ್ರಸ್ಥಾನದ ಸಮಯದಲ್ಲೂ ಸಂದರ್ಶಿಸಿದ ಸ್ಥಳ.

🏔️ಶ್ರೀಮದಾಚಾರ್ಯರು ತಮ್ಮ ಪ್ರಥಮ ಬದರೀ ಸಂದರ್ಶನ ಸಮಯದಲ್ಲಿ ಗೀತಾಭಾಷ್ಯವನ್ನು ಸಮರ್ಪಿಸಿದ್ದು,  ಪಾಠ ಹೇಳಿದ್ದು, ೪೮ ದಿನಗಳ ಕಾಲ ಕಾಷ್ಠಮೌನವ್ರತವನ್ನು, ಉಪವಾಸವನ್ನು ಆಚರಿಸಿದ್ದು, ಶಿಷ್ಯರಿಗೆ ಸಂದೇಶವಿತ್ತು ತೆರಳಿದ್ದು, ಶ್ರೀವೇದವ್ಯಾಸದೇವರನ್ನು ಸಂದರ್ಶಿಸಿ ಉತ್ತರಬದರಿಯಿಂದ ಮರಳುತ್ತಲೇ ಬ್ರಹ್ಮಸೂತ್ರಭಾಷ್ಯವನ್ನು ರಚಿಸಿದ್ದು, ಶ್ರೀಸತ್ಯತೀರ್ಥರು ಬ್ರಹ್ಮಸೂತ್ರಭಾಷ್ಯದ ಪ್ರಥಮ ಪ್ರತಿಯನ್ನು ಲೇಖನ ಮಾಡಿದ್ದು ಈ ಪವಿತ್ರ ಸ್ಥಳದಲ್ಲಿ ಎಂದು ಮಧ್ವವಿಜಯವು ವರ್ಣಿಸುವುದು.

🏔️ಬದರಿಯಲ್ಲಿ ಪರಸ್ಪರ  ಎದುರಿನಲ್ಲಿ ನಾರಾಯಣಪರ್ವತ ಮತ್ತು ನರಪರ್ವತಗಳು ಇವೆ. ಬದರಿನಾರಾಯಣನ ಗುಡಿ ಇರುವ ಪರ್ವತವೇ ನಾರಾಯಣ ಪರ್ವತ.

🏔️ಎದುರಿನದು ನರಪರ್ವತ.

🏔️ನಾರಾಯಣಪರ್ವತದ ಬುಡದಲ್ಲೇ ಅಲಕಾನಂದಾ ನದಿಯು ಭೋರ್ಗರೆಯುತ್ತಾ ಹರಿಯುತ್ತದೆ. ಅದರ ತೀರದಲ್ಲೇ ಶ್ರೀಮನ್ನಾರಾಯಣ ದೇವರ ಧ್ಯಾನಮಗ್ನ ಮೂರ್ತಿ ಇದೆ‌.

🏔️ದೇವತಾಪರಿವಾರವೂ ಇದೆ.

🏔️ಅಲಕಾನಂದೆಯು ಇಲ್ಲಿ ಸ್ಪರ್ಶಿಸಲೂ ಅಸಾಧವೆನ್ನುವಷ್ಟು ತಂಪಾಗಿದೆ.

🏔️ಅದರ ತೀರದಲ್ಲೇ ತಪ್ತಕುಂಡ ಇರುವುದು ವಿಶೇಷ. ಆಳ, ವೇಗ, ಶೀತದಿಂದಾಗಿ ಅಲಕಾನಂದೆಯ ಸ್ನಾನ ಇಲ್ಲಿ ಸಾಮಾನ್ಯರಿಗೆ ಎಂದೂ ಸಾಧ್ಯವಾಗುವಂತದ್ದಲ್ಲ.

🏔️ದೇವಾಲಯದ ಒಳಾಂಗಣವೇ ಅನಂತಮಠ ಎಂದು ಪ್ರಸಿದ್ಧವಾದ ಸ್ಥಳವು.

🏔️ಶ್ರೀಮದಾಚಾರ್ಯರು ಇಲ್ಲಿಯೇ ತಂಗಿದ್ದು ಗೀತಾಭಾಷ್ಯವನ್ನು ರಚಿಸಿದರು.

🏔️ಬದರಿಯಿಂದ ಸುಮಾರು ಮೂರು ಕಿಮೀ ದೂರದಲ್ಲಿ ಸರಸ್ವತೀ ಮತ್ತು ಅಲಕಾನಂದಾ ನದಿಗಳ ಸಂಗಮಸ್ಥಳವಾದ ಕೇಶವಪ್ರಯಾಗ ಎಂಬ ಅಪೂರ್ವ ಸ್ಥಳ ಇದೆ.

🏔️ಅದರ ಬಳಿಯಲ್ಲೇ ಬೆಟ್ಟದಲ್ಲಿ ಗಣೇಶ ಗುಹಾ ಎಂಬ  ಸ್ಥಳವಿದ್ದು, ಅದು ಮಹಾಭಾರತವನ್ನು ಗಣೇಶನು ಬರೆದ ಸ್ಥಳ ಎನ್ನುವರು.

🏔️ಇಲ್ಲಿಂದ ಕೆಲವು ಅಡಿಗಳಷ್ಟು ಎತ್ತರದಲ್ಲಿ ವ್ಯಾಸಗುಹೆ ಇದೆ.

🏔️ಇದನ್ನು ವ್ಯಾಸಾಶ್ರಮ ಎನ್ನುವರು. ಅಲ್ಲಿಂದ ಮೇಲೆ ಸುಮಾರು ಹತ್ತು ಕಿಮೀಗಳಷ್ಟು ದೂರದಲ್ಲಿ ಮುಚುಕುಂದ ಮಲಗಿದ್ದ, ಕಾಲಯವನ ಭಸ್ಮವಾದ, ಮುಚುಕುಂದನಿಗೆ ಶ್ರೀಕೃಷ್ಣನ ದರ್ಶನವಾದ ಮುಚುಕುಂದಗುಹೆ ಇದೆ.

🏔️ಕೇಶವಪ್ರಯಾಗದಲ್ಲಿ ಅಲಕಾನಂದೆಯನ್ನು ಸೇರುವ ಸರಸ್ವತಿಯು ಒಂದು ಕಿಮೀ ಮೊದಲು ಪರ್ವತದಿಂದ ನೂರಾರು ಅಡಿಗಳಷ್ಟು ಕೆಳಕ್ಕೆ ಧುಮುಕುವ ರುದ್ರರಮಣೀಯ ದೃಶ್ಯ ಕಾಣಬಹುದು.

🏔️ಅದು ಧುಮುಕುವ ಸ್ಥಳದಲ್ಲೇ ಭೀಮಸೇನ ದೇವರು ಮಹಾಪ್ರಸ್ಥಾನಕಾಲದಲ್ಲಿ ಒಂದು ಪರ್ವತಶಿಖರವನ್ನು ಮುರಿದಿಟ್ಟು ಸೇತುವೆಯಾಗಿ ನಿರ್ಮಿಸಿದ ಭೀಮಸೇತು ಎಂಬ ಸೇತುವೆ ಇದೆ.

🏔️ಜಗತ್ತಿನ ಯಾವ ಪ್ರಸಿದ್ಧ ಜಲಪಾತಕ್ಕೂ ಇಂತಹಾ ಏಕಶಿಲೆಯ ಸೇತುವೆ ಇಲ್ಲ.

🏔️ಇದು ಭೀಮಸೇನ ದೇವರ ಅಗಾಧ ಬಲ ಮತ್ತು ಜ್ಞಾನಗಳಿಗೆ ಪ್ರತ್ಯಕ್ಷ ಸಾಕ್ಷಿ.

🏔️ಈ ಸರಸ್ವತೀ ನದಿಯ ತೀರದ ಸ್ಥಳವೇ ಭಾಗವತದಲ್ಲಿ ಉಲ್ಲೇಖಿಸಲ್ಪಟ್ಟಿರುವ ಶಮ್ಯಾಪ್ರಾಸ ಎಂಬ ಭಾಗವತ ರಚನೆಯ ಪುಣ್ಯಸ್ಥಳ.

🏔️ಬದರಿಗಿಂತ ೨೦ ಕಿಮೀ ಮುಂಚಿತವಾಗಿ ಪಾಂಡುಕೇಶ್ವರ ಎಂಬ ಸ್ಥಳವಿದೆ.

🏔️ಅಲಕಾನಂದಾ ತೀರದ ಈ ಸ್ಥಳದಲ್ಲಿಯೇ, ಪಾಂಡುರಾಜನು ತನಗೆ ಕಿಂದಮೃಷಿಗಳಿಂದ ಶಾಪ ಬಂದ ನಂತರದ ಕಾಲದಲ್ಲಿ ವಾಸಿಸಿದ್ದನು.
ಅಲಕಾನಂದಾ ಸ್ನಾನಘಟ್ಟದ ಬಳಿ ಬ್ರಹ್ಮಕಪಾಲ, ಗರುಡಶಿಲಾ, ನಾರದಶಿಲಾ ಮೊದಲಾದ ಸ್ಥಳಗಳಿವೆ. ಬ್ರಹ್ಮಕಪಾಲದಲ್ಲಿ ಸಮರ್ಪಿಸಲ್ಪಡುವ ಪಿಂಡದಿಂದ ಪಿತೃಗಳಿಗೆ ಸದ್ಗತಿಯು ಪ್ರಾಪ್ತವಾಗುವುದೆಂಬ ಕಾರಣದಿಂದಾಗಿ ಗಯಾಕ್ಷೇತ್ರದ ವಿಷ್ಣುಪಾದ ಶ್ರಾದ್ಧದಂತೆ ಇಲ್ಲಿಯ ಶ್ರಾದ್ಧಕ್ಕೂ ತುಂಬಾ ಮಹತ್ತ್ವವನ್ನು ಶಾಸ್ತ್ರಗಳು ವಿಧಿಸಿವೆ.

🏔️ಪ್ರಸಿದ್ಧವಾದ ಎರಡು ಬದರಿಗಳಲ್ಲಿ ವಿಶಾಲಬದರಿಯೇ ನಾರಾಯಣಾಶ್ರಮದ ಬದರಿಯಾಗಿದೆ. ಭಾಗವತಾದಿಗಳಲ್ಲಿ ಇದನ್ನು ವಿಶಾಲಬದರಿ ಎಂದೇ ಕರೆಯಲಾಗಿದೆ.

🏔️ಶ್ರೀವೇದವ್ಯಾಸದೇವರು ಸಾಕ್ಷಾತ್ತಾಗಿ ನೆಲೆಸಿರುವ ಉತ್ತರಬದರೀ ಎಂಬ ಇನ್ನೂ ಶ್ರೇಷ್ಠವಾದ ಮತ್ತೊಂದು ಬದರಿಯ ಪ್ರಸ್ತಾಪ ಮಹಾಭಾರತದಲ್ಲೂ ಮಹಾಭಾರತತಾತ್ಪರ್ಯನಿರ್ಣಯದಲ್ಲೂ  ಬಂದಿದೆ.

🏔️ ನರಾಗಮ್ಯವಾದ ಆ ಬದರಿಯನ್ನು ಶ್ರೀಮದಾಚಾರ್ಯರು ಎರಡು ಬಾರಿ ಸಂದರ್ಶಿಸಿ ಅಲ್ಲಿ ಶ್ರೀಮನ್ನಾರಾಯಣ ದೇವರಿಂದಲೂ ಅದರ ಸಮೀಪದ ನಾರಾಯಣಾಶ್ರಮದಲ್ಲಿ ಶ್ರೀವೇದವ್ಯಾಸರಿಂದಲೂ ವಿಶೇಷವಾಗಿ ಅನುಗ್ರಹೀತರಾದ ವಿವರವು ಮಧ್ವವಿಜಯದಲ್ಲಿ ಇದೆ.

🏔️ಅಲ್ಲದೇ ಅವರು ಅದ್ಯಾಪಿ ಈ ಬದರಿಯಲ್ಲಿ ನೆಲೆಸಿರುವರೆಂದೂ ದೇವಮಾನದ ನೂರು ವರ್ಷಗಳ ನಂತರ ತಮ್ಮ ಮೂಲರೂಪದೊಂದಿಗೆ ಐಕ್ಯ ಹೊಂದುವರೆಂದೂ ಶ್ರೀರಾಜರು ತಮ್ಮ ಸರಸಭಾರತೀವಿಲಾಸದಲ್ಲಿ ತಿಳಿಸಿರುವರು.

🏔️ಇಷ್ಟೆಲ್ಲಾ ಮಹತ್ತ್ವದ ಪುಣ್ಯಭೂಮಿಯಾದ ಈ ದೇವಭೂಮಿಯಲ್ಲಿ ಕಾಲಿಟ್ಟರೂ ಪುಣ್ಯವೆನ್ನುತ್ತಾರೆ ಬಲ್ಲವರು.

📂📂 ತತ್ತ್ವಪ್ರತಿಪಾದನೆ 📋📋

ಉಪನಿಷತ್ತುಗಳನ್ನು ಪರಮ ಪ್ರಮಾಣವಾದ ಅಪೌರುಷೇಯ ಮಂತ್ರಗಳೆಂಬ ದೃಷ್ಟಿಯಿಂದ ಪರಿಶೀಲಿಸಿದಾಗ ಅವೆಲ್ಲವೂ ಒಂದೇ ತತ್ತ್ವವನ್ನು ಪ್ರತಿಪಾದಿಸು ವುವು ಎಂದು ಒಪ್ಪಿಕೊಳ್ಳಬೇಕಾಗುತ್ತದಾದರೂ ಭಾಷ್ಯಕಾರರ ದೃಷ್ಟಿಯಲ್ಲಿ ಅವುಗಳಲ್ಲಿ ಭಿನ್ನ ಭಿನ್ನ ಸಿದ್ಧಾಂತಗಳ ನಿರೂಪಣೆ ಇದೆ. ಬಾದರಾಯಣರು ವೇದಾಂತಸೂತ್ರದಲ್ಲಿ ಇದನ್ನು ಒಪ್ಪಿಕೊಂಡಿದ್ದಾರೆ. ಅನೇಕ ಸಿದ್ಧಾಂತಗಳ ಉಲ್ಲೇಖವಿದ್ದರೂ ಅವುಗಳೆಲ್ಲಕ್ಕೂ ಸಮಪ್ರಾಧಾನ್ಯ ದೊರೆತಿಲ್ಲ. ಕೆಲವು ಮಿಂಚಿನಂತೆ ಕಂಡು ಮಾಯವಾಗುವುವು. ಕೆಲವು ಸಂಗ್ರಹವಾಗಿ ಬಂದರೆ ಮತ್ತೆ ಕೆಲವು ಹಳೆಯ ತತ್ತ್ವಗಳನ್ನೇ ಸಮರ್ಥಿಸುವುವು. ಆದರೆ ಈ ಎಲ್ಲ ಸಂಶಯಗಳನ್ನೂ ಬದಿಗೊತ್ತಿ ಪರಿಶೀಲಿಸಿದಲ್ಲಿ ಪ್ರಧಾನವಾಗಿ ಅಲ್ಲಿ ಘೋಷಿತವಾಗಿ ರುವ ತತ್ತ್ವ ವೇದಾಂತ ದರ್ಶನವೆನ್ನಿಸಿಕೊಂಡಿರುವ ಬ್ರಹ್ಮತತ್ತ್ವ ಅಥವಾ ಬ್ರಹ್ಮ ಮತ್ತು ಆತ್ಮಗಳೆಂಬ ಆಧಾರಸ್ತಂಭಗಳ ಮೇಲೆ ನಿಂತಿರುವ ಭಾರತೀಯ ದರ್ಶನಸಾರ. ಉಪನಿಷತ್ತುಗಳು ಬ್ರಾಹ್ಮಣಗಳೊಂದಿಗೆ ಸೇರಿಕೊಂಡಿದ್ದರೂ ಇವುಗಳ ವಿಚಾರಧಾರೆ ಬೇರೆಯಾಗಿವೆ. ಬ್ರಾಹ್ಮಣಗಳು ಪ್ರತಿಪಾದಿಸುವ ಯಾಗಾದಿಗಳನ್ನು ಕಾಮ್ಯ ಕರ್ಮಗಳೆಂದು ಉಪನಿಷತ್ತುಗಳು ತಿರಸ್ಕರಿಸಿ ಅವುಗಳಿಂದ ಆತ್ಮೋದ್ಧಾರವಿಲ್ಲವೆನ್ನುತ್ತವೆ; ಮತ್ತು ಬಾಹ್ಯಯಜ್ಞ ಆತ್ಮಯಜ್ಞದ ಪ್ರತೀಕವೆಂದು ಹೇಳಿವೆ. ಹೀಗೆ ಉಪನಿಷತ್ತುಗಳ ಕಾಲಕ್ಕೆ ಭಾರತೀಯ ದರ್ಶನದ ಸರಣಿಯಲ್ಲಿ ಗಮನಾರ್ಹವಾದ ಬದಲಾವಣೆಯಾಗಿತ್ತು. ಅದಲ್ಲದೆ ಉಪನಿಷತ್ ರಹಸ್ಯವಾದ ವಿದ್ಯೆ ಎಂಬ ಅರ್ಥವನ್ನೂ ಹೊಂದಿದೆ. ಇದನ್ನು ಗುರುಮುಖೇನ ಪಡೆಯುವವ ಅಸಾಧಾರಣ ಶ್ರದ್ಧಾಭಕ್ತಿಗಳಿಂದ ಕೂಡಿದವನಾಗಿದ್ದು ಜ್ಞಾನಪಿಪಾಸುವೂ ಸಮ್ಯಗುಪಸನ್ನನೂ ಶಮಾನ್ವಿತನೂ ಆಗಿರಬೇಕು. ಈ ಆದರ್ಶವಿದ್ಯೆಗೆ ಆದರ್ಶ ಶಿಷ್ಯನೇ ಪಾತ್ರವೆಂದು ಕಟ್ಟುನಿಟ್ಟಾಗಿ ನಿರ್ದೇಶಿಸ ಲಾಗಿದೆ. ಮೇಲೆ ಹೇಳಿದ ಉಪನಿಷತ್ತುಗಳಲ್ಲಿ ಈ ಬಗೆಯ ಗುರುಶಿಷ್ಯ ಸಂವಾದಗಳೇ ಚಿತ್ರಿತವಾಗಿವೆ. ಪ್ರವಚನದಲ್ಲೂ ಕೆಲವು ಗೂಢತತ್ತ್ವಗಳು ಸೂತ್ರರೂಪದಲ್ಲಿವೆಯೇ ಹೊರತು ಸ್ಪಷ್ಟವಾದ ವಿವರಣೆ ಇಲ್ಲ. ಈ ಕಾರಣದಿಂದಲೇ ಅರ್ಥವೃತ್ತಿಗಳಲ್ಲಿ ಭಿನ್ನತೆಗೆ ಅವಕಾಶವಾಗಿದೆ. ಸಂಹಿತೆಗಳಂತೆ ಬೇರೆ ಬೇರೆ ಕಾಲದಲ್ಲಿ ಬೇರೆ ಬೇರೆ ದಾರ್ಶನಿಕರಿಂದ ಸಂಗ್ರಹವಾಗಿರುವುದು ಸಿದ್ಧಾಂತಗಳ ವ್ಯತ್ಯಾಸಕ್ಕೆ ಕಾರಣವಿರಬಹುದೆಂದು ವಿದ್ವಾಂಸರ ಅಭಿಪ್ರಾಯ.

ಛಾಂದೋಗ್ಯೋಪನಿಷತ್

ಇದು ಅತ್ಯಂತ ಪ್ರಾಚೀನವಾದುದೆಂದು ಎಲ್ಲರೂ ಒಪ್ಪುತ್ತಾರೆ. ಸಾಮವೇದಕ್ಕೆ ಸೇರಿದ್ದು ಪ್ರಾಚೀನತೆ, ಅರ್ಥಗಾಂಭೀರ್ಯ, ಬ್ರಹ್ಮಜ್ಞಾನ ಪ್ರತಿಪಾದನೆ-ಈ ದೃಷ್ಟಿಗಳಿಂದ ಇದು ಬಹಳ ಪ್ರೌಢವೂ ಪ್ರಮೇಯ ಬಹುಲವೂ ಆಗಿದೆ. ಎಂಟು ಅಧ್ಯಾಯಗಳೂ (ಪ್ರಪಾಠಕಗಳು) ಒಂದೊಂದರಲ್ಲೂ ಅನೇಕಾನೇಕ ಖಂಡಗಳೂ ಇವೆ. ಒಂದೊಂದು ಖಂಡದಲ್ಲೂ ಹಲವಾರು ಗದ್ಯ ಮಂತ್ರಗಳಿವೆ. ಈ ಖಂಡಗಳು ಬೇರೆ ಬೇರೆ ವಿಚಾರಗಳನ್ನು ವಿವೇಚಿಸುವುದರಿಂದ ಇವು ಬೇರೆ ಬೇರೆ ಕಾಲಕ್ಕೆ ಸೇರಿರಬಹುದೆಂದು ವಿಮರ್ಶಕರು ಭಾವಿಸುತ್ತಾರೆ. ಗೃಹಸ್ಥಜೀವನ ಬ್ರಹ್ಮಲೋಕ ಪ್ರಾಪ್ತಿಗೆ ವಿಹಿತಮಾರ್ಗವೆಂದು ಕೊನೆಯ ಖಂಡದಲ್ಲಿ ಹೇಳಿರುವುದರಿಂದ ಯಾಗಾದಿಗಳ ಪ್ರಾಧಾನ್ಯ ತಪ್ಪುವುದಕ್ಕೆ ಮುಂಚೆಯೇ ಇದು ಸಂಕುಲಿತವಾಗಿರಬೇಕೆಂದು ನಿರ್ಣಯಿಸಬಹುದು. ಪಶುಹಿಂಸೆಯೂ ಅನುಮೋದಿತ ವಾಗಿದೆ. ಆಚಾರ್ಯ ಪರಂಪರೆಯನ್ನೂ ಸಂಗ್ರಹವಾಗಿ ಕೊಡಲಾಗಿದೆ. ಮೊದಲ ಅಧ್ಯಾಯದಲ್ಲಿ ಪ್ರಣವ ಸ್ವರೂಪವನ್ನೂ ಸಾಮಗಾನದ ಗೂಢ ಸ್ವರೂಪವನ್ನೂ ಮಾರ್ಮಿಕವಾಗಿ ತಿಳಿಸಲಾಗಿದೆ. ಉದ್ಗೀಥ ವಿದ್ಯೆಯ ಮಹತ್ತ್ವದ ನಿರೂಪಣೆಯೊಂದಿಗೆ ಉದ್ಗೀಥ, ಪ್ರಣವಗಳ ತಾದಾತ್ಮ್ಯವನ್ನು ಹೇಳಲಾಗಿದೆ. ಎರಡನೆಯ ಅಧ್ಯಾಯದಲ್ಲಿ ವಿಶ್ವವೇ ಸಾಮವೆಂದು ಸಾರಿ ಪಂಚವಿಧ ಸಪ್ತವಿಧ ಸಾಮೋಪಾಸನೆಯನ್ನು ಬೋಧಿಸಲಾಗಿದೆ. 3ನೆಯ ಅಧ್ಯಾಯದಲ್ಲಿ ಮಧುವಿದ್ಯೆಯ ನಿರೂಪಣೆಯೊಂದಿಗೆ ಆದಿತ್ಯನೇ ದೇವಮಧು, ಅವನೇ ಆತ್ಮ ಎಂದು ಸಾರಲಾಗಿದೆ. ಶಾಂಡಿಲ್ಯ ವಿದ್ಯೆ ಉಪವರ್ಣಿತವಾಗಿದೆ. 4ನೆಯ ಅಧ್ಯಾಯದಲ್ಲಿ ರೈಕ್ವನೆಂಬ ಬ್ರಹ್ಮಜ್ಞನಿಂದ ಜಾನು ಶ್ರುತಿ ಪೌತ್ರಾಯಣ ರಾಜಬ್ರಹ್ಮೋಪದೇಶವನ್ನು ಪಡೆದ ಕಥಾನಿರೂಪಣೆ ಇದೆ. ಸಂವರ್ಗ ವಿದ್ಯೆ ಮತ್ತು ಉಪಕೋಸಲ ವಿದ್ಯೆಗಳ ಉಪದೇಶ, ಸತ್ಯಕಾಮ ಜಾಬಾಲನ ವೃತ್ತಾಂತ, ದೇವಯಾನದ ಮುಖಾಂತರ ಆತ್ಮ ಬ್ರಹ್ಮಲೋಕವನ್ನು ಸೇರುವ ಕ್ರಮದ ವರ್ಣನೆಗಳು ಬಂದಿವೆ. 5ನೆಯ ಅಧ್ಯಾಯದಲ್ಲಿ ಇಂದ್ರಿಯಗಳಲ್ಲೆಲ್ಲ ಪ್ರಾಣವೇ ಶ್ರೇಷ್ಠವೆಂದು ತಿಳಿಸಲಾಗಿದೆ. ಜೈವಲಿಯಲ್ಲಿ ಪಂಚಾಗ್ನಿ ವಿದ್ಯೆಯ ಉಪದೇಶವಿದೆ. ಐದು ಜನ ಜಿಜ್ಞಾಸುಗಳು ಕೇಕಯ ಅಶ್ವಪತಿಯಿಂದ ವೈಶ್ವಾನರವಿದ್ಯೆಯ ಉಪದೇಶವನ್ನು ಪಡೆದ ಸಂವಾದವಿದೆ. 6ನೆಯ ಅಧ್ಯಾಯದಲ್ಲಿ ಉದ್ದಾಲಕ ಆರುಣಿ ಮಗನಾದ ಶ್ವೇತಕೇತುವಿಗೆ ಆತ್ಮವಿದ್ಯೆಯನ್ನು ಬೋಧಿಸಿದ ಸುಂದರವಾದ ಸಂವಾದವಿದೆ. ವಿಶ್ವವಿಖ್ಯಾತವಾದ ತತ್ತ್ವಮಸಿ ಮಂತ್ರದ ಉಪದೇಶ ಇದರಲ್ಲಿಯೇ ಬರುತ್ತದೆ. 7ನೆಯ ಅಧ್ಯಾಯದಲ್ಲಿ ನಾರದನಿಗೆ ಸನತ್ಕುಮಾರ ಮಾಡಿದ ಆತ್ಮವಿದ್ಯೋಪದೇಶವಿದೆ. 8ನೆಯ ಅಧ್ಯಾಯದಲ್ಲಿ ದಹರ ವಿದ್ಯೆಯ ಉಪದೇಶವೂ ಪ್ರಜಾಪತಿಯಿಂದ ಇಂದ್ರ ಆತ್ಮೋಪದೇಶವನ್ನು ಪಡೆದ ವೃತ್ತಾಂತವೂ ಇದೆ. ಇದು ಈ ಉಪನಿಷತ್ತಿಗೆ ಶಿಖರಪ್ರಾಯವಾಗಿದೆ. ಈ ಉಪನಿಷತ್ತಿನಲ್ಲಿ ತಿಳಿದುಬರುವ ಅಂಶಗಳು ಹೀಗಿವೆ: ಋಗ್ವೇದ ಸಾಮವೇದಗಳನ್ನು ಇನ್ನೂ ಅಧ್ಯಯನ ಮಾಡುತ್ತಿದ್ದರು; ಸಾಮದ ಸ್ವರವನ್ನೂ ಋಷಿದೇವತೆಗಳನ್ನೂ ನಿರ್ಧರಿಸಲಾಗಿತ್ತು; ಸಾಮಗಾನದೊಂದಿಗೆ ವೀಣಾಗಾನವೂ ಇತ್ತು; ಮಾಂಸಭಕ್ಷಣವನ್ನು ನಿಷೇಧಿಸಲಾಗಿತ್ತು; ಗೋತ್ರ ಪದ್ಧತಿ ದೃಢವಾಗಿತ್ತು; ವ್ಯಾಕರಣದ ಅಧ್ಯಯನವನ್ನೂ ಇತರ ವಿದ್ಯೆಗಳ ಅಧ್ಯಯನವನ್ನೂ ಗುರುವಿನ ಆವಶ್ಯಕತೆಯನ್ನೂ ಸ್ಪಷ್ಟಪಡಿಸಲಾಗಿತ್ತು. ದೇವಕೀಪುತ್ರನಾದ ಕೃಷ್ಣನಿಗೆ ಘೋರ ಅಂಗೀರಸ ಅಧ್ಯಾತ್ಮವಿದ್ಯೆಯನ್ನು ಉಪದೇಶಿಸಿದನೆಂದು 3ನೆಯ ಅಧ್ಯಾಯದಲ್ಲಿ ಹೇಳಲಾಗಿದೆ.

    💐ಬೃಹದಾರಣ್ಯಕೋಪನಿಷತ್ 🌹🌹

ಈ ಹೆಸರು ಪಾಣಿನಿಗಿಂತ ಈಚೆಗೆ ಬಂದ ಶಬ್ದದಿಂದ ಬಂದಿದೆ. ಇದನ್ನು ಬೇರೆ ಬೇರೆ ಕಾಲದಲ್ಲಿದ್ದ ಅನೇಕರು ರಚಿಸಿದ್ದಾರೆ. ಇದರ ಸಂಗ್ರಹವಾದದ್ದು ಛಾಂದೋಗ್ಯಕ್ಕಿಂತ ಈಚೆಗೆ. ಇದು ಶುಕ್ಲ ಯಜುರ್ವೇದಕ್ಕೆ ಸೇರಿದುದು. ಇದರ ಅವಾಂತರ ಭಾಗಗಳನ್ನು ಶತಪಥ ಬ್ರಾಹ್ಮಣದ ಖಿಲಭಾಗಗಳೆಂದು ಎಣಿಸಲಾಗಿತ್ತು. ಆರು ಅಧ್ಯಾಯಗಳೂ ಒಟ್ಟು 57 ಬ್ರಾಹ್ಮಣಗಳೂ ಇವೆ. 5ನೆಯ ಅಧ್ಯಾಯದ ಆರಂಭದಲ್ಲಿ ಬರುವ ‘ಪೂರ್ಣಮದಃ, ಪೂರ್ಣಮಿದಂ’ ಎಂಬುದು ಇದರ ಶಾಂತಿಮಂತ್ರ. ಇದು ಗದ್ಯಮಯವಾಗಿದೆ. ಇದರಲ್ಲಿ ಭಿನ್ನ ಭಿನ್ನವಾದ ವಂಶ ವಿವರಣೆಗಳಿವೆ. ಮಧ್ಯೆ ಮಧ್ಯೆ ಪ್ರಮಾಣ ಶ್ಲೋಕಗಳಿವೆ. ಒಟ್ಟು 3 ಕಾಂಡಗಳೂ ಆರು ಅಧ್ಯಾಯಗಳೂ ಇವೆ. ಮೊದಲ ಅಧ್ಯಾಯದಲ್ಲಿ ಯಜ್ಞಾಶ್ವದ ವರ್ಣನೆ ಇದೆ. ಈ ಅಶ್ವವೇ ವಿರಾಟ್ಪುರುಷನೆಂದೂ ಆತ್ಮವಸ್ತುವೇ ಸರ್ವಕ್ಕಿಂತ ಶ್ರೇಷ್ಠವೆಂದೂ ಪ್ರೇಯವೆಂದೂ ತಿಳಿಸಲಾಗಿದೆ. ದ್ವಿತೀಯಾಧ್ಯಾಯದಲ್ಲಿ ದೃಪ್ತಬಾಲಾಕಿ, ಗಾಗರ್ಯ್‌ ಮತ್ತು ಅಜಾತಶತ್ರು-ಇವರಲ್ಲಿ ಆತ್ಮವಸ್ತುವನ್ನು ಕುರಿತು ನಡೆದ ಸಂವಾದವಿದೆ. ಇದಲ್ಲದೆ ಯಾಜ್ಞವಲ್ಕ್ಯ ಮತ್ತು ಮೈತ್ರೇಯಿ ಇವರ ಸುಪ್ರಸಿದ್ಧ ಸುಂದರ ಸಂವಾದವಿದೆ. ಸುಂದರವಾದ ಉಪಮಾನಗಳಿಂದ ಬ್ರಹ್ಮ ಸರ್ವಕ್ಕೂ ಏಕಾಯನವಾಗಿದೆ ಎಂಬುದನ್ನೂ ಜೇಡರಹುಳುವಿನ ನಿದರ್ಶನದಿಂದ ಭಗವಂತನೇ ಸಮಸ್ತಕ್ಕೂ ಕಾರಣ ಎಂಬುದನ್ನೂ ವರ್ಣಿಸಿ ಮಹೋನ್ನತ ಉಪದೇಶವನ್ನು ನೀಡಲಾಗಿದೆ. ಇದೇ ಅಧ್ಯಾಯದಲ್ಲಿ ಮಧುವಿಧ್ಯೆಯ ವಿವರಣೆಯೂ ಕೊನೆಯ ಭಾಗದಲ್ಲಿ ವಂಶಕ್ರಮ ನಿರೂಪಣೆಯೂ ಇವೆ. 3ನೆಯ ಅಧ್ಯಾಯದಲ್ಲಿ ಜನಕರಾಜನ ಸಭೆಯಲ್ಲಿ ಯಾಜ್ಞವಲ್ಕ್ಯರಿಗೆ ತತ್ತ್ವಜ್ಞರು ಪ್ರಶ್ನೆಗಳನ್ನು ಕೇಳಿ ಪರಾಭವ ಹೊಂದಿದ್ದು, ಗಾರ್ಗಿ ವಾಚಕ್ನವೀ ಎಂಬ ಬ್ರಹ್ಮವಾದಿನಿ ಈ ಚರ್ಚೆಯಲ್ಲಿ ಭಾಗವಹಿಸಿದ್ದು, ಕೊನೆಯಲ್ಲಿ ಯಾಜ್ಞವಲ್ಕ್ಯರಿಗೆ ಜನಕರಾಜನ ಸಂಭಾವನೆ ಸಲ್ಲುವುದು-ಇವನ್ನು ಸ್ವಾರಸ್ಯವಾಗಿ ಚಿತ್ರಿಸಲಾಗಿದೆ. 4ನೆಯ ಅಧ್ಯಾಯದಲ್ಲಿ ಜನಕನಿಗೆ ಯಾಜ್ಞವಲ್ಕ್ಯ ಮಾಡಿದ ಆತ್ಮತತ್ತ್ವ ವಿವರಣೆ ಈ ಉಪನಿಷತ್ತಿಗೇ ರತ್ನಪ್ರಾಯವಾಗಿದೆ. ಮೈತ್ರೇಯಿಯ ವೃತ್ತಾಂತವೂ ಬಂದಿದೆ. 5ನೆಯ ಅಧ್ಯಾಯದಲ್ಲಿ ಪೂರ್ಣಮಿದಂ ಎಂಬ ಮಂತ್ರದ ಆವೃತ್ತದಿಂದ ಪ್ರಾರಂಭವಾಗಿ ನೀತಿ, ಸೃಷ್ಟಿ, ಪರಲೋಕ ಇವುಗಳ ಅನೇಕ ವಿಚಾರಗಳಿವೆ. ದಯೆ, ದಾನ, ಧರ್ಮ ಇವುಗಳ ಪ್ರಶಂಸೆ ಇದೆ. 6ನೆಯ ಅಧ್ಯಾಯದಲ್ಲಿ ಛಾಂದೋಗ್ಯ ಉಪನಿಷತ್ತಿನಲ್ಲಿ ಬಂದಿರುವ ಆತ್ಮದ (ಪ್ರಾಣ) ಶ್ರೇಷ್ಠತೆಯನ್ನೇ ಪುನಃ ಪ್ರಸ್ತಾಪಿಸಿ ಪಂಚೇಂದ್ರಿಯ ಗಳನ್ನು ಕುರಿತ ರೂಪಕವನ್ನು ಕೊಡಲಾಗಿದೆ. ಇದರಲ್ಲೂ ಶ್ವೇತಕೇತು ಜೈವಲಿಗಳ ದಾರ್ಶನಿಕ ಸಂವಾದ, ಜೈವಲಿಯ ಪಂಚಾಗ್ನಿ ವಿದ್ಯೆಯ ಉಪದೇಶಗಳು ಇವೆ. ಈ ಉಪನಿಷತ್ತಿನಲ್ಲಿ ಗಮನಾರ್ಹ ಅಂಶಗಳು ಇವು; ದೇವತೆಗಳಲ್ಲೂ ವರ್ಣಭೇದಗಳನ್ನು ನಿರೂಪಿಸಲಾಗಿದೆ. ಪುಷನ್ ಶೂದ್ರ, ಅಗ್ನಿ ಮಾತ್ರ ಬ್ರಾಹ್ಮಣ, ಇಂದ್ರಾದಿಗಳು ಕ್ಷತ್ರಿಯರು, ವೈಶ್ಯರು, ಕ್ಷತ್ರಿಯರು ಸರ್ವಶ್ರೇಷ್ಠರೆಂದೂ ಬ್ರಾಹ್ಮಣಹಿಂಸೆ ಮಹಾಪಾಪವೆಂದೂ ಹೇಳಲಾಗಿದೆ. ಅಹಿಂಸಾ ಪರಮೋಧರ್ಮಃ ಎಂಬ ತತ್ತ್ವ ಬೆಳೆಯುತ್ತ ಇತ್ತು. ಇದರಲ್ಲಿ ಉದಾಹರಿಸಲ್ಪಟ್ಟಿರುವ ಶ್ಲೋಕಗಳು ಸಂಹಿತೆಗಳಿಂದ ತೆಗೆದುಕೊಂಡವಾಗಿರದೆ ಬ್ರಹ್ಮವಾದಿಗಳೂ ಆಚಾರ್ಯರೂ ರಚಿಸಿದವಾಗಿವೆ.

    🎉🎉ಶ್ವೇತಾಶ್ವತರೋಪನಿಷತ್ 🎊🎊

ಇದು ಕೃಷ್ಣ ಯಜುರ್ವೇದಕ್ಕೆ ಸೇರಿದುದಾಗಿದ್ದು ಆರು ಅಧ್ಯಾಯಗಳಿಂದ ಕೂಡಿದೆ. ಪದ್ಯಮಯವಾಗಿದೆ. ಸಹನಾವವತು ಎಂಬುದು ಇದರ ಶಾಂತಿಮಂತ್ರ, ವಿಚಾರಪುರಿತವಾದ 113 ಮಂತ್ರಗಳಿವೆ. ಜಗತ್ಕಾರಣವಾವುದು ? ನಾವು ಎಲ್ಲಿಂದ ಬಂದೆವು ? ಯಾರ ಕಟ್ಟಳೆಗೊಳಗಾಗಿ ಸುಖ ದುಃಖಗಳುಂಟಾಗುವುವು ? ಎಂಬ ಪ್ರಶ್ನೆಗಳ ಮಾಲೆಯಿಂದ ಇದು ಪ್ರಾರಂಭವಾಗಿದೆ. ಜೀವ, ಬ್ರಹ್ಮರ (ಜ್ಞ, ಅಜ್ಞ) ವಿಚಾರ ಪ್ರಸ್ತುತವಾಗಿದೆ. 2ನೆಯ ಅಧ್ಯಾಯದ ಯೋಗದ, ಯೋಗಾನುಭವದ ನಿರೂಪಣೆ ಇದೆ. ಇದು ಪಾತಂಜಲಯೋಗದ ಪೀಠಿಕೆಯಂತಿದೆ. 3-4ನೆಯ ಅಧ್ಯಾಯಗಳಲ್ಲಿ ಬ್ರಹ್ಮತತ್ತ್ವ, ಆತ್ಮತತ್ತ್ವಗಳ ಸ್ವರೂಪ ನಿರೂಪಣೆ ಇದೆ. ಬ್ರಹ್ಮವನ್ನು ಮಹೇಶ್ವರ ಎಂದು ಕರೆಯಲಾಗಿದೆ. 5ನೆಯ ಅಧ್ಯಾಯದಲ್ಲಿ ಕಪಿಲ ಋಷಿಯ ಸಾಂಖ್ಯತತ್ತ್ವದ ಉಲ್ಲೇಖವಿದೆ. ಆದರೆ ನಿರೀಶ್ವರ ಸಿದ್ಧಾಂತದ ಛಾಯೆ ಇಲ್ಲ. ಏಕೈಕ ಕಾರಣನೂ ಸರ್ವಾಧಿಪನೂ ಆದ ಅದ್ವಿತೀಯನನ್ನು ಅರಿಯುವುದರಿಂದ, ಮುಕ್ತಿ ಎಂದು ಹೇಳಲಾಗಿದೆ. 6ನೆಯ ಅಧ್ಯಾಯದಲ್ಲಿ ಕರ್ಮಸಿದ್ಧಾಂತದ ನಿರೂಪಣೆ ಇದ್ದು ಕರ್ಮಕ್ಷಯದಿಂದ ಮೋಕ್ಷಪ್ರಾಪ್ತಿ ಎಂದೂ ಮಹೇಶ್ವರ ಕರ್ಮಚಕ್ರದಿಂದ ಹೊರಗಿರುವ, ಕರ್ಮಾಧ್ಯಕ್ಷನೆಂದೂ ಶ್ವೇತಾಶ್ವತರ ಉಪದೇಶಿಸಿದ್ದಾನೆ. ಪರಮಾತ್ಮನ ಸಾಕ್ಷಾತ್ಕಾರಕ್ಕೆ ಎಲ್ಲಕ್ಕಿಂತಲೂ ಮೊದಲಾಗಿ ಗುರುಭಕ್ತಿ ಇರಬೇಕೆಂಬುದನ್ನು ಕೊನೆಯಲ್ಲಿ ಒತ್ತಿಹೇಳಲಾಗಿದೆ.

      🎭🎭ಕೌಷೀತಕಿ ಉಪನಿಷತ್ 🎋🎋

ಕೌಷೀತಕಿ ಎಂಬ ಆಚಾರ್ಯರಿಂದ ಇದಕ್ಕೆ ಈ ಹೆಸರು. ಋಗ್ವೇದಕ್ಕೆ ಸೇರಿದ್ದು ಗದ್ಯಮಯವಾಗಿದೆ. 4 ಅಧ್ಯಾಯಗಳಿವೆ. ವಾಙ್ಮೇ ಮನಸಿ ಪ್ರತಿಷ್ಠಿತಾ ಎಂಬುದು ಇದರ ಶಾಂತಿಮಂತ್ರ. ಮೊದಲ ಅಧ್ಯಾಯದಲ್ಲಿ ದೇವಯಾನದ ವಿಸ್ತಾರವಾದ ವರ್ಣನೆ ಇದೆ. ದೇವಯಾನದಲ್ಲಿ ಹೋಗುವವ ಬ್ರಹ್ಮಲೋಕಕ್ಕೆ ಸೇರುವ ರೀತಿ ವಿವರವಾಗಿ ಬಂದಿದೆ. 2ನೆಯ ಅಧ್ಯಾಯದಲ್ಲಿ ಪ್ರಾಣವಿದ್ಯೆಯ ವಿವೇಚನೆ ಇದೆ. ಸಂನ್ಯಾಸಾಶ್ರಮದ ಪ್ರಶಂಸೆಯೂ ಸಾಧಕರು ಅನುಸರಿಸಬೇಕಾದ ವ್ರತಗಳ ವಿವರಣೆಯೂ ಇವೆ. 3-4ನೆಯ ಅಧ್ಯಾಯಗಳಲ್ಲಿ ಬೃಹದಾರಣ್ಯಕ ಮತ್ತು ಛಾಂದೋಗ್ಯೋಪನಿಷತ್ತಿನ ಪ್ರಸಂಗಗಳಿವೆ.


♨️♨️ ಮೈತ್ರಾಯಣೀಯೋಪನಿಷತ್ 🌋🌋

ಕೃಷ್ಣಯಜುರ್ವೇದಕ್ಕೆ ಸೇರಿದ್ದು 7 ಅಧ್ಯಾಯಗಳ ನ್ನೊಳಗೊಂಡಿದೆ. ಶಾಕಾಯನರಿಗೆ ಮೈತ್ರೀ ಋಷಿ ಉಪದೇಶಿಸಿದ ಬ್ರಹ್ಮ ತತ್ತ್ವವನ್ನು ಬೃಹದ್ರಥನಿಗೆ ಹೇಳಲಾಗಿದೆ. ಜ್ಯೋತಿಶ್ಶಾಸ್ತ್ರದ ವಿಚಾರವಾಗಿ ಉಲ್ಲೇಖವಿರುವುದರಿಂದ ಇದರ ಕಾಲವನ್ನು ಪ್ರ.ಶ.ಪು. 1900 ಎಂದು ವಿಮರ್ಶಕರು ನಿರ್ಣಯಿಸಿದ್ದಾರೆ. ಇದರಲ್ಲಿ ಇತರ ಉಪನಿಷತ್ತುಗಳ ವಾಕ್ಯಖಂಡಗಳಿರುವುದರಿಂದ ಅವು ಇದಕ್ಕೂ ಪ್ರಾಚೀನವಾದವು ಗಳೆಂದು ತೀರ್ಮಾನಿಸಬಹುದು. ಇದರಲ್ಲಿ ಗಮನಿಸಬೇಕಾದ ಅಂಶಗಳು: ಚಂದ್ರವಂಶ ಸೂರ್ಯವಂಶಗಳನ್ನು ಬೇರೆ ಬೇರೆ ಹೇಳಿರುವುದು, ಜ್ಯೋತಿರ್ಗಣದ ನಿರೀಕ್ಷಣೆ ನಡೆಯುತ್ತಿದ್ದುದು, ಸಾಂಖ್ಯ ಸಿದ್ಧಾಂತದ ಪರಿಚಯವಿದ್ದುದು, ಪಾತಂಜಲ ಯೋಗಕ್ಕಿಂತ ಬೇರೆಯಾದ ಷಡಂಗಯೋಗದ ವಿಚಾರ ಪ್ರಸ್ತುತವಾಗಿರುವುದು, ತ್ರಿಮೂರ್ತಿಗಳನ್ನೂ ಅವರ ವಿಶಿಷ್ಟ ಗುಣಗಳನ್ನೂ ಹೇಳಿರುವುದು.


📙📙   ಉಳಿದ ಕೆಲವು ಉಪನಿಷತ್ತುಗಳ ಬಹುಸ್ಥೂಲ ಪರಿಚಯ 🛸🛸


ಹಿಂದೆ ವಿವರಿಸಿದ ಮುಖ್ಯ ಉಪನಿಷತ್ತುಗಳಲ್ಲದೆ ಉಳಿದ ಕೆಲವು ಉಪನಿಷತ್ತುಗಳ ಬಹುಸ್ಥೂಲ ಪರಿಚಯ ಹೀಗಿದೆ: ನಾರಾಯಣೀಯ: ಗಾಯತ್ರೀ ಮಂತ್ರದಂತೆಯೇ ಇತರ ದೇವತೆಗಳನ್ನು ಸ್ತುತಿಸುವ ಮಂತ್ರಗಳಿಂದ ಕೂಡಿ ಬಹಳ ದೀರ್ಘವಾಗಿದೆ. ಆತ್ಮಯಾಗದ ನಿರೂಪಣೆಯಿದೆ. ಕೈವಲ್ಯೋಪನಿಷತ್: ಶೈವಪರವಾಗಿದೆ. ಸಂನ್ಯಾಸಾಶ್ರಮ ಮತ್ತು ಗುರುವಿನ ಪ್ರಾಮುಖ್ಯ ಗಳನ್ನು ಒತ್ತಿಹೇಳುತ್ತದೆ. ಗೀತೆಯ ಶ್ಲೋಕಗಳು ಸೇರಿಕೊಂಡಿವೆ. ಜಾಬಾಲೋಪನಿಷತ್: ಶತರುದ್ರೀಯ ಜಪವನ್ನು ಇದು ವಿಧಿಸುತ್ತದೆ. ಇದೂ ಶಿವಪರವಾಗಿದೆ. ಬೃಹಜ್ಜಾಬಾಲ ಉಪನಿಷತ್: ಭಸ್ಮಧಾರಣೆಯ ಮಹತ್ತ್ವವನ್ನು ಕುರಿತದ್ದು. ಅನೇಕ ಪರಮಹಂಸರುಗಳ ಹೆಸರುಗಳನ್ನು ಉಲ್ಲೇಖಿಸಿದೆ. ಜಾಬಾಲೀ ಉಪನಿಷತ್: ಜೀವವನ್ನು ಪಶುವೆಂದೂ ಈಶನನ್ನು ಪಶುಪತಿ ಎಂದೂ ಕರೆಯಲಾಗಿದೆ. ನಾಮಜಪಕ್ಕೆ ಪ್ರಾಶಸ್ತ್ಯ ಕೊಡುತ್ತದೆ. ಮುಕ್ತಿಕೋಪನಿಷತ್: ಇದರಲ್ಲಿ ನೂರೆಂಟು ಉಪನಿಷತ್ತುಗಳನ್ನು ವಿಂಗಡಿಸಲಾಗಿದೆ. ಋಗ್ವೇದಕ್ಕೆ 10, ಶುಕ್ಲಯಜುರ್ವೇದಕ್ಕೆ 19, ಕೃಷ್ಣಯಜುರ್ವೇದಕ್ಕೆ 32, ಸಾಮವೇದಕ್ಕೆ 16, ಅಥರ್ವವೇದಕ್ಕೆ 31 ಸೇರಿವೆಯೆಂದು ತಿಳಿಸಿದೆ

🐚🐚ಮಾಂಡೂಕ್ಯೋಪನಿಷತ್ 💥💥

ಅಥರ್ವವೇದಕ್ಕೆ ಸೇರಿದ ಇದು ಅತ್ಯಂತ ಚಿಕ್ಕದಾಗಿದ್ದು ಕೇವಲ ಹನ್ನೆರಡು ಮಂತ್ರಗಳಿಂದ ಕೂಡಿದೆ. ಇದರಲ್ಲಿ ಓಂಕಾರದ ಮಹಿಮೆ, ಮನುಷ್ಯನ ಜಾಗ್ರತ್, ಸ್ವಪ್ನ, ಸುಷುಪ್ತಿ, ತುರೀಯ ಎಂಬ ನಾಲ್ಕು ಅವಸ್ಥೆಗಳ ವಿವರಣೆ ಇದೆ. ಸೂತ್ರ ಗ್ರಂಥದಂತಿದ್ದರೂ ಓಂಕಾರವೇ ಸಮಸ್ತ ವಿಶ್ವವೂ ಭೂತ ಭವಿಷ್ಯದ್ವರ್ತಮಾನಗಳೂ ಆಗಿದೆ ಎಂದು ವಿವರಿಸುವ ಈ ಉಪನಿಷತ್ತಿಗೆ ಗೌಡಪಾದರೂ ವಿಸ್ತಾರವಾದ ಕಾರಿಕೆಯನ್ನು ಬರೆದಿದ್ದಾರೆ. ಅದ್ವೈತ, ಪ್ರಪಂಚ ಎಂಬ ಪದಗಳು ಇದರಲ್ಲಿಯೇ ಮೊದಲು ಬಂದಿರುವುದು.

       🔔🔔ತೈತ್ತಿರೀಯೋಪನಿಷತ್ 🌷🥀

ಇದರ ಶಾಂತಿಮಂತ್ರ ‘ಶಂ ನೋ ಮಿತ್ರಃ ಶಂ ವರುಣಃ’ ಎಂಬುದು. ಕೃಷ್ಣ ಯಜುರ್ವೇದದ ಶಾಖೆಗೆ ಸೇರಿದ್ದು ಮೂರು ವಲ್ಲಿಗಳಿಂದ ಕೂಡಿದೆ. ಶಿಕ್ಷಾವಲ್ಲೀ (ಶಿಕ್ಷಾಧ್ಯಾಯ), ಬ್ರಹ್ಮಾನಂದವಲ್ಲೀ, ಭೃಗುವಲ್ಲೀ ಎಂದು ಮೊದಲ ಶಬ್ದಗಳಿಂದ ಹೆಸರುಗಳನ್ನು ಕೊಡಲಾಗಿದೆ. ಅನುವಾಕಗಳಾಗಿ ವಿಭಜಿಸಲ್ಪಟ್ಟು ಚಿಕ್ಕ ಚಿಕ್ಕ ಗದ್ಯವಾಕ್ಯಗಳಿಂದ ಕೂಡಿದೆ. ಶಿಕ್ಷಾಧ್ಯಾಯದಲ್ಲಿ ಅಧ್ಯಯನವನ್ನು ಮುಗಿಸಿರುವ ಶಿಷ್ಯನಿಗೆ ಮಾಡಿರುವ ಉಪದೇಶ ಎಲ್ಲ ದೇಶಕಾಲಗಳಿಗೂ ಅನ್ವಯಿಸುವಂತಿದ್ದು ಸಾರ್ವತ್ರಿಕ ಧರ್ಮನಿರೂಪಣೆಯಂತಿದೆ. ಬ್ರಹ್ಮಾನಂದವಲ್ಲಿಯಲ್ಲಿ ‘ಸತ್ಯಂ ಜ್ಞಾನಂ ಅನಂತಂ ಬ್ರಹ್ಮ’ ಎಂಬ ಬ್ರಹ್ಮವಸ್ತುಲಕ್ಷಣಗಳು, ಸೃಷ್ಟಿಕ್ರಮದ ವಿವೇಚನೆ ಇರುವುದಲ್ಲದೆ ವಾಙ್ಮನದರನಾದ ಬ್ರಹ್ಮವಸ್ತುವಿನಲ್ಲಿ ನೆಲೆನಿಂತವ ಭಯವಿದೂರನಾಗುವನೆಂಬ ಉಪದೇಶವಿದೆ. ಭೃಗುವಲ್ಲಿಯಲ್ಲಿ ಬ್ರಹ್ಮವಸ್ತು ಸೃಷ್ಟಿಸ್ಥಿತಿಲಯಗಳಿಗೆ ಕಾರಣವೆಂದೂ ಅದೇ ಆನಂದ ಸ್ವರೂಪಿ ಎಂದೂ ‘ಆನಂದೋ ಬ್ರಹ್ಮೇತಿ ವ್ಯಜಾನಾತ್’ ಎಂದೂ ತಿಳಿಸಲಾಗಿದೆ. ಪಂಚಕೋಶಗಳ ನಿರೂಪಣೆ ಸ್ಪಷ್ಟವಾಗಿದೆ. ಅವು ಒಂದರಿಂದ ಮತ್ತೊಂದು ಹುಟ್ಟುವುವೆಂಬ ಸಿದ್ಧಾಂತವಿದೆ. ಆಕಾಶ ಆತ್ಮನಿಂದ ಹುಟ್ಟಿತು ಎಂಬ ತತ್ತ್ವ ಸಾಂಖ್ಯದರ್ಶನದ ಬೆಳೆವಣಿಗೆಗೆ ಸಹಾಯಕವಾಯಿತು. ಇದರಲ್ಲಿ ಆಜಾನಜ, ಕರ್ಮಜ ಎಂದು ದೇವತೆಗಳನ್ನು ವಿಭಾಗಿಸಲಾಗಿದೆ. ಬ್ರಹ್ಮನೇ ದೇವತೆಗಳಿಗಿಂತ ಅಧಿಕನೆಂದು ಸಾರಿದೆ. ಬ್ರಹ್ಮಾನಂದವನ್ನು ಪಡೆದವ ಹಾಡುವ ಸಾಮವೊಂದು ಕೊನೆಯಲ್ಲಿ ಇದೆ.

      ☘️🌱ಐತರೇಯೋಪನಿಷತ್ 🌷

ಋಗ್ವೇದದ ಐತರೇಯ ಆರಣ್ಯಕಕ್ಕೆ ಸೇರಿದೆ. ‘ವಾಙ್ಮೇ ಮನಸಿ ಪ್ರತಿಷ್ಠಿತಾ’ ಎಂಬುದು ಇದರ ಶಾಂತಿಮಂತ್ರ. ಗಾತ್ರದಲ್ಲಿ ಬಹಳ ಚಿಕ್ಕದು. ಮೂರು ಅಧ್ಯಾಯಗಳಿವೆ. ಆತ್ಮನಿಂದ ಲೋಕಗಳೆಲ್ಲದರ ಸೃಷ್ಟಿಯಾಯಿತೆಂದು ಮೊದಲು ತಿಳಿಸಲಾಗಿದೆ. ಅನಂತರ ಅಶನಾ ಪಿಪಾಸೆಗಳ ವೃತ್ತಾಂತ. ಪುರುಷ ಲೋಕಗಳಿಗೂ ಲೋಕಪಾಲಕರಿಗೂ ಅನ್ನವನ್ನು ಸೃಜಿಸಲು ಮಾಡಿದ ಸಂಕಲ್ಪ, ಇಂದ್ರ ಶಬ್ದದ ಅರ್ಥ, ಪುರುಷನ ಮೂರು ಜನ್ಮಗಳು, ಮನೋವ್ಯಾಪಾರಗಳ ವಿಶ್ಲೇಷಣೆ-ಇವನ್ನು ನಿರೂಪಿಸಲಾಗಿದೆ. ಕೊನೆಯಲ್ಲಿ ‘ಪ್ರಜ್ಞಾನಂ ಬ್ರಹ್ಮ’ ಎಂಬ ಉಪದೇಶವಿದೆ.

🌺🌺ಪ್ರಶ್ನೋಪನಿಷತ್🌺🌺

‘ಭದ್ರಂ ಕರ್ಣೇಭಿಃ ಶೃಣು ಯಾಮ ದೇವಾಃ’ ಎಂಬುದು ಇದರ ಶಾಂತಿಮಂತ್ರ. ಪ್ರಶ್ನೆಗಳಿಂದ ಕೂಡಿದ ಇದು ಅಥರ್ವವೇದಕ್ಕೆ ಸೇರಿದ್ದು. ಗದ್ಯಮಯವಾಗಿದ್ದು, ಆರು ಮಂದಿ ಬ್ರಹ್ಮಾನ್ವೇಷಕರು ಭಗವಂತನಾದ ಪಿಪ್ಪಲಾದ ಮಹರ್ಷಿಯೊಡನೆ ಮಾಡಿದ ಸಂವಾದ ರೂಪದ ಆರು ಪ್ರಶ್ನೆಗಳನ್ನೊಳಗೊಂಡಿದೆ. ಲೋಕದಲ್ಲಿ ಪ್ರಜೆಗಳು ಹೇಗೆ ಎಲ್ಲಿಂದ ಜನಿಸುತ್ತಾರೆ ? ಎಂಬುದು ಕಬಂಧಿ ಕಾತ್ಯಾಯನ ಮೊದಲು ಕೇಳಿದ ಪ್ರಶ್ನೆ. ಪ್ರಜಾಪತಿಯ ತಪಸ್ಸಿನ ಫಲವಾಗಿ ಆದಿತ್ಯನೂ (ಪ್ರಾಣ) ಚಂದ್ರಮನೂ (ರಯಿ) ಸೃಷ್ಟಿಯಾಗಿ ಅವರಿಂದ ಪ್ರಜಾಸೃಷ್ಟಿಯಾಯಿತು ಎಂಬುದು ಅದಕ್ಕೆ ಉತ್ತರ. ದೇವತೆಗಳೆಷ್ಟು ಮಂದಿ ಪ್ರಜೆಗಳಿಗೆ ಆಧಾರಭೂತರು ? ಅವರಲ್ಲಿ ವರಿಷ್ಠರು ಯಾರು ? ಎಂಬುದು ಭಾರ್ಗವ ವೈದರ್ಭಿ ಕೇಳಿದ ಎರಡನೆಯ ಪ್ರಶ್ನೆ. ಆಕಾಶ, ವಾಯು, ಅಗ್ನಿ, ಆಪಃ, ಪೃಥಿವೀ, ವಾಕ್, ಮನಸ್ಸು, ಚಕ್ಷುಸ್ಸು, ಶ್ರೋತ್ರ ಇವರು ದೇವತೆಗಳು; ಇವರಲ್ಲಿ ವರಿಷ್ಠ ಪ್ರಾಣ, ಇದು ಉತ್ತರ. ಕೊನೆಯಲ್ಲಿ ಪ್ರಾಣಸ್ವರೂಪಿಯಾದ ಪರಬ್ರಹ್ಮನ ಸ್ತುತಿ ಇದೆ. ಮೂರನೆಯ ಪ್ರಶ್ನೆ ಈ ಪ್ರಾಣ ಎಲ್ಲಿಂದ ಹುಟ್ಟಿ ಈ ಶರೀರಕ್ಕೆ ಹೇಗೆ ಬಂದು ವಿಭಾಗ ಮಾಡಿಕೊಂಡು ಪ್ರತಿಷ್ಠಿತವಾಗುತ್ತದೆ ? ಎಂಬುದು ಅಶ್ವಲಾಯನ ಕೇಳಿದುದು. ಇದಕ್ಕೆ ಉತ್ತರ: ಪುರುಷನನ್ನು ನೆರಳು ಹಿಂಬಾಲಿಸುವಂತೆ, ಈ ಶರೀರದಲ್ಲಿ ಆತ್ಮನಿಂದ ಕರ್ಮನಿಮಿತ್ತವಾಗಿ ಪ್ರಾಣ ಜನಿಸುತ್ತದೆ. ಸಾಮ್ರಾಟನಾದವ ಬೇರೆ ಬೇರೆ ಗ್ರಾಮಗಳಲ್ಲಿ ಅಧಿಕಾರಿಗಳನ್ನು ನಿಯೋಜಿಸುವಂತೆ ಇದು ಇತರ ಪ್ರಾಣಗಳನ್ನು ನಿಯೋಜಿಸುತ್ತದೆ. ಪುಣ್ಯಾಧಿಕ್ಯವಾದರೆ ದೇವಲೋಕಕ್ಕೂ ಪಾಪಾಧಿಕ್ಯವಾದರೆ ನರಕಕ್ಕೂ ಮೇಲ್ಮುಖವಾದ ನಾಡಿಯಿಂದ ಇದು ಉತ್ಕ್ರಮಿಸುತ್ತದೆ. ನಾಲ್ಕನೆಯ ಪ್ರಶ್ನೆ ಸೌರ್ಯಾಯಣಿ ಗಾಗರ್ಯ್‌ರದು: ಈ ಪುರುಷನಲ್ಲಿ ನಿದ್ರಿಸುವವರು ಯಾರು ? ಜಾಗೃತರಾಗಿರುವವರು ಯಾರು ? ಸ್ವಪ್ನಗಳನ್ನು ಕಾಣುವವರೂ ಅನುಭವಿಸುವವರೂ ಯಾರು ? ಯಾರಲ್ಲಿ ಎಲ್ಲರೂ ಸಂಪ್ರತಿಷ್ಠಿತರಾಗುತ್ತಾರೆ ? ಉತ್ತರ: ಶ್ರೋತ್ರಾದಿ ಇಂದ್ರಿಯಗಳು ಮನಸ್ಸಿನಲ್ಲಿ ಏಕೀಭವಿಸಿ ನಿದ್ರಿಸುವುವು. ಪ್ರಾಣಾದಿ ಪಂಚವಾಯುಗಳು ಎಚ್ಚರವಾಗಿರುವುವು. ಮನಸ್ಸೆಂಬ ದೇವ ಸ್ವಪ್ನಗಳನ್ನು ಕಾಣುವಾತ. ಪಕ್ಷಿಗಳು ವೃಕ್ಷದಲ್ಲಿರುವಂತೆ ಅಕ್ಷರರೂಪಿಯಾದ ಪರಮಾತ್ಮನಲ್ಲಿ ಎಲ್ಲರೂ ಸಂಪ್ರತಿಷ್ಠಿತರಾಗಿರುತ್ತಾರೆ. ಶೈಬ್ಯ ಸತ್ಯಕಾಮನದು ಐದನೆಯ ಪ್ರಶ್ನೆ. ಪ್ರಣವೋಪಾಸಕ ಯಾವ ಲೋಕವನ್ನು ಜಯಿಸುತ್ತಾನೆ ? ಅಂಥವ ಸೂರ್ಯನಲ್ಲಿ ಸಂಗತವಾಗಿ ಪಾಪವಿಮುಕ್ತ ನಾಗಿ ಬ್ರಹ್ಮಲೋಕವನ್ನು ಸೇರುತ್ತಾನೆಂದು ಪಿಪ್ಪಲಾದಿ ಋಷಿ ಉತ್ತರ ಹೇಳಿದ್ದಾನೆ. ಸುರೇಶ ಭಾರದ್ವಾಜ ಷೋಡಶ ಕಲಾ ಪುರುಷನ ವಿಚಾರವಾಗಿ ಕೇಳಿದ ಆರನೆಯ ಪ್ರಶ್ನೆಗೆ ಪ್ರಾಣಾದಿ ಷೋಡಶ ಕಲೆಗಳು ಹೃದಯ ಪುಂಡರೀಕಾಕ್ಷದ ಮಧ್ಯದಲ್ಲಿ ಸಂಭವಿಸುವುದರಿಂದ ಆ ಪುರುಷ ಶರೀರದೊಳಗಿದ್ದಾನೆಂಬ ಉತ್ತರವಿದೆ. ಅನಂತರ ಆರು ಮಂದಿ ಶಿಷ್ಯರೂ ತಮ್ಮ ಅವಿದ್ಯೆಯನ್ನು ಹೋಗಲಾಡಿಸಿದ ಆಚಾರ್ಯರನ್ನು ವಂದಿಸುತ್ತಾರೆ.

🕉️✡️ ಮುಂಡಕೋಪನಿಷತ್ ✡️✡️

ಅಥರ್ವ ವೇದದ ಶೌನಕ ಶಾಖೆಗೆ ಸೇರಿದ ಇದರಲ್ಲಿ 3 ಮುಂಡಕಗಳು, 6 ಖಂಡಗಳು, 64 ಮಂತ್ರಗಳು ಇವೆ. ಇಡೀ ಉಪನಿಷತ್ತು ಪದ್ಯಮಯ ವಾಗಿದೆ. ಮೊದಲ ಮುಂಡಕದಲ್ಲಿ ಅಥರ್ವಣ ಪರಂಪರೆಯ ವಿವರಣೆಯೂ ಪರಾಪರ ವಿದ್ಯೆಗಳ ವಿಭಾಗವೂ ಕರ್ಮಕಾಂಡದ ನಿರಾಕರಣೆಯೂ ಜ್ಞಾನಕಾಂಡದ ಪ್ರಾಧಾನ್ಯವೂ ಸನ್ಯಾಸದ ಶ್ರೇಷ್ಠತೆಯೂ ನಿರೂಪಿತವಾಗಿವೆ. ಋಗ್ವೇದ, ಯಜುರ್ವೇದಗಳನ್ನು ಅಪರಾವಿದ್ಯೆಗೆ ಸೇರಿಸಿರುವುದೂ ಯಜ್ಞಸಂಸ್ಥೆಯ ಫಲದ ನಶ್ವರತೆಯನ್ನು ಸ್ಪಷ್ಟಪಡಿಸಿರುವುದೂ ಗಮನಾರ್ಹ ವಾಗಿದೆ. ವೇದಾಂಗಗಳ ಸಂಖ್ಯೆಯನ್ನೂ ಹೆಸರುಗಳನ್ನೂ ಕ್ರಮವಾಗಿ ಇಲ್ಲಿ ಕೊಡಲಾಗಿದೆ. ಎರಡನೆಯ ಮುಂಡಕದಲ್ಲಿ ಸೃಷ್ಟಿಸ್ಥಿತಿ ನಾಶಗಳಿಗೆ ಸರ್ವಭೂತಾಂತರಾತ್ಮವಾದ ಬ್ರಹ್ಮವಸ್ತುವೇ ಕಾರಣವೆಂದೂ ಅಮೃತತ್ವಕ್ಕೆ ಸೇತುವಾದ ಆ ಪರಮಾತ್ಮನೊಬ್ಬನನ್ನೇ ತಿಳಿಯಬೇಕೆಂದೂ ಇತರ ವಿಷಯಗಳಲ್ಲಿ ವಿರಕ್ತಿ ಇರಬೇಕೆಂದೂ ಬೋಧಿಸಲಾಗಿದೆ. ತದೇ ತತ್ಸತ್ಯಂ ತದಮೃತಂ ತದ್ವೇದ್ಧವ್ಯಂ, ತಮೇವೈಕಂ ಜಾನಥ ಆತ್ಮಾನಂ ಅನ್ಯವಾಚೋ ವಿಮುಂಚಥ-ಎಂದು ಇಲ್ಲಿ ಸಾರಿದೆ. ಮೂರನೆಯ ಮುಂಡಕದಲ್ಲಿ ವೇದಾಂತ ದರ್ಶನದ ಮುಖ್ಯ ವಿಚಾರವಾದ ಜೀವಾತ್ಮ ಪರಮಾತ್ಮರನ್ನು ಒಂದೇ ವೃಕ್ಷವನ್ನಾಶ್ರಯಿಸಿ ಅದರ ಫಲವನ್ನು ಭುಂಜಿಸುವ, ಭುಂಜಿಸದೇ ಇರುವ, ಎರಡು ಪಕ್ಷಿಗಳ ದೃಷ್ಟಾಂತದಿಂದ ನಿರೂಪಿಸಲಾಗಿದೆ. ದ್ವೈತಾದ್ವೈತ ಪಂಥಗಳು ಇದನ್ನು ಬಗೆಬಗೆಯಾಗಿ ವಿವರಿಸುತ್ತವೆ. ಜ್ಞಾನ ಪ್ರಸಾದದಿಂದ ಮಾತ್ರವೇ ಪರಮಾತ್ಮನನ್ನು ಪಡೆಯಬಹುದೆಂಬುದನ್ನು ಪರಮಾತ್ಮನನ್ನು ಕಂಡವನು ಪುಣ್ಯಪಾಪ ವಿಮುಕ್ತನಾಗಿ ಪರಮಾತ್ಮನ ಪರಮ ಸಾಮ್ಯವನ್ನು ಪಡೆಯುತ್ತಾನೆಂದು ಹೇಳಲಾಗಿದೆ. ಕಾಮಗಳನ್ನು ಜಯಿಸಿದವನಿಗೆ ಭಗವಂತನ ದಯೆಯಿಂದ ಬ್ರಹ್ಮಪ್ರಾಪ್ತಿಯಾಗುವುದೆಂದು ತಿಳಿಸಲಾಗಿದೆ. ವೇದಾಂತ ಶಬ್ದದ ಪ್ರಯೋಗ ಇಲ್ಲಿಯೇ ಮೊದಲು ಬಂದಿರುವುದು. ಇದರಲ್ಲಿ (ಮುಂಡನ ಮಾಡಿಕೊಂಡು) ವಿರಕ್ತಿಯಿಂದ ಇಂದ್ರಿಯಾತೀತವಾದ ಬ್ರಹ್ಮಾನಂದವನ್ನು ಪಡೆಯುವ ಸಾಧನೆ, ತಪಸ್ಸು, ಇಹಲೋಕ ತ್ಯಾಗ ಇವನ್ನು ವಿಶೇಷವಾಗಿ ವಿವರಿಸಿರುವುದರಿಂದ ಸಂನ್ಯಾಸಿಗಳ (ಮುಂಡಕ) ಉಪನಿಷತ್ತು ಎಂದು ಪರ್ಯಾಯವಾಗಿ ಇದನ್ನು ಕರೆಯಲಾಗಿದೆ.

✡️✡️ ಈಶೋಪನಿಷತ್ ✡️✡️

ಪ್ರಮುಖ ಉಪನಿಷತ್ ಗಳಲ್ಲಿ ಒಂದು. ಯಜುರ್ವೇದದ ವಾಜಸನೇಯ ಶಾಖೆಗೆ ಸೇರಿದೆ. ಇದಕ್ಕೆ ಈಶಾವಾಸ್ಯೋಪ ನಿಷತ್ ಎಂಬ ಹೆಸರೂ ಇದೆ. ಗಾತ್ರದಲ್ಲಿ ಚಿಕ್ಕದು. ಕೇವಲ 18 ಶ್ಲೋಕಗಳಿಂದ ಕೂಡಿದೆ. ಆದರೂ ತತ್ತ್ವಗಾಂಭೀರ್ಯದಿಂದ ಅರ್ಥ ಸಂಪತ್ತಿನಿಂದ ಅತಿ ಮಹತ್ತ್ವದ್ದಾಗಿದೆ. ಇದರಲ್ಲಿ ಜಗತ್ತಿಗೂ ಬ್ರಹ್ಮನಿಗೂ ಇರುವ ಸಂಬಂಧ ವಿವರಣೆ ಪರಿಷ್ಕಾರವಾಗಿ ಬಂದಿದೆ. ಮಾನವಜೀವ ನದ ಅಂತರಾರ್ಥವನ್ನಿಲ್ಲಿ ಬಿಡಸಲಾಗಿದೆ. ಎಲ್ಲದಕ್ಕೂ ಪ್ರಭುವಾದ ಭಗವಂತನಲ್ಲಿ ಸಮರ್ಪಣ ಭಾವದಿಂದ ಕರ್ಮಮಾಡಿ ಪರೋಪಕಾರಿಯಾಗಿ ಸೇವಾನಿಷ್ಠನಾಗಿ ಮನುಷ್ಯಜೀವನವನ್ನು ಸಾಗಿಸಬೇಕೆಂಬ ಬೋಧೆ ಇಲ್ಲಿದೆ. ಭಗವದ್ಗೀತೆಯ ವಿಸ್ತಾರವಾದ ಉಪದೇಶ ಈ ಉಪನಿಷತ್ತಿನ ವಿವರಣೆಯಂತಿದೆ.



        🕉️🕉️ಕೇನೋಪನಿಷತ್🕉🕉️

ತಲವಕಾರ ಶಾಖೆಗೆ ಸೇರಿರುವುದರಿಂದ ಇದಕ್ಕೆ ತಲವಕಾರೋಪ ನಿಷತ್ತೆಂದೂ ಹೆಸರಿದೆ. ಇದರಲ್ಲಿ ನಾಲ್ಕು ಖಂಡಗಳಿವೆ. ಮೊದಲೆರಡು ಖಂಡಗಳು ಪದ್ಯಮಯವಾಗಿಯೂ ಕೊನೆಯ ಎರಡು ಖಂಡಗಳು ಗದ್ಯಮಯವಾಗಿಯೂ ಇದ್ದು ಒಟ್ಟು 34 ಮಂತ್ರಗಳಿವೆ. ಕೇನ (ಯಾರಿಂದ) ಎಂಬ ಪದದಿಂದ ಸಾಹಿತ್ಯ ಆರಂಭವಾಗುತ್ತದೆ. ಚಿಕ್ಕ ಚಿಕ್ಕ ಮಂತ್ರಗಳಲ್ಲಿ ಬ್ರಹ್ಮಸ್ವರೂಪವನ್ನು ಮಾರ್ಮಿಕವಾಗಿ ಇದು ವರ್ಣಿಸಿದೆ. ಯಾವುದನ್ನು ಕಣ್ಣಿನಿಂದ ಕಾಣಲಾಗುವುದಿಲ್ಲವೋ ಯಾವುದರಿಂದ ಕಣ್ಣು ಕಾಣುತ್ತದೋ ಅದು ಬ್ರಹ್ಮವೆಂದು ತಿಳಿ ಎಂಬುದು ಮೊದಲ ಬೋಧೆ. ಸರ್ವವೂ ಬ್ರಹ್ಮಮಯವಾಗಿರುವುದಲ್ಲದೆ ಪರತತ್ತ್ವ ಸಾಕ್ಷಾತ್ಕಾರ ಇಂದ್ರಿಯಾತೀತವೆಂಬುದು ತಾತ್ಪರ್ಯ. ಮೂರು ಮತ್ತು ನಾಲ್ಕನೆಯ ಖಂಡದಲ್ಲಿ ಬರುವ ವ್ಯಾಖ್ಯಾನದಲ್ಲಿ, ದೇವತೆಗಳು ಬ್ರಹ್ಮನಿಂದಾದ ವಿಜಯವನ್ನು ತಮ್ಮಿಂದಾದುದೆಂದು ಭ್ರಮಿಸಿ ಯಕ್ಷರೂಪದಲ್ಲಿ ಕಾಣಿಸಿಕೊಂಡ ಬ್ರಹ್ಮನನ್ನು ತಿಳಿಯಲಾಗದೆ, ಆತ ತಮ್ಮ ಮುಂದೆ ಇಟ್ಟ ಒಂದು ಹುಲ್ಲುಕಡ್ಡಿಯನ್ನು ದಹಿಸಲು, ಅಲುಗಿಸಲು ಅಗ್ನಿವಾಯುಗಳು ಅಸಮರ್ಥರಾ ದಾಗ, ಅಂತರ್ಧಾನನಾದ ಯಕ್ಷನೇ ಬ್ರಹ್ಮನೆಂದು, ಹೈಮವತಿ ಉಮಾದೇವಿಯಿಂದ ಅರಿತುಕೊಂಡರೆಂದು ಬೋಧಿಸಲಾಗಿದೆ. ಶ್ರೇಷ್ಠನಾಗಿದ್ದರೂ ಇಂದ್ರನೇ ಇಲ್ಲಿ ಪರಬ್ರಹ್ಮನಲ್ಲ.

           🌴🌴ಕಠೋಪನಿಷತ್ 🌴🌴

ಇದು ಎರಡು ಅಧ್ಯಾಯಗಳಿಂದ ಕೂಡಿದೆ. ಬ್ರಹ್ಮವಿದ್ಯೆಯನ್ನು ಬೇಡಿದ ನಚಿಕೇತನಿಗೆ ಯಮದೇವ ಪ್ರಲೋಭನಗಳನ್ನು ಒಡ್ಡಿದರೂ ಆತ ಅದಾವುದನ್ನೂ ಲಕ್ಷಿಸದೆ ಬ್ರಹ್ಮವಿದ್ಯೆಯನ್ನೇ ವರವಾಗಿ ಪಡೆದ ರೋಮಾಂಚನಕಾರಿ ಕಥೆ ಇರುವುದರಿಂದ ಅತ್ಯಂತ ಪ್ರಸಿದ್ಧವಾಗಿದೆ. ಜನ್ಮ, ಪುನರ್ಜನ್ಮಗಳು, ಮರಣಾನಂತರ ಆತ್ಮದ ಸ್ಥಿತಿ, ಇಂದ್ರಿಯನಿಗ್ರಹ ದಿಂದ ಪರಮಾತ್ಮಪ್ರಾಪ್ತಿ, ಶ್ರದ್ಧೆ, ಧೈರ್ಯಗಳಿಂದ ಪರಮಾತ್ಮ ಸ್ವರೂಪಜ್ಞಾನ, ಶಾಶ್ವತಸುಖ ಶಾಂತಿಗಳ ಪ್ರಾಪ್ತಿ-ಇವನ್ನು ಯಮ ಪ್ರಣವದಿಂದ ಸಂಗ್ರಹವಾಗಿ ನಚಿಕೇತನಿಗೆ ಉಪದೇಶಿಸಿ ದ್ದಾನೆ. ತಂದೆಯಾದ ವಾಜಶ್ರವಸ್ ಯಾಗ ಸಂದರ್ಭದಲ್ಲಿ ಕುಪಿತನಾಗಿ ತನ್ನನ್ನು ಯಮನಿಗೆ ಒಪ್ಪಿಸಿದರೂ ಧೈರ್ಯಗೆಡದೆ ಮಗನಾದ ನಚಿಕೇತ ಯಮನೊಂದಿಗೆ ವಾದಮಾಡಿ ಅಮೃತತ್ವವನ್ನು ಪಡೆಯುತ್ತಾನೆ. ತಂದೆಯ ಪ್ರಸನ್ನತೆಯೊಂದಿಗೆ ಅಗ್ನಿವಿದ್ಯೆಯನ್ನೂ ವರವಾಗಿ ಪಡೆಯುತ್ತಾನೆ. ಈ ಆಖ್ಯಾನವನ್ನು ಹೇಳಿದರೂ ಕೇಳಿದರೂ ಬ್ರಹ್ಮಲೋಕಪ್ರಾಪ್ತಿಯೆಂದು ಫಲಶ್ರುತಿ ಇದೆ. ಇದರಲ್ಲಿ ಮಾನವನ ಹುಟ್ಟು ಸಾವುಗಳ ಪ್ರಶ್ನೆಗೂ ಅವನ ಸುಖಕ್ಕೆ ಶ್ರೇಯ ಪ್ರೇಯಗಳಾವುವು ಎಂಬ ಪ್ರಶ್ನೆಗೂ ಉತ್ತರವಿದೆ. ನಿತ್ಯರಲ್ಲಿ ನಿತ್ಯನೂ ಚೇತನರಲ್ಲಿ ಚೇತನನೂ ಆಗಿ ಸಮಸ್ತಕ್ಕೂ ಏಕೈಕ ಕಾರಣನಾದ ಪರಮಾತ್ಮನನ್ನು ನಚಿಕೇತನಂಥ ಅಸಾಧಾರಣ ಧೀರನಾದವ ಮಾತ್ರ ಹೃದಯಗಹ್ವರದಲ್ಲಿ ಕಂಡುಕೊಳ್ಳುವನೆಂದು ಸ್ಪಷ್ಟಪಡಿಸಲಾಗಿದೆ. ಕೆಲವು ಸ್ವಾರಸ್ಯವಾದ ಅಂಶಗಳೂ ಇದರಲ್ಲಿ ಕಂಡುಬಂದಿವೆ. ಪರಲೋಕದಲ್ಲಿ ನಂಬಿಕೆ ಇಲ್ಲದವರು ಆ ಕಾಲದಲ್ಲೂ ಇದ್ದರೆಂದು ಸೂಚಿಸಲಾಗಿದೆ. ‘ಆಶ್ಚರ್ಯೋ ವಕ್ತಾ’. ‘ಅಣೋರಣೀಯಾನ್’, ‘ಅಜೋ ನಿತ್ಯಃ ಶಾಶ್ವತೋಯ ಪುರಾಣಃ’ ಎಂಬ ಉಕ್ತಿಗಳನ್ನು ಗೀತೆಯಲ್ಲಿ ತೆಗೆದುಕೊಳ್ಳಲಾಗಿದೆ. ಸಾಂಖ್ಯ ಮತ್ತು ಯೋಗದರ್ಶನಗಳಿಗಿಂತ ಈ ಉಪನಿಷತ್ ಹಿಂದಿನದೆಂದು ಕೆಲವು ವಾಕ್ಯಗಳು ಸೂಚಿಸುತ್ತವೆ: `ತದ್ವಿಷ್ಣೋಃ ಪರಮಂ ಪದಮ್’ ಎಂಬ ವಾಕ್ಯ ವಿಷ್ಣುವೇ ಪರಬ್ರಹ್ಮನೆಂದು ಈ ಉಪನಿಷತ್ತಿನ ನಿರ್ಣಯವೆಂದು ತೋರಿಸುತ್ತದೆ. ‘ಮೃತ್ಯೋಃ ಸಮೃತ್ಯುಮಾಪ್ನೋತಿ ಯ ಇಹ ನಾನೇವಪಶ್ಯತಿ’ ಎಂಬ ವಾಕ್ಯದಲ್ಲಿ ಅದ್ವೈತ ತತ್ತ್ವದ ಅಭಿಪ್ರಾಯವಿದೆ.

📚📚 ಉಪನಿಷತ್ತುಗಳು📚📚

ವೇದಗಳ ಕೊನೆಯ ಹಾಗೂ ನಾಲ್ಕನೆಯ ವಿಭಾಗವನ್ನು ಈ ಹೆಸರಿನಿಂದ ಕರೆಯುತ್ತಾರೆ. ಉಳಿದ ಮೊದಲ ಮೂರು ಭಾಗಗಳೆಂದರೆ ಸಂಹಿತೆಗಳು, ಬ್ರಾಹ್ಮಣಗಳು, ಆರಣ್ಯಕಗಳು. ಆದ್ದರಿಂದಲೇ ಉಪನಿಷತ್ತುಗಳಿಗೆ ವೇದಾಂತವೆಂಬ ಹೆಸರೂ ರೂಢಿಯಲ್ಲಿದೆ. ಉಪನಿಷತ್ತುಗಳು ಸಂಖ್ಯೆಯಲ್ಲಿ ಎಷ್ಟಿವೆ, ಇವುಗಳ ಕಾಲವೇನು ಎಂಬ ವಿಷಯದಲ್ಲಿ ಭಿನ್ನಾಭಿಪ್ರಾಯಗಳಿವೆ. ವೇದಧರ್ಮದ ಅತ್ಯುನ್ನತ ಆದರ್ಶ ಮತ್ತು ಸಿದ್ಧಿಗಳನ್ನು ಪ್ರತಿಪಾದಿಸಿ ಮೋಕ್ಷ ಶಾಸ್ತ್ರಗಳೆನ್ನಿಸಿಕೊಂಡಿರುವ ಇವು ವೇದಗಳ ಸಾರಸರ್ವಸ್ವವಾಗಿ ಮಾನವನನ್ನು ಅಮೃತತ್ವಕ್ಕೆ ಒಯ್ಯುವ ಹಂತಪಂಕ್ತಿಗಳೆನ್ನಬಹುದು. ಇವುಗಳಲ್ಲಿ ವಿಚಾರದ ಅಂತ್ಯವನ್ನು ಮೀರಿ ಹೋಗಿರುವ ಮಹಾಮಹಿಮರ, ಋಷಿಗಳ, ಮಂತ್ರದ್ರಷ್ಟಾರರ, ಅಂತರ್ದೃಷ್ಟಿ ಗೋಚರವಾದ ಪರಬ್ರಹ್ಮವಸ್ತುವಿನ ಸ್ವರೂಪ ನಿರೂಪಣೆ ದಿವ್ಯಜ್ಯೋತಿಯಂತೆ ಬೆಳಗುತ್ತಿದೆ. ಇವು ಭಾರತೀಯ ದರ್ಶನಗಳೆಲ್ಲಕ್ಕೂ ಸಿದ್ಧಾಂತಗಳೆಲ್ಲಕ್ಕೂ ಮೂಲವಾದ ತತ್ತ್ವ ತರಂಗಗಳ ಪಾವನ ಬುಗ್ಗೆಗಳಂತಿವೆ. ಅಂತೆಯೇ ವಿದ್ವಾಂಸರು ಇವನ್ನು ವೇದಗಳೆಂಬ ಪರ್ವತಪಂಕ್ತಿಗಳಲ್ಲಿನ ಗಗನಸ್ಪರ್ಶಿ ಶಿಖರಗಳೆಂದು ಬಣ್ಣಿಸಿದ್ದಾರೆ. ಇವುಗಳಲ್ಲಿ ಅಡಗಿರುವ ಮಹತ್ತ್ವವನ್ನು, ಆತ್ಮ ಪರಮಾತ್ಮ ಜ್ಞಾನವನ್ನು, ಗುರುವಿನ ಪದತಲದಲ್ಲಿ ಕುಳಿತು ಭಕ್ತಿಯಿಂದ ಕೇಳಿ ತಿಳಿಯಬೇಕಾಗಿರುವುದರಿಂದ ಈ ಅರ್ಥವನ್ನೊಳಗೊಂಡ ಉಪನಿಷತ್ ಎಂಬ ಹೆಸರು ಅನ್ವರ್ಥವಾಗಿದೆ. ಇವುಗಳಲ್ಲಿ ಬಹುಭಾಗ ಗುರುಶಿಷ್ಯರ ಸಂವಾದ ರೂಪದಲ್ಲಿದೆ.

ತತ್ತ್ವದೃಷ್ಟಿಯಿಂದ ಹೇಗೋ ಸಾಹಿತ್ಯದೃಷ್ಟಿಯಿಂದಲೂ ಇವು ಅದ್ಭುತವಾಗಿವೆ. ಸಂಸ್ಕೃತ ಭಾಷೆಯನ್ನು ಎಷ್ಟು ವೀರ್ಯವತ್ತಾಗಿ ಗದ್ಯದಲ್ಲಿ ಬಳಸಬಹುದೆಂಬುದಕ್ಕೆ ಇವು ನಿದರ್ಶನಗ ಳಾಗಿವೆ. ಕೆಲವು ಭಾಗಗಳಂತೂ ವಿಶ್ವಸಾಹಿತ್ಯದಲ್ಲಿಯೇ ಅತ್ಯುತ್ತಮವಾದುವೆನ್ನಬಹುದು.

ಋಗ್ವೇದಕ್ಕೆ ಐತರೇಯ, ಕೌಷೀತಕಿ ಉಪನಿಷತ್ತುಗಳೂ ಸಾಮವೇದಕ್ಕೆ ಛಾಂದೋಗ್ಯ ಮತ್ತು ಕೇನ ಉಪನಿಷತ್ತುಗಳೂ ಕೃಷ್ಣ ಯಜುರ್ವೇದಕ್ಕೆ ಕಠ, ಶ್ವೇತಾಶ್ವತರ, ಮೈತ್ರಾಯಣೀಯ, ತೈತ್ತಿರೀಯ ಮತ್ತು ಮಹಾ ನಾರಾಯಣೀಯ ಉಪನಿಷತ್ತುಗಳೂ ಶುಕ್ಲಯಜುರ್ವೇದಕ್ಕೆ ಬೃಹದಾರಣ್ಯಕ ಮತ್ತು ಈಶಾವಾಸ್ಯೋಪನಿಷತ್ತುಗಳೂ ಅಥರ್ವವೇದಕ್ಕೆ ಮುಂಡಕ, ಪ್ರಶ್ನ, ಮಾಂಡೂಕ್ಯ ಉಪನಿಷತ್ತುಗಳೂ ಸೇರಿವೆ. ಉಪನಿಷತ್ತುಗಳ ಸಂಖ್ಯೆಯ ವಿಚಾರದಲ್ಲಿ ಭಿನ್ನಾಭಿಪ್ರಾಯಗಳಿವೆ. ಮುಕ್ತಿಕೋಪನಿಷತ್ತಿನಲ್ಲಿ ಇವು 108 ಎಂದು ತಿಳಿಸಲಾಗಿದೆ. ಬೇರೆ ಬೇರೆ ವೇದಶಾಖೆಗಳಿಗೆ ಸೇರಿದ ಅನೇಕ ಉಪನಿಷತ್ ಗಳಿದ್ದರೂ ಅತ್ಯಂತ ಪ್ರಾಚೀನವೂ ಮಹತ್ತ್ವಪೂರ್ಣವೂ ಆದವೆನ್ನಿಸಿಕೊಂಡಿರುವವು 13. ಅವುಗಳಲ್ಲಿ ದಶೋಪನಿಷತ್ತುಗಳೆಂದು ಸುಪ್ರಸಿದ್ಧವಾಗಿರುವವು ಈಶ, ಕೇನ, ಪ್ರಶ್ನ, ಕಠ, ಮುಂಡಕ, ಮಾಂಡೂಕ್ಯ, ತೈತ್ತಿರೀಯ, ಐತರೇಯ, ಛಾಂದೋಗ್ಯ, ಬೃಹದಾರಣ್ಯಕಗಳು. ಉಳಿದವು ಕೌಷೀತಕಿ, ಶ್ವೇತಾಶ್ವತರ, ಮೈತ್ರಾಯಣೀಯ. ಈ 13 ಉಪನಿಷತ್ತುಗಳಿಂದ ಭಾಷ್ಯಕಾರರು ಯಥೇಚ್ಛವಾಗಿ ಉಲ್ಲೇಖಿಸಿದ್ದಾರೆ; ಮತ್ತು ಇವನ್ನು ಕುರಿತು ಭಾಷ್ಯ ಬರೆದಿದ್ದಾರೆ. ಉಪನಿಷತ್ತುಗಳ ಕಾಲದ ವಿಚಾರದಲ್ಲಿ ಭಿನ್ನಾಭಿಪ್ರಾಯಗಳಿವೆ. ಆದರೆ ಇವು ಬೌದ್ಧ ಧರ್ಮಕ್ಕೆ ಹಿಂದಿನವು ಎಂಬಲ್ಲಿ ಒಮ್ಮತವಿದೆ. ಅಂದರೆ ಇವು ಪ್ರ.ಶ.ಪು. 600ಕ್ಕೆ ಹಿಂದಿನವು. ಋಗ್ವೇದ ಸಂಹಿತೆಗಳ ಕಾಲಕ್ಕೆ ಈಚಿನವು ಎಂದು ಹೇಳಬೇಕಾಗಿರುವುದರಿಂದಲೂ ಋಗ್ವೇದದ ಕಾಲ ಸು. ಪ್ರ.ಶ.ಪು. 1200 ಎಂದು ಪಂಡಿತರ ಅಭಿಪ್ರಾಯವಿರುವುದರಿಂದಲೂ ಉಪನಿಷತ್ತುಗಳ ಕಾಲವನ್ನು ಪ್ರ.ಶ.ಪು. 1200 ಮತ್ತು ಪ್ರ.ಶ.ಪು. 600ರ ಮಧ್ಯಕಾಲವೆನ್ನ ಬಹುದು. ಆದರೆ ಮೈತ್ರಾಯಣೀಯ ಉಪನಿಷತ್ತಿನಲ್ಲಿ ಬಂದಿರುವ ಜ್ಯೋತಿಶ್ಶಾಸ್ತ್ರಕ್ಕೆ ಸಂಬಂಧಿಸಿದ ಒಂದು ಉಲ್ಲೇಖದ ಆಧಾರದ ಮೇಲೆ ಬಾಲಗಂಗಾಧರ ತಿಲಕರು ಕಾಲವನ್ನು ಪ್ರ.ಶ.ಪು. 2000ದ ಹಿಂದಕ್ಕೆ ಹಾಕಬೇಕೆಂದು ಅಭಿಪ್ರಾಯಪಟ್ಟಿದ್ದರು. ಅತ್ಯಂತ ಪ್ರಾಚೀನ ವಾದವು ಛಾಂದೋಗ್ಯ, ಬೃಹದಾರಣ್ಯಕಗಳು.

ವೇದಗಳೆಂಬ ಕ್ಷೀರಸಾಗರವನ್ನು ಮಥಿಸಿ ತೆಗೆದ ಅಮೃತಕಲಶವೇ ಉಪನಿಷತ್ ಗಳೆನ್ನಬಹುದು. ಇವುಗಳಲ್ಲಿ ಕೇಳಿಬರುವುದು ಮಾನವವಾಣಿಯಲ್ಲ. ವೇದಗಳಂತೆ ಇವೂ ಅಪೌರುಷೇಯವೆಂದೇ ಆಸ್ತಿಕರ ನಂಬಿಕೆ. ಇವುಗಳ ನಿಗೂಢ ತತ್ತ್ವವನ್ನು ಪ್ರತಿಪಾದಿಸಿದವರು ವಿಚಾರಮಂಥನದ ಸೀಮೆಯನ್ನು ದಾಟಿಹೋದ ದೈವಾಂಶಸಂಭೂತರು. ತಮ್ಮ ದಿವ್ಯದೃಷ್ಟಿಗೆ ಗೋಚರವಾದ ದೇಶಕಾಲಾತೀತವಾದ ಪರಮ ಸತ್ಯವನ್ನು ಅಮೃತವಾಣಿಯಲ್ಲಿ ಅವರು ನುಡಿದಿದ್ದಾರೆ. ಉಪನಿಷತ್ತುಗಳು ವಿಶ್ವದ ಜ್ಞಾನಭಂಡಾರದಲ್ಲಿರುವ ಜ್ಯೋತಿರ್ಮಯವಾದ ಅಮೂಲ್ಯ ರತ್ನಗಳು. ಇವು ಭಾರತೀಯ ತತ್ತ್ವಸಾಮ್ರಾಜ್ಯದ ಸಿಂಹಾಸನವನ್ನಲಂಕರಿಸಿವೆ. ಇವುಗಳ ಪ್ರಭೆಗೆ ಭಾರತೀಯ ತತ್ತ್ವಜ್ಞರು, ಆಚಾರ್ಯರು, ದರ್ಶನಕಾರರಷ್ಟೇ ಅಲ್ಲದೆ ಪಾಶ್ಚಾತ್ಯ ಜ್ಞಾನವೇತ್ತರೂ ಮಣಿದು ಮಾರುಹೋಗಿದ್ದಾರೆ. ಷೋಪೆನ್ಹೌರ್, ಮ್ಯಾಕ್ಸ್‌ ಮ್ಯೂಲರ್, ಡೌಸನ್, ಹ್ಯೂಮ್ ಮೊದಲಾದವರು ಮುಕ್ತಕಂಠದಿಂದ ಇವನ್ನು ಶ್ಲಾಘಿಸಿದ್ದಾರೆ.

ಪ್ರಸ್ಥಾನತ್ರಯಗಳೆನ್ನಿಸಿಕೊಂಡ ಶಾಸ್ತ್ರಗ್ರಂಥಗಳಲ್ಲಿ ಉಪನಿಷತ್ತುಗಳು ಪ್ರಧಾನವಾದವು. ಬ್ರಹ್ಮಸೂತ್ರಗಳೂ ಭಗವದ್ಗೀತೆಯೂ ಇವನ್ನೇ ಆಶ್ರಯಿಸಿದ ಉಳಿದ ಎರಡು ಪ್ರಸ್ಥಾನಗಳು. ಬ್ರಹ್ಮಸೂತ್ರಗಳಲ್ಲಿ ಉಪನಿಷತ್ತುಗಳ ತೊಡಕಾದ ತತ್ತ್ವಗಳನ್ನು ಕ್ರಮಬದ್ಧವಾಗಿ ಸೂತ್ರಗಳ ರೂಪದಲ್ಲಿ ಜೋಡಿಸಲಾಗಿದೆ. ಭಗವದ್ಗೀತೆಯಲ್ಲಿ ಜನಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಈ ತತ್ತ್ವಗಳನ್ನು ವಿಶದಪಡಿಸಲಾಗಿದೆ. ಉಪನಿಷತ್ತೆಂಬ ಗೋವಿನಿಂದ ಗೀತೆಯೆಂಬ ಕ್ಷೀರ(ಹಾಲು ) ವನ್ನು ಕೃಷ್ಣನೇ ಗೊಲ್ಲನಾಗಿ ಕರೆದುಕೊಟ್ಟಿದ್ದಾನೆ (ಹಾಲು ಕರೆಯುದು ) ಎಂದು ಒಂದು ಹೇಳಿಕೆ ಇದೆ. ಹೀಗೆ ಉಪನಿಷತ್ ಪ್ರಸ್ಥಾನತ್ರಯಗಳಲ್ಲಿ ಆಧಾರಸ್ತಂಭದಂತೆ ನಿಂತಿದ್ದು ಎಲ್ಲ ತತ್ತ್ವಗಳೂ ಇದರ ಶಾಖೋಪಶಾಖೆಗಳಾಗಿವೆ.

Velukkudi Family

Velukkudi Krishnan Swamy’s second son Atul Ranganathan’s wife Vidhya gave birth to a male child yesterday and this fourth generation of Velukudi Varadacharya Swamy’s Vamsam will continue in our sampradhayam.  Child is born on Visaka Natchattiram , most sanctified Natchattiram by Nammalwar, and also that of Sri Varadacharya Swamigal. Now that Atul Ranganathan , second son has devoured himself to Ramanuja sampradhayam samrakshanam , having completed both Mimansav and Vyakranam in Tirupathi , is about to embark as a Kalskshepam adhikari shortly, let us Pray Thayar and Namperumal to shower their Krupa and kataksham on the family .

*ಗುರು ಬೋಧನೆ*

ಆಳವಿಲ್ಲದ ಕೊಳದಲ್ಲಿ ಶುದ್ಧವಾದ ನೀರನ್ನು ಕುಡಿಯಬೇಕಾದರೆ ಮೇಲಿರುವ ನೀರನ್ನು ಸ್ವಲ್ಪವೂ ಕದಡದೆ ಕುಡಿಯಬೇಕು. ಅದನ್ನು ಕಲಕಿದರೆ ಬಗ್ಗಡ ಮೇಲೆದ್ದು ನೀರನ್ನೆಲ್ಲಾ ಕದಡುವುದು. ನೀನು ಪರಿಶುದ್ಧವಾಗಿರಬೇಕೆಂದು ಆಶಿಸಿದರೆ ಅಚಲ ಶ್ರದ್ಧೆಯಿರಲಿ. ಕೆಲಸಕ್ಕೆ ಬಾರದ ವಾದ ವಿವಾದಗಳಲ್ಲಿ ಕಾಲಹರಣ ಮಾಡದೆ, ಕ್ರಮೇಣ ಸಾಧನೆ ಮಾಡುತ್ತ ಹೋಗು. ಇಲ್ಲದೆ ಇದ್ದರೆ ನಿನ್ನ ಮೆದುಳು ಕೆಡುವುದು.

--ಶ್ರೀರಾಮಕೃಷ್ಣ ಪರಮಹಂಸ

🕉️🕉️ ಬ್ರಹ್ಮತತ್ವ ಭಾಗ 2 🕉️🕉️

ವೈರಾಗ್ಯ ಮಾನವನನ್ನು ಜ್ಞಾನಕ್ಕೆ ಒಯ್ಯುತ್ತದೆ. ಜ್ಞಾನಮಾರ್ಗದಲ್ಲಿ ಶ್ರವಣ, ಮನನ, ನಿಧಿಧ್ಯಾಸನ ಎಂಬ ಮೂರು ವಿಧವಾದ ಸಾಧನೆ ಇದೆ. ಮೊದಲನೆಯದಾಗಿ ಉಪನಿಷತ್ತುಗಳನ್ನು ಸರಿಯಾದ ಗುರುವಿನಲ್ಲಿ ಅಧ್ಯಯನ ಮಾಡುವುದು ಶ್ರವಣ. ಬ್ರಹ್ಮಜ್ಞಾನಿಯಾದ ಗುರುವಿನ ಸಂಗದಿಂದಲೇ ಜ್ಞಾನ ಪ್ರಾಪ್ತಿಯಾಗಬೇಕಾದರೆ. ಶ್ರವಣ ಮಾತ್ರ ಸಾಲದು. ಪದೇ ಪದೇ ಕೇಳಿದುದನ್ನು ಮನನ ಮಾಡಿ ಮಂದಟ್ಟು ಮಾಡಿಕೊಳ್ಳಬೇಕು. ಅನಂತರ ನಿಧಿಧ್ಯಾಸನದಿಂದ ಜಗತ್ತಿನ ಏಕೈಕ ಸತ್ಯವನ್ನು ಕಂಡುಕೊಳ್ಳಬೇಕು. ನಿಧಿಧ್ಯಾಸನವೆಂಬ ಸಾಧನೆಯಲ್ಲಿ ಉಪಾಸನೆ ಗಳಿವೆ. ಈ ಉಪಾಸನೆಗಳು ಬ್ರಾಹ್ಮಣಗಳಲ್ಲಿ ಹೇಳಿರುವ ಯಜ್ಞಯಾಗಾದಿಗಳಂತೆ ಪ್ರಾಧಾನ್ಯವನ್ನು ಪಡೆದಿವೆ. ಬ್ರಹ್ಮಜ್ಞಾನಿಯಾಗಲು ಸಾಮಾನ್ಯ ಮನುಷ್ಯನಿಗೆ ಸಾಧ್ಯವಿಲ್ಲವೆಂತಲೂ ಅಂಥವನು ಅತ್ಯಂತ ವಿರಳನೆಂದೂ ಕಠೋಪನಿಷತ್ತಿನಲ್ಲಿ ಹೇಳಲಾಗಿದೆ. ಸರ್ವಶಕ್ತನಾದ ಪರಬ್ರಹ್ಮ ನಿರ್ಗುಣನಂತೆ ನಿರೂಪಿತನಾಗಿದ್ದರೂ ಅವನು ದಯಾಮಯ ನೆಂದೂ ಸಂಸಾರ (ಜನ್ಮ, ಮೃತ್ಯು) ಬಂಧನದಿಂದ ನಮ್ಮನ್ನು ಬಿಡುಗಡೆ ಮಾಡುವವನೆಂದೂ ತಿಳಿಸಿ 32 ಉಪಾಸನೆಗಳನ್ನು ಹೇಳಿದೆ. ಅದರಲ್ಲಿ ಶರಣಾಗತಿ ಎಂಬುದನ್ನು ಸೇರಿಸಲಾಗಿದೆ.

ಮುಮುಕ್ಷುರ್ವೈ ಶರಣಮಹಂ ಪ್ರಪದ್ಯೇ-ಎಂಬುದನ್ನು ಶ್ವೇತಾಶ್ವತರೋಪನಿಷತ್ತಿನಲ್ಲಿ ಹೇಳಿದೆ. ಆದ್ದರಿಂದ ದಯಾಮಯನಾದ ಭಗವಂತನನ್ನು ಭಜಿಸುವ ಭಕ್ತಿಗೂ ಉಪನಿಷತ್ತುಗಳಲ್ಲಿ ಪ್ರಶಂಸೆ ಇದೆ. ಆತ್ಮ ಮತ್ತು ಜೀವಾತ್ಮ: ಉಪನಿಷತ್ತುಗಳು ಮೊದಮೊದಲು ಆತ್ಮನಿಗೂ ಬ್ರಹ್ಮನಿಗೂ ಭೇದವನ್ನು ಹೇಳುವಂತೆ ತೋರುತ್ತವೆ. ಆತ್ಮ ಎಂದರೆ ಚೇತನದಲ್ಲಿರುವ ಪರತತ್ತ್ವ, ಬ್ರಹ್ಮ ಎಂದರೆ ಜಗತ್ತಿನಲ್ಲಿರುವ ಪರತತ್ತ್ವ ಎಂಬ ಭಾವನೆ ಇದೆ. ಅವಿನಾಶಿಯಾದ ಚೇತನ ಅಥವಾ ಪ್ರಾಣವೇ ಆತ್ಮ. ಮಾನವನಲ್ಲಿ ಇರುವ ಅಂತಸ್ಸತ್ತ್ವ ಯಾವುದು ? ದೇಹ ನಾಶವಾದಾಗ ಅವನು ಏನಾಗುತ್ತಾನೆ? ಎಂಬ ಪ್ರಶ್ನೆಗಳನ್ನು ಉಪನಿಷತ್ತುಗಳು ಕೇಳಿವೆ. ಆತ್ಮ ಎಂದರೆ ಮಾನವನ ಅಂತಸ್ಸತ್ತ್ವ: ನಾಶವಾಗದೆ ಉಳಿಯುವ ಸತ್ಯ. ಅದರಂತೆ ಜಗತ್ತಿಗೆ ಅಂತಸ್ಸತ್ತ್ವ ಬ್ರಹ್ಮ. ಈ ಎರಡು ಅಂತಸ್ಸತ್ತ್ವಗಳೂ ಒಂದೇ ಎಂಬ ತತ್ತ್ವ ಕ್ರಮೇಣ ಬೆಳೆಯಿತು. ಆತ್ಮ ಮತ್ತು ಬ್ರಹ್ಮ ಶಬ್ದಗಳನ್ನು ಒಂದೇ ಅರ್ಥದಲ್ಲಿ ಪ್ರಯೋಗಿಸಲಾಗಿದೆ. ತನ್ನಲ್ಲಿರುವ ಸತ್ಯ ಯಾವುದು ? ಜಗತ್ತಿನಲ್ಲಿ ಯಾವ ಸತ್ಯವಿದೆ ? ಎಂದು ಮಾನವ ಒಳಗೂ ಹೊರಗೂ ಶೋಧನೆ ಮಾಡಲು ಯತ್ನಿಸಿ ಕೊನೆಗೆ ಏಕೈಕ ಸತ್ಯವೇ ತನಗೂ ಜಗತ್ತಿಗೂ ಕಾರಣವಾಗಿದೆ ಎಂದು ತತ್ತ್ವವನ್ನು ಕಂಡುಕೊಂಡನೆಂದು ಉಪನಿಷತ್ತುಗಳು ಹೇಳಿವೆ. ಒಳಗೂ ಹೊರಗೂ ಬ್ರಹ್ಮವೊಂದೇ ಇರುವುದು. ಉಳಿದುದೆಲ್ಲ ಅಸತ್ಯ, ಅನಿತ್ಯ-ಎಂಬುದೇ ಸಾರಾಂಶ. ದೇಹಕ್ಕೂ ಆತ್ಮಕ್ಕೂ ಯಾವ ಸಂಬಂಧವಿದೆಯೋ ಅದೇ ಜಗತ್ತಿಗೂ ಬ್ರಹ್ಮನಿಗೂ ಇರುವ ಸಂಬಂಧ ವೆಂದೂ ತಿಳಿಸಲಾಗಿದೆ. ಆತ್ಮನಿಗೂ ಬ್ರಹ್ಮನಿಗೂ ಸಮನ್ವಯ ಮಾಡಿ `ಸತ್ಯಂ ಜ್ಞಾನಂ ಅನಂತಂ’ ಆಗಿರುವ ಪರವನ್ನು ನಿರ್ದೇಶಿಸಲಾಗಿದೆ. ಜೀವಾತ್ಮನ ಸ್ವರೂಪವನ್ನು ಹೇಳುವಾಗ ಕಠೋಪನಿಷತ್ತಿನಲ್ಲಿ ಶರೀರವೆಂಬ ವೃಕ್ಷದಲ್ಲಿ ಜೀವ ಈಶ್ವರನೊಡನೆ ವಾಸಿಸುತ್ತಾನೆಂದೂ ಈಶ್ವರನನ್ನು ಕಾಣುವವರೆಗೂ ಮೋಹದಿಂದ ದೇಹವೇ ತಾನೆಂದು ಭ್ರಮಿಸಿ ತನ್ನ ಅಸಹಾಯಕತೆಗೂ ದುಃಖಸ್ಥಿತಿಗೂ ಶೋಕಿಸುತ್ತಾನೆಂದೂ ಆದರೆ ನಿತ್ಯನೂ ಜನನ ಮರಣ ರಹಿತನೂ ಆದ ಆತ್ಮನ ಸ್ವರೂಪವನ್ನು ಅರಿತಾಗ ಅವನ ಶೋಕಗಳು ಕಳೆದುಹೋಗುವುವೆಂದೂ ಹೇಳಿದೆ. ಜೀವಾತ್ಮನ ಸ್ವರೂಪವನ್ನು ಹೇಳುವಾಗ ಪ್ರಜಾಪತಿ ಛಾಂದೋಗ್ಯೋಪನಿಷತ್ತಿನಲ್ಲಿ ಉಪದೇಶಿಸಿದ್ದು ಹೀಗಿದೆ: ಇದನ್ನು ನೋಡುವೆನು, ತಿಳಿಯುವೆನು ಎಂದು ಯಾರು ತಿಳಿಯುವನೋ ಅವನೇ ಆತ್ಮ. ಅಮೃತಸ್ವರೂಪಿಯೂ ಅಶರೀರಿಯೂ ಆದ ಆತ್ಮನಿಗೆ ಅವನ ಕರ್ಮಾನುಗುಣವಾಗಿ ಈ ದೇಹ ವಾಸಸ್ಥಾನವಾಗುವುದು. ದೇಹಸಂಬಂಧದಿಂದ ಪ್ರಿಯ ಅಪ್ರಿಯಗಳಿಂದ ಆವೃತವಾಗುವ ಆತ್ಮನಿಗೆ ದೇಹವಿರುವವರೆಗೂ ಸುಖದುಃಖಗಳು ತಪ್ಪುವುದಿಲ್ಲ.

ಜಗತ್ತಿನ ಚೇತನಾಚೇತನ ವಸ್ತುಗಳಲ್ಲಿ ಸೂತ್ರದಂತೆ ಒಂದಾಗಿರುವ ಬ್ರಹ್ಮವಸ್ತು ಅಸಂಖ್ಯಾತ ಜೀವರನ್ನು ಸೃಷ್ಟಿಸಿ ಜೀವಾತ್ಮನೂ ಆಗಿದೆ. ಇವರನ್ನು ಸೃಷ್ಟಿಸುವಾಗ ಅವರವರ ಕರ್ಮಾನುಸಾರವಾದ ಜನ್ಮಪ್ರಾಪ್ತಿಯಾಗುತ್ತದೆ. ಅನಾದಿಯಾದ ಅವಿದ್ಯೆಯೇ ಅವರ ಪುಣ್ಯಪಾಪರೂಪವಾದ ಕರ್ಮಕ್ಕೆ ಕಾರಣ. ಶರೀರದಲ್ಲಿ ವಾಸಿಸುವುದರಿಂದ ಜೀವಾತ್ಮನಿಗೆ ಪುರುಷ (ಪುರೀಶಯಃ) ಎಂದು ನಿರ್ದೇಶ. ಪಂಚಭೂತಗಳಿಂದ ಉತ್ಪನ್ನವಾಗಿರುವ ಶರೀರೇಂದ್ರಿಯಗಳಿಗೆ ಸಂಬಂಧಿಸಿರುವ ಸೋಪಾಧಿಕ ಬ್ರಹ್ಮನಿಗೆ ಮೂರ್ತ, ಮತರ್ಯ್‌, ಪರಿಚ್ಛಿನ್ನ, ಸರ್ತ ಎಂಬ ರೂಪವುಂಟು. ಇದಕ್ಕೆ ವಿರೋಧವಾದ ಅಜವೂ ಅಜರವೂ ಅಮೃತವೂ ಅಭಯವೂ ಆಗಿ ಅದ್ವೈತವಾಗಿರುವ ಬ್ರಹ್ಮನನ್ನು ನೇತಿ ನೇತಿ ಎಂದು ನಿರ್ದೇಶಿಸಲಾಗಿದೆ. ಆದರೆ ಶರೀರಗಳನ್ನು ಪ್ರವೇಶಿಸಿದ ಪರಮಾತ್ಮ ಜೀವಾತ್ಮನಂತೆ ಕಾಣುತ್ತಾನೆಯೇ ಹೊರತು ಬ್ರಹ್ಮ ಜೀವಾತ್ಮನಿಂದ ಭಿನ್ನವಾಗಿಲ್ಲ. ಜೀವಾತ್ಮ ಸತ್ಯ, ಬ್ರಹ್ಮ ಸತ್ಯದ ಸತ್ಯ. ಪ್ರಾಣ, ಇಂದ್ರಿಯ, ಮನಸ್ಸು ಜೀವಾತ್ಮನಿಗೋಸ್ಕರವಾಗಿಯೇ ಜೀವನಿಗೆ ಅಧೀನವಾಗಿವೆ. ಸುಷುಪ್ತಿಯಲ್ಲಿ ಆತ್ಮ ಬ್ರಾಹ್ಮೀಸ್ಥಿತಿಯಲ್ಲಿ, ತನ್ನ ಪರಮಪದದಲ್ಲಿ ಪರಮ ಸಂಪತ್ತಿನಿಂದ ಕೂಡಿ ಪರಮಾನಂದದಿಂದಿರುತ್ತಾನೆ. ಇದೇ ಅವನ ಸ್ವಾಭಾವಿಕ ಸ್ಥಿತಿ, ಇತರ ಸಂಪತ್ತುಗಳೆಲ್ಲ ಕೃತಕ. ಜಾಗ್ರದವಸ್ಥೆಯಲ್ಲಿ ಅಹಂಕಾರದಿಂದ ಆವೃತನಾಗುತ್ತಾನೆ. ಬ್ರಹ್ಮನಿಂದ ತಾನು ಭಿನ್ನವೆಂದು ಭ್ರಮಿಸುತ್ತಾನೆ. ಸರ್ವವೂ ಆತ್ಮನೆಂದು (ಬ್ರಹ್ಮನೆಂದು) ಅರಿಯದೆ ಎಲ್ಲವನ್ನೂ ಆತ್ಮನಿಗಿಂತ ಭಿನ್ನವೆಂದು ಅರಿಯುವವನನ್ನು ಎಲ್ಲವೂ ನಿರಾಕರಿಸುವುವು. ಅಸಂಗನೂ ನಿರಾಸಕ್ತನೂ ಬಂಧರಹಿತನೂ ಶೋಕರಹಿತನೂ ಆದ ಆತ್ಮನಿಗಾಗಿಯೇ ಅಂದರೆ ಆತ್ಮನ ಪ್ರಯೋಜನಕ್ಕಾಗಿಯೇ ಎಲ್ಲವೂ ಪ್ರಿಯವಾಗಿರುತ್ತದೆ. ಎಲ್ಲದರ ಪ್ರಯೋಜನ ಕ್ಕಾಗಿ ಎಲ್ಲವೂ ಪ್ರಿಯವಾಗಿರುವುದಿಲ್ಲ. ಆದ್ದರಿಂದ ಆತ್ಮನನ್ನೇ ಕೇಳಬೇಕು, ಮನನ ಮಾಡಬೇಕು. ನಿಧಿಧ್ಯಾಸನ ಮಾಡಿ ಆತ್ಮಸಾಕ್ಷಾತ್ಕಾರ-ಅಂದರೆ ಬ್ರಹ್ಮಸಾಕ್ಷಾತ್ಕಾರ ಹೊಂದಬೇಕು.

ಕರ್ಮಸಿದ್ಧಾಂತವನ್ನೂ ಉಪನಿಷತ್ತುಗಳಲ್ಲಿ ನಿರೂಪಿಸಲಾಗಿದೆ. ಜನನಮರಣ ಪರಂಪರೆಗಳಿಗೆ ಜೀವಾತ್ಮನ ಕರ್ಮವೇ ಕಾರಣ. ಜೀವರುಗಳು ಅವರವರ ಪುಣ್ಯ ಪಾಪಾನುಸಾರವಾದ ಪುನರ್ಜನ್ಮಗಳನ್ನು ಪಡೆಯುತ್ತಾರೆ. ಭಗವಂತ ನಿಷ್ಪಕ್ಷಪಾತಿ. ಪುಣ್ಯಪಾಪ ಫಲಗಳ ನಿಯಾಮಕ. ಆದ್ದರಿಂದ ಕರ್ಮವನ್ನು ಮಾಡುವುದಕ್ಕೆ ಮಾತ್ರ ಜೀವ ಅಧಿಕಾರಿ, ಫಲವನ್ನು ಕೊಡುವವ ಪರಮಾತ್ಮ. ಆದ್ದರಿಂದ ಕರ್ಮವನ್ನು ನಿಷ್ಕಾಮಬುದ್ಧಿಯಿಂದ ಮಾಡಬೇಕು. ಆತ್ಮರು ಅನಾದಿಯಾದ ಅವಿದ್ಯೆಯ ಸಂಬಂಧದಿಂದ ತಮ್ಮ ನಿಜಸ್ವರೂಪವನ್ನರಿ ಯದೆ ಕರ್ಮಬಂಧನಕ್ಕೂ ಅದರಿಂದ ಸಂಸಾರಕ್ಕೂ ಸಿಕ್ಕಿ ನರಳುತ್ತಾರೆ-ಎಂದು ಉಪನಿಷತ್ ಗಳು ಹೇಳಿವೆ. ಐಹಿಕ ಸುಖಗಳು ಪ್ರೇಯವೇ ವಿನಾ ಶ್ರೇಯವಲ್ಲ. ನಿರತಿಶಯವಾದ ಆನಂದವನ್ನೂ ಪಡೆಯುವುದು ಬ್ರಹ್ಮಸಾಕ್ಷಾತ್ಕಾರದಿಂದ ಮಾತ್ರ. ಆನಂದಂ ಬ್ರಹ್ಮಣೋ ವಿದ್ವಾನ್ ನಬಿಭೇತಿ ಕದಾಚನೇತಿ.

ಜನ್ಮಕಾರಣವನ್ನಷ್ಟೇ ಹೇಳದೆ ಜನಿಸುವ ಬಗೆಯನ್ನು ಬೃಹದಾರಣ್ಯಕ ಪಂಚಾಗ್ನಿ ವಿದ್ಯೆಯಲ್ಲಿ ಹೇಳಿದೆ. ಪಾಂಚಾಲ ರಾಜನಾದ ಜೈಬಲಿ ಆರುಣಿಗೂ ಅವನ ಮಗ ಶ್ವೇತಕೇತು ವಿಗೂ ಈ ವಿದ್ಯೆಯನ್ನು ಉಪದೇಶಿಸುತ್ತಾನೆ. ಮೃತರಾದ ಮೇಲೆ ಜೀವರು ಯಾವ ಯಾನದಲ್ಲಿ ಹೋಗಿ ಯಾವ ರೀತಿ ಪುನಃ ಭೂಲೋಕಕ್ಕೆ ಹಿಂತಿರುಗುತ್ತಾರೆ ಎಂದು ವಿವರಿಸಲಾಗಿದೆ. ಬ್ರಹ್ಮಜ್ಞಾನಿಗಳು ದೇವಯಾನದಲ್ಲಿ ಪ್ರಯಾಣ ಮಾಡಿ ಬ್ರಹ್ಮಲೋಕಕ್ಕೆ ಹೋಗಿ ಸೇರುವರು. ಪುನಃ ಸಂಸಾರಕ್ಕೆ ಹಿಂತಿರುಗುವುದಿಲ್ಲ. ಬ್ರಹ್ಮೋಪಾಸನೆಯನ್ನು ಮಾಡದೆ, ಯಜ್ಞದಾನಾದಿಗಳಲ್ಲಿ ನಿರತರಾಗಿ ಕರ್ಮ ಮಾಡುವವರು ಪಿತೃಯಾನವೆಂಬ ಧೂಮಮಾರ್ಗದಲ್ಲಿ ಚಲಿಸಿ ಕರ್ಮಫಲಕ್ಷಯವಾದ ಮೇಲೆ ಭೂಮಿಗೆ ಹಿಂತಿರುಗುವರು. ಇದೇ ಪುನರ್ಜನ್ಮ ಸಿದ್ಧಾಂತ.

ದುಃಖಕರವಾದ ಸಂಸಾರಚಕ್ರದಿಂದ ಬಿಡುಗಡೆ ಹೊಂದುವುದೇ ಮೋಕ್ಷ. ಮೋಕ್ಷೋಪಾಯವಾಗುವುದು? ಎಂಬ ಪ್ರಶ್ನೆಯನ್ನು ಉಪನಿಷತ್ತುಗಳಲ್ಲಿ ಪುನಃ ಪುನಃ ವಿಮರ್ಶಿಸಲಾಗಿದೆ. ಪರಿಶುದ್ಧವಾದ ನಡತೆ, ಇಂದ್ರಿಯನಿಗ್ರಹ, ಆತ್ಮಶುದ್ಧಿ ಅತ್ಯಾವಶ್ಯಕವೆಂದೂ ಬ್ರಹ್ಮಸಾಕ್ಷಾತ್ಕಾರವೇ ಮಾನವನ ಗುರಿಯೆಂದೂ ಉಪನಿಷತ್ತುಗಳ ಉತ್ತರ. ನಿಜವಾದ ಯೋಗಿಯನ್ನು ಶಾಂತ, ದಾಂತ, ತಿತಿಕ್ಷು, ಉಪರತ, ಸಮಾಹಿತ ಎಂದು ವರ್ಣಿಸುತ್ತವೆ. ಮುಕ್ತರಾದವರು ನದಿಗಳು ಸಾಗರವನ್ನು ಸೇರುವಂತೆ, ನಾಮರೂಪಗಳನ್ನು ಕಳೆದುಕೊಂಡು ಸರ್ವಾತ್ಮಗಳನ್ನು ಸೇರುವರು. ಮೋಕ್ಷ ಆತ್ಮನಾಶವಲ್ಲ. ಅನಾದಿಯಾಗಿದ್ದ ಕರ್ಮಲೇಪ ಪುರ್ತಿಯಾಗಿ ತೊಳೆದು ಹೋಗಿ ಆತ್ಮ ಸ್ವರೂಪಾವಿರ್ಭಾವದಿಂದ, ಪೂರ್ಣವಿಕಾಸವಾದ ಜ್ಞಾನದಿಂದ ಪ್ರಜ್ವಲಿಸುತ್ತ ನಿರತಿಶಯವಾದ ಆನಂದವನ್ನು ಅನುಭವಿಸುವುದೇ ಮೋಕ್ಷ. ಕೆಲವು ಉಪನಿಷತ್ತುಗಳು ಮುಕ್ತರು ಪರಮಾತ್ಮನಿಗೆ ಸಮರಾಗುವರೆಂದೂ ಮತ್ತೆ ಕೆಲವು ಪರಮಾತ್ಮನೊಡನೆ ಸೇರಿಹೋಗುವವೆಂದೂ ಹೇಳಿವೆ. ಇನ್ನು ಕೆಲವು ಮಂತ್ರಗಳು ಜೀವ ಪರಮರಿಗೆ ಭೇದ ಮತ್ತು ಐಕ್ಯ ಎರಡನ್ನೂ ಹೇಳುವ ಘಟಕಶ್ರುತಿಗಳಾಗಿವೆ.

ಅಭೇದ ಶ್ರುತಿಗಳು ಅದ್ವೈತ ದರ್ಶನಕ್ಕೂ ಭೇದಶ್ರುತಿಗಳು ಭೇದದರ್ಶನಕ್ಕೂ ಆಧಾರವಾಗಿವೆ. ಭೇದಾಭೇದ ದರ್ಶನಗಳು ಎರಡು ವಿಧವಾದ ಶ್ರುತಿಗಳನ್ನೂ ಸ್ವೀಕರಿಸುತ್ತವೆ. ಸಗುಣ ಬ್ರಹ್ಮನನ್ನು ಕೆಲವು ಉಪನಿಷತ್ತುಗಳೂ ನಿರ್ಗುಣ ಬ್ರಹ್ಮವನ್ನು ಮತ್ತೆ ಕೆಲವೂ ಪ್ರತಿಪಾದಿಸುತ್ತವೆ, ಸಗುಣ ಶ್ರುತಿಗಳಿಗೆ ಪ್ರಾಧಾನ್ಯ ಕೊಡುವ ದರ್ಶನಗಳು ನಿರ್ಗುಣ ಶ್ರುತಿಗಳಿಗೆ ಹೇಯಗುಣರಾಹಿತ್ಯವೆಂದು ವಿವರಣೆ ಕೊಡುತ್ತವೆ. ನಿರ್ಗುಣ ಶ್ರುತಿಗಳಿಗೇ ಪ್ರಾಧಾನ್ಯ ಕೊಡುವ ದರ್ಶನಗಳು ಸಗುಣ ಶ್ರುತಿಗಳೇ ಪರಮಾಧಾರವೆಂದೂ ಹೇಳುತ್ತವೆ. ಹೀಗೆ ಉಪನಿಷತ್ತುಗಳು ಸರ್ವ ದರ್ಶನಗಳಿಗೂ ಪರಮಾಧಾರವಾಗಿಯೂ ರಹಸ್ಯವಾದ ಜ್ಞಾನಪ್ರಚೋದಕವಾಗಿಯೂ ಮಾನವ ಕೋಟಿಯ ಉದ್ಧಾರದ ಅಮೃತಧಾರೆಯಾಗಿಯೂ ಇವೆ.

🕉️🕉️🕉️ಬ್ರಹ್ಮತತ್ವ🕉️🕉️🕉️


ಮೂಲ ಎಂಬ ಅರ್ಥವುಳ್ಳ ಬೃಃ ಶಬ್ದದಿಂದ ಬ್ರಹ್ಮಶಬ್ದ ಬಂದಿದೆ. ಯಾವುದು ತಾನೇ ತನ್ನ ಅಂತಃಶಕ್ತಿಯಿಂದಲೇ ನಿರಾತಂಕವಾಗಿ ಆವಿರ್ಭವಿಸುವುದೋ ಅದೇ ಬ್ರಹ್ಮ. ಇದೇ ಜಗತ್ತಿಗೆ ಏಕೈಕ ಕಾರಣ ಮತ್ತು ಏಕಮೇವಾದ್ವಿತೀಯವಾದದ್ದು. ಉಪನಿಷತ್ಕಾರರ ಮೊದಲ ತತ್ತ್ವವೇ ಬ್ರಹ್ಮನನ್ನು ಕುರಿತದ್ದು. ಬ್ರಹ್ಮ ಮತ್ತು ಆತ್ಮ ಎಂಬ ಶಬ್ದಗಳು ಮೊಟ್ಟಮೊದಲು ಅಥರ್ವವೇದದಲ್ಲಿ ಉಪಯೋಗಿಸಲ್ಪಟ್ಟಿವೆ. ಪರಮಾತ್ಮಪರವಾಗಿ ಬ್ರಹ್ಮಶಬ್ದದ ಅರ್ಥಪುಷ್ಟಿಯನ್ನು ಅಲ್ಲಿ ಕಾಣುತ್ತೇವೆ.

ಉಪನಿಷತ್ಕಾರರ ಮೊದಲ ಪ್ರಶ್ನೆ ಜಗತ್ತು ಮತ್ತು ನಾವು ಎಲ್ಲಿಂದ ಬಂದೆವು ? ನಮ್ಮ ಮುಂದಿನ ಗತಿಗೂ ಸುಖದುಃಖಗಳಿಗೂ ಕಾರಣರಾರು ? ಎಂಬುದೇ ಆಗಿದೆ. ಉತ್ತರವಾಗಿ ಸತ್, ಆತ್ಮ, ಬ್ರಹ್ಮ, ಅಕ್ಷರ, ಆಕಾಶ ಶಬ್ದಗಳಿಂದ ಜಗತ್ಕಾರಣವಾದ ಪರವಸ್ತುವನ್ನು ಹೇಳಲಾಗಿದೆ. ಬ್ರಹ್ಮನೇ ಜಗತ್ತಿಗೆ ಉಪಾದಾನ ಕಾರಣ ಮತ್ತು ನಿಮಿತ್ತಕಾರಣ ಎರಡೂ. ಬ್ರಹ್ಮ ಹೊರತು ಮತ್ತಾವುದೂ ಮೊದಲು ಇರಲಿಲ್ಲವಾದ್ದರಿಂದ ಜಗತ್ತು ಬ್ರಹ್ಮಮಯ. ಸಂಕಲ್ಪ ಮಾತ್ರದಿಂದ ಜಗತ್ತನ್ನು ಸೃಷ್ಟಿಸಿ ಅದರಲ್ಲಿ ಬ್ರಹ್ಮ ಅಂತರ್ಯಾಮಿಯಾಗಿದೆ. ಸರ್ವಭೂತಗಳಿಗೂ ಅಂತರಾತ್ಮನಾದ ಬ್ರಹ್ಮವೊಂದೇ ಶಾಶ್ವತ, ಸರ್ವಶಕ್ತ, ಅನಂತ, ಪೂರ್ಣಕಾಮ. ಸರ್ವರಿಗೂ ಅಂತರಾತ್ಮನಾದ ಬ್ರಹ್ಮನಲ್ಲಿ ಸರ್ವ ಆತ್ಮಗಳೂ ಚಕ್ರದ ನೇಮಿ ಮತ್ತು ನಾಭಿಯಲ್ಲಿ ಅರೆಕಾಲುಗಳು ಹೇಗೋ ಹಾಗೆ ಅಡಕವಾಗಿದ್ದಾರೆ. ಲವಣ ನೀರಿನಲ್ಲಿ ಕರಗಿ ವ್ಯಾಪಿಸುವಂತೆ ಬ್ರಹ್ಮ ಸರ್ವವನ್ನೂ ವ್ಯಾಪಿಸಿದ್ದಾನೆ. ಅಗ್ನಿಯಿಂದ ಅಗ್ನಿಕಣಗಳೂ ಜೇಡರ ಹುಳುವಿನಿಂದ ಬಲೆಯ ಎಳೆಗಳೂ ವೇಣುವಿನಿಂದ ನಾದದ ಅಲೆಗಳೂ ಉದ್ಭವಿಸುವಂತೆ ಎಲ್ಲ ಭೂತಜಾತಗಳೂ ಬ್ರಹ್ಮನಿಂದಲೇ ಉದ್ಭವಿಸುತ್ತವೆ. ಎಲ್ಲ ಭೂತ ಜಾತಗಳಿಗೂ ಬ್ರಹ್ಮ ಏಕಾಯನನಾಗಿದ್ದಾನೆ.

ಬ್ರಹ್ಮನಿಗೂ ಜಗತ್ತಿಗೂ ಹೇಗೆ ಸಂಬಂಧ ಎಂಬ ವಿಚಾರದಲ್ಲಿ ಉಪನಿಷತ್ತುಗಳು ಹೀಗೆಯೇ ಎಂದು ಸ್ಪಷ್ಟವಾಗಿ ಹೇಳಿಲ್ಲ. ಅಂದರೆ ಆತ ವಿಶ್ವಾಂತರ್ಯಾಮಿಯೆಂದೂ ವಿಶ್ವಾತೀತನೆಂದೂ ಎರಡು ಬಗೆಯಾಗಿ ಹೇಳಿವೆ. ಹಾಗೆಯೇ ಸಪ್ರಪಂಚ ಬ್ರಹ್ಮ, ನಿಷ್ಪ್ರಪಂಚ ಬ್ರಹ್ಮರ ವಿಚಾರವೂ ಬರುತ್ತದೆ. ಈ ಎರಡು ವಾದಗಳ ಸಮರ್ಥನೆಗೂ ಉಪನಿಷತ್ತಿನಲ್ಲಿ ಸಾಕಷ್ಟು ತತ್ತ್ವಪ್ರತಿಪಾದನೆಯನ್ನು ಕಾಣುತ್ತೇವೆ. ಮುಂಡಕೋಪನಿಷತ್ತಿನಲ್ಲಿ ಎರಡು ವಾದಗಳನ್ನೂ ಸಮನ್ವಯ ಮಾಡುವ ಅರ್ಥವುಳ್ಳ ಒಂದು ಮಂತ್ರವಿದೆ. ಬ್ರಹ್ಮನನ್ನು ಬಿಟ್ಟು ಜಗತ್ತಿಗೆ ಬೇರೆ ಅಸ್ತಿತ್ವವಿಲ್ಲ. ಆದರೆ ಬ್ರಹ್ಮ ಜಗತ್ತಿಗೆ ಪರಿಮಿತನಾಗಿಲ್ಲ. ನಾಮರೂಪಗಳಿಗೆ ಸಿಲುಕಿಲ್ಲ. ಬ್ರಹ್ಮ ಪರಿಣಾಮವಾದದ ಪ್ರಕಾರ ಬ್ರಹ್ಮನೇ ಜಗತ್ತಿನ ರೂಪವನ್ನು ತಾಳುತ್ತಾನೆ. ಇದು ಸಪ್ರಪಂಚವಾದ. ಬ್ರಹ್ಮ ಜಗತ್ತಿಗೆ ಕಾರಣನಾಗಿದ್ದು, ನಾಮರೂಪ ಜಗತ್ತು ಬ್ರಹ್ಮನಷ್ಟು ಸತ್ಯವಲ್ಲವೆಂಬುದು ನಿಷ್ಪ್ರಪಂಚವಾದ. ಇದರ ಪ್ರಕಾರ ಬ್ರಹ್ಮ ಜಗತ್ತಿನಂತೆ ಕಾಣಿಸಿಕೊಳ್ಳುತ್ತಾನೆ. ಅಂದರೆ ಬ್ರಹ್ಮವಿವರ್ತವಾದ ಸಮರ್ಥನೆ ಇದೇ. ಆದರೆ ಬ್ರಹ್ಮನೇ ಏಕಮೇವಾದ್ವಿತೀಯವಾದ ಸತ್ಯ ಎಂಬುದನ್ನು ನಿಸ್ಸಂಶಯವಾಗಿ ಸಾರಲಾಗಿದೆ. ನಿಷ್ಪ್ರಪಂಚನಾದ ಬ್ರಹ್ಮ ಸಪ್ರಪಂಚನಂತೆ ಕಾಣಿಸುತ್ತಾನೆಂದು ಹೇಳುವುದು ಮಾಯಾವಾದ. ಅದ್ವೈತವಾದ ಇದನ್ನೇ ಹೆಚ್ಚು ವಿಸ್ತಾರವಾಗಿ ವಿವರಿಸಿದೆ. ಉಪನಿಷತ್ತುಗಳಲ್ಲಿ ಮಾಯೆ ಎಂಬ ಶಬ್ದ ಅಷ್ಟು ನಿರ್ದಿಷ್ಟವಾಗಿಲ್ಲ. ಇದರ ಅರ್ಥವನ್ನೇ ಕೊಡುವ ಅವಿದ್ಯೆ ಎಂಬ ಮತ್ತೊಂದು ಪದದ ಪ್ರಯೋಗವೂ ಇದೆ.

ನಾಮರೂಪ ಜಗತ್ತಿನ ಸೃಷ್ಟಿಕ್ರಮವನ್ನು ಉಪನಿಷತ್ತುಗಳು ಹೇಳುವಾಗ ಚೇತನ, ಅಚೇತನ ಎಂಬ ಭೇದವನ್ನು ಹೇಳಿವೆ. ಅಚೇತನ ಜಗತ್ತು ಚೇತನ ಜೀವಗಳಿಗೆ ಸಾಧನಸಾಮಗ್ರಿ ಮಾತ್ರ. ಅದು ಪಂಚಭೂತಗಳಿಂದ ಕೂಡಿದೆ. ಪೃಥ್ವಿ, ಅಪ್, ತೇಜಸ್, ವಾಯು, ಆಕಾಶ ಎಂಬುವೇ ಇವು. ಛಾಂದೋಗ್ಯೋಪನಿಷತ್ತಿನಲ್ಲಿ ಅಗ್ನಿ, ಜಲ, ಪೃಥ್ವಿ ಎಂಬುವು ಬ್ರಹ್ಮನಿಂದ ಕ್ರಮವಾಗಿ ಸೃಷ್ಟಿಯಾದುವೆಂದು ಹೇಳಲಾಗಿದೆ. ತೇಜಸ್ಸು, ಜಲ, ಅನ್ನಗಳೇ ಇತರ ಸಕಲ ಭೂತಜಾತಗಳಿಗೆ ಮೂಲಕಾರಣ. ಈ ಮೂರನ್ನು ಸೃಷ್ಟಿಸಿದ ಮೇಲೆ ಇದನ್ನು ಒಂದುಗೂಡಿಸಿ ಅವುಗಳೊಂದಿಗೆ ಜೀವನಸಹಿತ ಪ್ರವೇಶಿಸಿ ನಾಮರೂಪಾತ್ಮಕವಾದ ಜಗತ್ತನ್ನು ಸೃಜಿಸಲು ಬ್ರಹ್ಮ ಸಂಕಲ್ಪಿಸಿತು. ಹೀಗೆ ಜಗತ್ತಿಗೆ ಬ್ರಹ್ಮವೇ ಉಪಾದಾನಕಾರಣ, ನಿಮಿತ್ತಕಾರಣ ಎರಡೂ ಆಗಿದೆ. ಐತರೇಯ, ತೈತ್ತಿರೀಯ ಉಪನಿಷತ್ತುಗಳಲ್ಲಿಯೂ ಪರಮಾತ್ಮಸಂಕಲ್ಪದಿಂದ ಸೃಷ್ಟಿ ಯೆಂದೂ ಅದರೊಳಗೆ ಬ್ರಹ್ಮನೇ ಅಂತಃಪ್ರವೇಶ ಮಾಡಿದನೆಂದೂ ಭಾವವಿದೆ. ಕಾರಣರೂಪಿ ಯಾದ ಬ್ರಹ್ಮನನ್ನು ತಿಳಿದವ ಅದರಿಂದಾದ ಪಂಚಭೌತಿಕ ಜಗತ್ತನ್ನೂ ಅರಿಯುತ್ತಾನೆ.

ಬ್ರಹ್ಮಜ್ಞಾನವನ್ನು ಪಡೆಯುವ ಕ್ರಮವನ್ನು ಕುರಿತು ಪರಾವಿದ್ಯೆ, ಅಪರಾವಿದ್ಯೆಗಳ ಭೇದವನ್ನು ಹೇಳಿದೆ. ಬ್ರಹ್ಮನನ್ನು ತಿಳಿಯುವುದು ಪರಾವಿದ್ಯೆ. ನಾಮರೂಪವಾದ ಜಗತ್ತನ್ನು ತಿಳಿಯುವುದು ಅಪರಾವಿದ್ಯೆ. ಮಣ್ಣನ್ನು ತಿಳಿಯುವುದರಿಂದ ಮಣ್ಣಿನಿಂದಾದುವೆಲ್ಲವನ್ನೂ ತಿಳಿಯುವಂತೆ, ಬ್ರಹ್ಮನನ್ನು ತಿಳಿದರೆ ಎಲ್ಲವನ್ನೂ ತಿಳಿದಂತೆ, ಇದಕ್ಕಿಂತ ಹೆಚ್ಚಿನ ವಿದ್ಯೆ ಯಾವುದೂ ಇಲ್ಲ. ಹೀಗೆಂದು ಮುಂಡಕೋಪನಿಷತ್ ಹೇಳುತ್ತದೆ. ಆದರೆ ಈಶೋಪನಿಷತ್ ಬ್ರಹ್ಮನನ್ನು ಅರಿಯಲು ಸಾಧ್ಯವಿಲ್ಲವೆಂದು ಬ್ರಹ್ಮಸ್ವರೂಪವನ್ನು ಹೇಳುವಾಗ ಸೂಚಿಸುತ್ತದೆ. ‘ಚಲಿಸುತ್ತದೆ, ಚಲಿಸುವುದಿಲ್ಲ, ದೂರದಲ್ಲಿದೆ, ಸಮೀಪದಲ್ಲಿದೆ, ಒಳಗೂ ಇದೆ, ಹೊರಗೂ ಇದೆ.’ ಹೀಗೆಯೇ ಬೃಹದಾರಣ್ಯಕದಲ್ಲಿ ಅಕ್ಷರರೂಪಿಯಾದ ವಿಶ್ವಾತ್ಮನನ್ನು ಕುರಿತು `ಸ್ಥೂಲನಲ್ಲ, ಅಣುವಲ್ಲ, ಹ್ರಸ್ವನಲ್ಲ, ದೀರ್ಘನಲ್ಲ, ಅಗ್ನಿಯಂತೆ ಕೆಂಪಾಗಿಲ್ಲ, ಜಲದಂತೆ ಹರಿಯುವುದಿಲ್ಲ. ನೆರಳಲ್ಲ, ಕತ್ತಲೆಯಲ್ಲ, ವಾಯುವಾಗಲೀ ಆಕಾಶವಾಗಲೀ ಅಲ್ಲ, ಸಂಸರ್ಗವುಳ್ಳದ್ದಲ್ಲ, ರಸವಲ್ಲ, ಗಂಧವಲ್ಲ. ಅದಕ್ಕೆ ಕಣ್ಣುಗಳಿಲ್ಲ, ಅದು ಅಳತೆಗೊಳಗಾದುದಲ್ಲ, ಒಳಗಿಲ್ಲ, ಹೊರಗಿಲ್ಲ’ ಎಂಬ ವಿವರಣೆ ಇದೆ. ಕೊನೆಯಲ್ಲಿ ಅರಿಯಲ್ಪಡುವವನೂ ನೋಡುವವನೂ ಮನನಮಾಡು ವವನೂ ಅರಿಯುವವನೂ ಅದಲ್ಲದೆ ಬೇರೆಯಲ್ಲ. ಈ ಅಕ್ಷರನಲ್ಲಿ ಎಲ್ಲವೂ ಓತಪ್ರೋತವಾಗಿದೆ. ಯಾವನು ಈ ಅಕ್ಷರನನ್ನು ತಿಳಿದು, ಈ ಲೋಕವನ್ನೇ ಬಿಡುವನೋ ಅವನು ಬ್ರಹ್ಮಜ್ಞನೆನಿಸುವನು ಎಂದು ಹೇಳಿದ್ದರೂ ವಾಕ್ಕಿಗೂ ಮನಸ್ಸಿಗೂ ದೂರನಾಗಿರುವನೆಂಬ ಸೂಚನೆ ಇದೆ. ಇದು ವಾಚಕ್ನವೀಗಾರ್ಗಿಗೆ ಯಾಜ್ಞವಲ್ಕ್ಯ ಜನಕನ ಸಭೆಯಲ್ಲಿ ಮಾಡಿದ ಉಪದೇಶ. ಧನದಲ್ಲಿ ನಿರಾಸಕ್ತಳಾಗಿ, ಅಮೃತತ್ವವನ್ನು ಪಡೆಯುವ ಅಭಿಲಾಷೆಯಿಂದ ತನ್ನ ಪತ್ನಿ ಮೈತ್ರೇಯಿ ಬ್ರಹ್ಮೋಪದೇಶ ಮಾಡಬೇಕೆಂದು ಬೇಡಿದಾಗಲೂ ಯಾಜ್ಞವಲ್ಕ್ಯ ಸರ್ವಾಂತರ್ಯಾಮಿಯಾದ ಆತ್ಮನನ್ನು (ಬ್ರಹ್ಮ) ತಿಳಿಯುವುದರಿಂದ ಮಾತ್ರವೇ ಅಮೃತತ್ವವನ್ನು ಪಡೆಯಬಹುದೆಂದೂ ಅವನೊಬ್ಬನನ್ನು ತಿಳಿದರೆ ಸರ್ವವನ್ನೂ ತಿಳಿದಂತಾಗುವುದೆಂದೂ ಹೇಳುತ್ತಾನೆ. ಆದರೆ ಬ್ರಹ್ಮತತ್ತ್ವವನ್ನು ತಿಳಿಯುವುದಾಗುವುದಿಲ್ಲ. ಬ್ರಹ್ಮನ ಹೊರತು ಮತ್ತಾವುದೂ ಇಲ್ಲ ಎಂದು ತಿಳಿಯಬೇಕಾದರೆ ಬ್ರಹ್ಮತ್ವವನ್ನು ಪಡೆಯುವುದರಿಂದ ಮಾತ್ರ ಸಾಧ್ಯ ಎಂದೂ ಅಹಂ ಬ್ರಹ್ಮಾಸ್ಮಿ, ತತ್ತ್ವಮಸಿ ಎಂಬ ಜ್ಞಾನವುಂಟಾಗಬೇಕೆಂದೂ ಇದೇ ಉಪನಿಷತ್ತಿನ ಸಾರವೆಂದೂ ಶಂಕರಾಚಾರ್ಯರು ಪ್ರತಿಪಾದಿಸುತ್ತಾರೆ. ಅವರ ವೇದಾಂತಸೂತ್ರಭಾಷ್ಯದಲ್ಲಿ ಬಾಷ್ಕಲಿ ಎಂಬ ಶಿಷ್ಯ ಬಾಧ್ವ ಎಂಬ ಗುರುವಿನಲ್ಲಿ ಬ್ರಹ್ಮಜ್ಞಾನವನ್ನು ಉಪದೇಶಿಸಬೇಕೆಂದು ಕೋರಿದ ಸಂದರ್ಭದಲ್ಲಿ ಮೂರನೆಯ ಸಲ ಕೇಳಿದಾಗಲೂ ಮೌನವಾಗಿದ್ದ ಗುರು ‘ಉಪಶಾಂತೋಯಂ ಆತ್ಮಾ’ ಎಂದು ಕೊನೆಯಲ್ಲಿ ಉಪದೇಶಿಸಿದುದನ್ನು ಉದಾಹರಿಸಿದ್ದಾರೆ. ಬ್ರಹ್ಮನನ್ನು ವರ್ಣಿಸಲು ಸಾಧ್ಯವಿಲ್ಲ, ಬ್ರಹ್ಮನನ್ನು ಅರಿತವ ಬ್ರಹ್ಮನಾಗುತ್ತಾನೆ-ಎಂಬುದೇ ಸಾರಾಂಶ. ಬೃಹದಾರಣ್ಯಕ ‘ನೇತಿ, ನೇತಿ’ ಎಂದು ಬ್ರಹ್ಮಸ್ವರೂಪವನ್ನು ತಿಳಿಸಲೆತ್ನಿಸಿದೆ.

ಜ್ಞಾನಮಾರ್ಗವನ್ನಷ್ಟೇ ಅಲ್ಲದೆ, ಉಪನಿಷತ್ತುಗಳು ಭಕ್ತಿ ಮತ್ತು ಕರ್ಮಮಾರ್ಗಗಳನ್ನೂ ಅನುಮೋದಿಸಿವೆ. ಜಾಗ್ರತ್, ಸ್ವಪ್ನ, ಸುಷುಪ್ತಿ, ತುರೀಯ ಎಂಬ ನಾಲ್ಕು ಅವಸ್ಥೆಗಳಲ್ಲಿ ನಾಲ್ಕನೆಯದರಲ್ಲಿ ಯೋಗಶಕ್ತಿಯಿಂದ ಬ್ರಹ್ಮಜ್ಞಾನ ಉಂಟಾಗುತ್ತದೆ ಎಂದು ಉಪನಿಷತ್ತುಗಳಲ್ಲಿ ಹೇಳಲಾಗಿದೆ. ಆದರೂ ಈ ಜ್ಞಾನಮಾರ್ಗದಲ್ಲಿ ಕರ್ಮಕ್ಕೂ ಭಕ್ತಿಗೂ ಅವಕಾಶವನ್ನು ಕಲ್ಪಿಸಲಾಗಿದೆ. ತೈತ್ತಿರೀಯೋಪನಿಷತ್ತಿನಲ್ಲಿ ಸತ್ಯನಿಷ್ಠೆ, ತಪಸ್ಸು, ವೇದಾಧ್ಯಯನಗಳಿಂದ ಅಮೃತತ್ವವುಂಟಾಗುತ್ತದೆ ಎಂದು ಹೇಳಲಾಗಿದೆ. ಅಹಂಕಾರನಿವೃತ್ತಿಯಾದಾಗಲೇ ಬ್ರಹ್ಮಜ್ಞಾನ ಪ್ರಾಪ್ತಿ. ಬ್ರಹ್ಮಚರ್ಯ, ಗೃಹಸ್ಥ, ವಾನಪ್ರಸ್ಥ ಎಂಬ ಮೂರು ಆಶ್ರಮಗಳಲ್ಲಿದ್ದು ಮಾನವ ಸರ್ವಸಂಗ ಪರಿತ್ಯಾಗ ಭಾವನೆಯಿಂದ ವೈರಾಗ್ಯವನ್ನು ಅಭ್ಯಾಸ ಮಾಡಿದರೆ ಸಂನ್ಯಾಸಾಶ್ರಮ, ಅದರೊಂದಿಗೆ ಬ್ರಹ್ಮಜ್ಞಾನ ಪ್ರಾಪ್ತಿಯಾಗುತ್ತವೆ ಎಂದು ತಿಳಿಸಲಾಗಿದೆ. ಹೀಗೆ ಮೋಕ್ಷಕ್ಕೆ ಅಂದರೆ ಬ್ರಹ್ಮಸಾಕ್ಷಾತ್ಕಾರಕ್ಕೆ ಪೂರ್ವಭಾವಿಯಾಗಿ ಸಾಧನೆಯೂ ಅಗತ್ಯ. ಬೃಹದಾರಣ್ಯಕದಲ್ಲಿ ಪ್ರಜಾಪತಿಯ ಮಕ್ಕಳನ್ನು ದೇವ, ಮನುಷ್ಯ, ಅಸುರ ಎಂದು ವರ್ಗೀಕರಿಸಿ ಅವರಿಗೆ ಪ್ರಜಾಪತಿ ಕರ್ತವ್ಯವನ್ನು ವಿಧಿಸುವಾಗ ಅಸುರರಿಗೆ ದಯಧ್ವಂ ಎಂದೂ ಮನುಷ್ಯರಿಗೆ ದತ್ತ ಎಂದೂ ದೇವತೆಗಳಿಗೆ ದಾಮ್ಯತ ಎಂದೂ ವಿಧಿಸಿರುವ ಸಂಗತಿ ಇದೆ. ಅಂದರೆ ಮಾನವರು ಸಮಾಜದಲ್ಲಿ ಪರಹಿತವನ್ನು ಆಚರಿಸತಕ್ಕದ್ದು, ಲೋಕವನ್ನು ತ್ಯಜಿಸಿ ಒಂಟಿಯಾಗಿದ್ದರೆ ಮಾತ್ರ ಮೋಕ್ಷಪ್ರಾಪ್ತಿಯಲ್ಲ ಎಂಬುದೇ ಸಾರಾಂಶ.

*ತುಂಬಾ ಮನಮುಟ್ಟುವ ಕಥೆ ದಯವಿಟ್ಟು ಸಂಪೂರ್ಣ ಓದಿ.*

*ಒಂದು ಕಪ್ ಮೊಸರೂ,
ಅಪ್ಪನ ಬಿಸಿಯುಸಿರೂ. *

ಬೆಂಗಳೂರಿನ ಯಶವಂತಪುರದಿಂದ ಹಾಸನಕ್ಕೆ ಅಥವಾ ತುಮಕೂರಿಗೆ ಹೋಗುವ ದಾರಿಯಲ್ಲೇ ಗೊರಗುಂಟೆಪಾಳ್ಯವಿದೆ. ಅಲ್ಲಿಂದ ಹೆಬ್ಬಾಳಕ್ಕೆ ಹೋಗುವ ರಸ್ತೆಯಲ್ಲಿ ಅರ್ಧ ಕಿಲೋ ಮೀಟರ್ ಹೋದರೆ,ಸ್ಟ್ಯಾಂಡರ್ಡ್ ಮೆಕ್ಯಾನಿಕಲ್  ವರ್ಕ್ಸ್ ಫ್ಯಾಕ್ಟರಿ ಸಿಗುತ್ತದೆ. ಹೆಚ್ಚಿನ ಸದ್ದಾಗದಂತೆ ಕಾರ್ಯ ನಿರ್ವಹಿಸುವ ವಿದೇಶಿ ನಿರ್ಮಿತ ಯಂತ್ರಗಳು ಅಲ್ಲಿವೆ. ಫ್ಯಾನ್, ರೆಫ್ರಿಜರೇಟರ್, ಟಿ.ವಿಗಳಿಗೆ ಅಗತ್ಯವಾಗಿ ಬೇಕಾಗುವ ಬಿಡಿಭಾಗಗಳನ್ನು ಅಲ್ಲಿ ಉತ್ಪಾದಿಸಲಾಗುತ್ತದೆ. ಎಲ್ಲಾ ಪ್ರಮುಖ ಕಂಪನಿಗಳಿಗೂ ಬಿಡಿ ಭಾಗಗಳನ್ನು ಸಪ್ಲೈ ಮಾಡುತ್ತಿರುವುದರಿಂದ ಸ್ಟ್ಯಾoಡರ್ಡ್ ಮೆಕ್ಯಾನಿಕಲ್‌ಸ್‌ ಫ್ಯಾಕ್ಟರಿಗೆ ಒಳ್ಳೆಯ ಹೆಸರೂ ಇದೆ.

ಈ ಫ್ಯಾಕ್ಟರಿ ಮಾಲೀಕನೇ ರಂಗಸ್ವಾಮಿ. ಈತ, ಅರಸೀಕೆರೆ ಸಮೀಪದ ಹಳ್ಳಿಯವನು. ಸಿದ್ದಗಂಗಾ ಮಠದಲ್ಲಿ ಹೈಸ್ಕೂಲು, ತುಮಕೂರಿನಲ್ಲಿ ಐಟಿಐ ಓದಿದವನು ಸೀದಾ ಬಂದಿದ್ದು ಪೀಣ್ಯಕ್ಕೆ. ಹೆಲ್ಪರ್ ಆಗಿ ಒಂದು ಫ್ಯಾಕ್ಟರಿ ಸೇರಿಕೊಂಡವನು ಐದು ವರ್ಷದಲ್ಲಿ ಎಲ್ಲ ಬಗೆಯ ಕೆಲಸ ಕಲಿತ. ನಂತರ ಮಾರ್ಕೆಟಿಂಗ್ ಮ್ಯಾನೇಜರ್ ಆದ. ಮಾರಾಟಕ್ಕೆ ಸಂಬಂಧಿಸಿದ ಆಳ-ಅಗಲಗಳು ರಂಗಸ್ವಾಮಿಗೆ ಪರಿಚಯವಾದದ್ದೇ ಆಗ. ಹತ್ತಾರು ಕಂಪನಿಗಳ ಮುಖ್ಯಸ್ಥರ ಒಡನಾಟ, ವಿಶ್ವಾಸ, ಅಲ್ಲಿನ ವಹಿವಾಟುಗಳಿಗೆ ಇರುವ ಬೇಡಿಕೆಯನ್ನು ಗಮನಿಸಿದ ನಂತರ, ಹೇಗಿದ್ರೂ ಎಲ್ಲ ಕೆಲಸದ ಬಗ್ಗೆ ಗೊತ್ತಿದೆ. ಒಂದೆರಡು ಕಂಪನಿಗಳಿಂದ ಕಾಂಟ್ರಾಕ್ಟ್ ತಗೊಂಡು ಸ್ಪೇರ್ ಪಾರ್ಟ್ಸ್ ಉತ್ಪಾಾದನೆಯ ಸ್ವಂತ ಫ್ಯಾಕ್ಟರಿ ಶುರು ಮಾಡಿದ್ರೆ ಹೇಗೆ ಎಂಬ ಯೋಚನೆಯೂ ಅವನಿಗೆ ಬಂತು.

ರಂಗಸ್ವಾಮಿ ತಡಮಾಡಲಿಲ್ಲ. ಒಂದು ಪುಟ್ಟ ಶೆಡ್‌ನಲ್ಲಿ ಫ್ಯಾಕ್ಟರಿಯನ್ನು ಆರಂಭಿಸಿಯೇಬಿಟ್ಟ. ಯೌವನದ ಹುಮ್ಮಸ್ಸು ಹಾಗೂ ಗೆಲ್ಲಬೇಕೆಂಬ ಹಠದಿಂದ ಹಗಲಿರುಳೂ ದುಡಿದ. ಪರಿಣಾಮ, ಕೆಲವೇ ದಿನಗಳಲ್ಲಿ ರಂಗಸ್ವಾಮಿಯ ಬ್ಯಾಂಕ್ ಬ್ಯಾಲೆನ್ಸ್  ದುಪ್ಪಟ್ಟಾಯಿತು. ಅದುವರೆಗೂ ಸೆಕೆಂಡ್‌ ಹ್ಯಾಂಡ್  ಹೀರೋ ಹೋಂಡಾದಲ್ಲಿ ಓಡಾಡುತ್ತಿದ್ದವನು, ಒಟ್ಟಿಗೇ ಎರಡು ಕಾರ್ ಖರೀದಿಸುವಷ್ಟು ಶ್ರೀಮಂತನಾದ. 25 ಮಂದಿಗೆ ಕೆಲಸ ಕೊಟ್ಟ. ಫ್ಯಾಕ್ಟರಿಗೆ ಸ್ವಂತ ಬಿಲ್ಡಿಂಗ್ ಕಟ್ಟಿಸಿದ. ವಾಸಕ್ಕೆ, ಯಶವಂತಪುರದಲ್ಲೇ ಒಂದು ಮನೆ ಖರೀದಿಸಿದ. ಇಷ್ಟೆಲ್ಲ ಆದಮೇಲೆ, ರಂಗಸ್ವಾಮಿಯ ಯಶೋ ಗಾಥೆ ನೂರಾರು ಮಂದಿಯನ್ನು ತಲುಪಿತು. ಹೇಗಿದ್ದವನು ಹೇಗಾಗಿಬಿಟ್ಟ ಅಲ್ವ ಎಂದು ಎಲ್ಲರೂ ಬೆರಗಾಗುವ ವೇಳೆಗೇ, ಹಳೇ ಪರಿಚಯದ ಹುಡುಗಿಯೊಂದಿಗೆ ಮದುವೆಯಾದ ರಂಗಸ್ವಾಮಿ, ವರ್ಷದ ನಂತರ ಗಂಡು ಮಗುವಿನ ತಂದೆಯೂ ಆದ.

ಕೈ ತುಂಬಾ ವರಮಾನ ಕೊಡುವ ಕೆಲಸ, ಮನ ಮೆಚ್ಚಿದ ಹೆಂಡತಿ, ಖುಷಿ ಹೆಚ್ಚಿಸುವ ಮಗ, ಸಮಾಜದಲ್ಲಿ ವಿಶೇಷ ಸ್ಥಾನಮಾನ, ಯಾರಿಗೂ ಸಾಲ ಕೊಡಬೇಕಿಲ್ಲ ಎಂಬ ನಿರಾಳ ಭಾವ... ಲೈಫ್ ಈಸ್ ಬ್ಯೂಟಿಫುಲ್ ಎನ್ನಲು ಇಷ್ಟು ಸಾಕಲ್ಲವೇ? ರಂಗಸ್ವಾಮಿಯೂ ಇಂಥದೇ ಸಂಭ್ರಮದಲ್ಲಿದ್ದ. ಆಗಲೇ, ಯಾರೂ ನಿರೀಕ್ಷಿಸದ ಆಘಾತವೊಂದು ಅವನನ್ನು ಅಪ್ಪಳಿಸಿತು. ಅದೊಂದು ದಿನ ಮಾರ್ಕೆಟ್‌ಗೆ ಹೋಗಿ ವಾಪಸಾಗುತ್ತಿದ್ದ ರಂಗಸ್ವಾಮಿಯ ಪತ್ನಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ...
***
‘ಈಗಾಗ್ಲೇ ನನಗೂ ನಲವತ್ತೈದು ತುಂಬಿದೆ. ಮಗ 7ನೇ ಕ್ಲಾಸ್‌ಗೆ ಬಂದಿದಾನೆ. ಹೀಗಿರುವಾಗ ಇನ್ನೊಂದು ಮದುವೆಯಾಗಿ ಸಾಧಿಸೋದೇನಿದೆ? ಸೆಕೆಂಡ್ ಮ್ಯಾರೇಜ್ ಮಾಡ್ಕೊಂಡೆ ಅಂತಿಟ್ಕೊಳ್ಳಿ, ಹೊಸದಾಗಿ ಬಂದ ಹೆಂಡತಿ ನನ್ನ ಮಗನನ್ನು ತಿರಸ್ಕಾರದಿಂದ ನೋಡಿಬಿಟ್ರೆ, ಅಥವಾ ಹೆಂಡತಿಯ ಮೇಲಿನ ಮೋಹದಿಂದ ನಾನೇ ವಿಲನ್ ಥರಾ ವರ್ತಿಸಿಬಿಟ್ರೆ? ಬೇಡ ಬೇಡ. ಇಂಥ ಸಂದರ್ಭಗಳು ಜೊತೆಯಾಗೋದೇ ಬೇಡ. ನನಗಿನ್ನು ಮಗನೇ ಸರ್ವಸ್ವ . ಹೆಂಡತಿಯ ನೆನಪನ್ನು ಜೊತೆಗಿಟ್ಟುಕೊಂಡೇ ಇವನನ್ನು ಚೆನ್ನಾಗಿ ಓದಿಸ್ತೇನೆ...’. ಎರಡನೇ ಮದುವೆ ಮಾಡಿಕೊಳ್ಳಪ್ಪಾ ಎಂದು ಒತ್ತಾಯಿಸಲು ಬಂದ ಬಂಧುಗಳು ಹಾಗೂ ಹಿತೈಷಿಗಳಿಗೆ ರಂಗಸ್ವಾಮಿ ಹೇಳಿದ ಖಡಕ್ ಮಾತುಗಳಿವು.

ರಂಗಸ್ವಾಮಿ ಮಾತಿಗೆ ತಪ್ಪಲಿಲ್ಲ. ಅವನು ಮಗನನ್ನು ಕಣ್ರೆಪ್ಪೆಯಷ್ಟು ಜೋಪಾನವಾಗಿ ನೋಡಿಕೊಂಡ. ಒಳ್ಳೆಯ ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದಿಸಿದ. ನನಗೆ ನೀನೇ ಪ್ರಪಂಚ. ನೀನು ಜೊತೆಗಿಲ್ಲದೆ ನಾನು ಬದುಕಲಾರೆ ಎಂಬುದನ್ನು ಪರೋಕ್ಷವಾಗಿ ಮನದಟ್ಟು ಮಾಡಿಕೊಟ್ಟ.ಮುಂದೊಂದು ದಿನ- ‘ನನ್ನ ಕ್ಲಾಸ್ ಮೇಟ್ ಹುಡುಗೀನ ಲವ್ ಮಾಡಿದೀನಪ್ಪಾ. ಅವಳನ್ನೇ ಮದುವೆ ಆಗ್ತೀನಿ. ಅವರ ಮನೇಲಿ ಒಪ್ಪಿದಾರೆ. ನಿನ್ನ ಒಪ್ಪಿಗೆ ಬೇಕಪ್ಪಾ...’ ವಿಧೇಯನಾಗಿಯೇ ಹೇಳಿದ್ದ ಮಗ. ರಂಗಸ್ವಾಮಿ ಅದನ್ನೂ ಆಕ್ಷೇಪಿಸಲಿಲ್ಲ. ಅದ್ಧೂರಿಯಾಗಿ  ಮದುವೆ ಮಾಡಿಕೊಟ್ಟ. ಇದಾಗಿ ವರ್ಷ ಕಳೆಯುತ್ತಲೇ ಫ್ಯಾಕ್ಟರಿ ವ್ಯವಹಾರವನ್ನೆಲ್ಲ ಮಗನಿಗೆ ವಹಿಸಿಕೊಟ್ಟು, ‘ನನಗೆ ವಯಸ್ಸಾಯಿತು ಕಣಪ್ಪಾ. ರೆಸ್ಟ್ ಬೇಕು ಅನ್ನಿಸ್ತಿದೆ. ಇನ್ಮುಂದೆ ನಾನು ಮನೇಲಿರ್ತೀನಿ. ಶ್ರದ್ಧೆ ಮತ್ತು ಎಚ್ಚರದಿಂದ ಫ್ಯಾಕ್ಟರಿ ನಡೆಸ್ಕೊಂಡು ಹೋಗು’ ಎಂದಿದ್ದ. ಮರುದಿನವೇ ವಕೀಲರ ಜೊತೆಗೂ ಮಾತಾಡಿ ಫ್ಯಾಕ್ಟರಿಯನ್ನು ಮಗನ ಹೆಸರಿಗೆ ರಿಜಿಸ್ಟ್ರೇಷನ್ ಮಾಡಿಸಿಬಿಟ್ಟ.

ಚಿತ್ರಾನ್ನ-ಕಾಯಿಚಟ್ನಿ, ದೋಸೆ-ಜಾಮೂನ್, ಬಿಸಿಬೇಳೆಬಾತ್- ಚಿಪ್ಸ್, ವಾಂಗೀಬಾತ್-ಆಲೂಬೋಂಡಾ, ಪಲಾವ್-ಗಟ್ಟಿಮೊಸರು- ಹೀಗೆ ಪ್ರತಿಯೊಂದು ತಿಂಡಿಗೂ ಒಂದು ಸೈಡ್ ಐಟಂ ಇರಬೇಕು ಎಂಬುದು ರಂಗಸ್ವಾಮಿಯ ಆಸೆಯಾಗಿತ್ತು. ಅದರಲ್ಲೂ ಪಲಾವ್-ಮೊಸರು ಅವನ ಮೆಚ್ಚಿನ ತಿಂಡಿಯಾಗಿತ್ತು. ನಾವು ಎಷ್ಟು ದಿನ ಇರ್ತೀವೋ ಗೊತ್ತಿಲ್ಲ. ಇರುವಷ್ಟು ದಿನ ಚೆನ್ನಾಗಿ ತಿಂದುಂಡು ಬಾಳಬೇಕು ಎಂಬುದು ಅವನ ವಾದವಾಗಿತ್ತು.

ಅವತ್ತು ರಂಗಸ್ವಾಮಿಯ ಮಗ ಜಾಗಿಂಗ್ ಮುಗಿಸಿ ಬಾಗಿಲ ಬಳಿ ಬಂದಾಗಲೇ ಪಲಾವ್‌ನ ಘಮ ಮೂಗಿಗೆ ಅಡರಿತು. ಓಹ್, ಇವತ್ತು ಅಪ್ಪನ ಫೇವರಿಟ್ ತಿಂಡಿ ಎಂದುಕೊಂಡು ಅವನು ಒಳಬರುವುದಕ್ಕೂ, ಡೈನಿಂಗ್ ಟೇಬಲ್ ಮುಂದೆ ತಿಂಡಿಗೆ ಕುಳಿತಿದ್ದ ರಂಗಸ್ವಾಮಿ- ಸ್ವಲ್ಪ ಮೊಸರು ಇದ್ರೆ ಕೊಡಮ್ಮ. ಪಲಾವ್ ಜೊತೆ ಮೊಸರು ಕೊಡೋದನ್ನೇ ಮರೆತಿದ್ದೀಯಲ್ಲ.. ಅನ್ನುವುದಕ್ಕೂ ಸರಿಹೋಯಿತು. ರಂಗಸ್ವಾಮಿಯ ಸೊಸೆ ಸರ್ರನೆ ಹೊರಬಂದವಳೇ- ‘ಇಲ್ಲ, ಮೊಸರಿಲ್ಲ; ಮೊಸರು ಖಾಲಿಯಾಗಿದೆ’ ಅಂದು ಭರ್ರನೆ ಹೋಗಿಬಿಟ್ಟಳು. ಹೌದಾ? ಹೋಗ್ಲಿ ಬಿಡಮ್ಮ ಎನ್ನುತ್ತಾ ರಂಗಸ್ವಾಮಿ ತಿಂಡಿಯ ಶಾಸ್ತ್ರ ಮುಗಿಸಿದ.

ದಿನವೂ ಹೆಂಡತಿಯೊಂದಿಗೆ ತಿಂಡಿ ತಿಂದು ನಂತರ ಫ್ಯಾಕ್ಟರಿಗೆ ಹೋಗುವುದು ರಂಗಸ್ವಾಮಿಯ ಮಗನ ದಿನಚರಿಯಾಗಿತ್ತು. ಅವತ್ತೂ ಹಾಗೆಯೇ ತಿಂಡಿಗೆ ಕೂತವನು ಅಸಹನೆ ಮತ್ತು ಗೊಂದಲದಿಂದ ಹೆಂಡತಿಯನ್ನು ನೋಡಿದ. ಕಾರಣ; ಹೆಂಡತಿ ತಂದಿಟ್ಟ ತಿಂಡಿಯೊಂದಿಗೆ ಅರ್ಧ ಲೀಟರಿನಷ್ಟು ಗಟ್ಟಿ ಮೊಸರಿತ್ತು. ''ಅಪ್ಪ ಕೇಳಿದಾಗ ಮೊಸರೇ ಇಲ್ಲ ಅಂದೆಯಲ್ಲ? ಇದು ಎಲ್ಲಿತ್ತು? ಯಾಕೆ ಸುಳ್ಳು ಹೇಳ್ದೆ?'' ಎಂದು ಪ್ರಶ್ನಿಸಿದ. ಆಕೆ- ‘ಗಟ್ಟಿಯಾಗಿ ಮಾತಾಡಬೇಡಿ. ಸೈಲೆಂಟಾಗಿ ತಿಂಡಿ ತಿನ್ನಿ. ನಿಮ್ಮಪ್ಪ ಕೇಳ್ತಾರೆ ಅಂತ ಅವರು ಕೇಳಿದ್ದನ್ನೆಲ್ಲ ಕೊಡೋಕಾಗುತ್ತಾ? ಬಾಯಿ ಚಪಲ ಯಾವತ್ತೂ ಒಳ್ಳೆಯದಲ್ಲ. ಇವತ್ತು ಮೊಸರು ಕೇಳ್ತಾರೆ. ನಾಳೆ ತುಪ್ಪಾನೇ ಬೇಕು ಅಂತಾರೆ. ಕೇಳಿದ್ದನ್ನೆಲ್ಲ ರೆಡಿ ಮಾಡಿ ಇಟ್ಕೊoಡಿರೋಕೆ ಆಗುತ್ತಾ?’ ಅಂದುಬಿಟ್ಟಳು. ತಿರುಗಿ ಮಾತಾಡಿದರೆ ಜಗಳ ಆಗುತ್ತೆ. ಜಗಳ ಆಗಿಬಿಟ್ರೆ ರಾತ್ರಿ ಅನ್ನೋದು ನರಕ ಆಗುತ್ತೆ. ಉಹೂಂ, ಅಂಥ ಪರಿಸ್ಥಿತಿ ಜೊತೆಯಾಗಬಾರದು ಎಂದು ಯೋಚಿಸಿದ ರಂಗಸ್ವಾಮಿಯ ಮಗ, ಮೌನವಾಗಿ ಫ್ಯಾಕ್ಟರಿಗೆ ಹೋಗಿಬಿಟ್ಟ. ರಂಗಸ್ವಾಮಿ, ಮನೆಯ ಹೊರಗಿನ ಕೈ ತೋಟದಲ್ಲಿ ಇದ್ದುದರಿಂದ ಗಂಡ-ಹೆಂಡಿರ ದುಸುಮುಸು ಅವನಿಗೆ ಗೊತ್ತಾಾಗಲೇ ಇಲ್ಲ.

ಅವತ್ತು ನಾಲ್ಕೈದು ಕಂಪನಿಗಳ ಮುಖಂಡರೊಂದಿಗೆ ಹೋಟೆಲೊಂದರಲ್ಲಿ ವ್ಯವಹಾರ ಸಂಬಂಧಿ ಮೀಟಿಂಗ್ ನಡೆಸಬೇಕಾಗಿ ಬಂತು. ಊಟದ ಸಮಯದಲ್ಲಿ ಅವರೆಲ್ಲಾ- ''ಊಟ ಬೇಡ, ದೋಸೆ ವಡಾ ಥರದ ಐಟಮ್ಸ್ ತಗೊಳ್ಳೋಣ. ಕಡೆಗೆ ಮೊಸರನ್ನ ಇರಲಿ''ಎಂದರು. ಮೊಸರನ್ನದಲ್ಲಿದ್ದ ಕೆನೆಮೊಸರು, ದಾಳಿಂಬೆ, ಗೋಡಂಬಿಯ ಚೂರುಗಳನ್ನು ಕಂಡಾಗ ಛಕ್ಕನೆ, ಮೊಸರು ಇದ್ಯಾ ಎಂದು ಕೇಳಿದ ಅಪ್ಪನ ಮುಖವೇ ಎದುರು ಕಂಡಂತಾಗಿ ರಂಗಸ್ವಾಮಿಯ ಮಗ ತತ್ತರಿಸಿಹೋದ. ತನಗಾಗಿ ಏನೆಲ್ಲಾ ತ್ಯಾಗ ಮಾಡಿದ ತಂದೆಗೆ ಒಂದು ಕಪ್ ಗಟ್ಟಿ ಮೊಸರು ಕೊಡಲು ಆಗಲಿಲ್ಲವಲ್ಲ ಎಂಬ ಚಿಂತೆ ಅವನನ್ನು ಕ್ಷಣಕ್ಷಣಕ್ಕೂ ಕಾಡತೊಡಗಿತು.

ಉಹೂಂ, ಅವನ ಹೆಂಡತಿಗೆ ಇಂಥ ಯಾವ ‘ಗಿಲ್ಟ್ ಕೂಡ ಇರಲಿಲ್ಲ. ಪ್ರತಿಯೊಂದು ತಿಂಡಿಗೂ ಮತ್ತೊಂದು ಸೈಡ್ ಐಟಂ ಹಾಕಿಕೊಡೋಕೆ ಇದೇನು ಹೋಟ್ಲಾ? ಇಡೀ ದಿನ ಮನೇಲಿ ಇರೋರು ಕೊಟ್ಟಿದ್ದನ್ನು ತಿಂದುಕೊಂಡು ತೆಪ್ಪಗಿರಬೇಕು ಅಲ್ವ ಎಂದೇ ಅವಳು ವಾದಿಸಿದಳು. ಬೆಡ್‌ರೂಂ, ಜಗಳದ ತಾಣವಾದರೆ ಇಡೀ ದಿನದ ಕೆಲಸ ಕೆಡುತ್ತೆ ಎಂದು ಗೊತ್ತಿದ್ದುದರಿಂದ ರಂಗಸ್ವಾಮಿಯ ಮಗ ಹೆಂಡತಿಗೆ ಎದುರು ಮಾತಾಡಲು ಹೋಗಲಿಲ್ಲ.

ಹೀಗೇ ವಾರ ಕಳೆಯಿತು. ಅವತ್ತೊಂದು ದಿನ- ‘ಯಾವುದೋ ಕೋರ್ಟ್ ಕೇಸ್ ಬಂದಿದೆಯಪ್ಪಾ. ನನಗೆ ಸ್ವಲ್ಪ ಕನ್‌ಫ್ಯೂಶನ್ ಇದೆ. ನೀನು ಜೊತೆಗಿದ್ರೆ ದೊಡ್ಡ ಧೈರ್ಯ. ಮಧ್ಯಾಹ್ನ ಬೇಗ ಬಂದ್ಬಿಡೋಣ...’ ಎಂದೆಲ್ಲ ಹೇಳಿ ಆ ಮಗರಾಯ ತಂದೆಯೊಂದಿಗೆ ಕೋರ್ಟ್‌ಗೆ ಬಂದ. ಅಲ್ಲಿ ನೋಡಿದರೆ- ಫ್ಯಾಕ್ಟರಿ, ಮನೆ ಮತ್ತು ಇಡೀ ಆಸ್ತಿಯನ್ನು ರಂಗಸ್ವಾಮಿಯ ಹೆಸರಿಗೆ ಮರು ವರ್ಗಾಯಿಸಿದ ದಾಖಲೆ ಪತ್ರಗಳಿದ್ದವು. ಅವಕ್ಕೆಲ್ಲಾ ತುಂಬಾ ಒತ್ತಾಯದಿಂದಲೇ ಸಹಿ ಹಾಕಿಸಿದ ಮಗ- ‘ಅಪ್ಪಾ, ನೀನು ಇನ್ನೊಂದು ಮದುವೆ ಮಾಡ್ಕೊಳಪ್ಪಾ. ಜನ ಏನಾದ್ರೂ ಅಂದುಕೊಳ್ಳಲಿ. ಅದರ ಬಗ್ಗೆ ಚಿಂತೆ ಮಾಡ್ಬೇಡ. ನಿನ್ನ ಜೊತೆಗೆ ನಾನಿರ್ತೀನಿ. ಈ ವಿಷಯದಲ್ಲಿ ನಿಂಗೆ ಸಪೋರ್ಟ್ ಮಾಡ್ತೀನಿ. ದಯವಿಟ್ಟು ಇನ್ನೊಂದು ಮದುವೆ ಮಾಡ್ಕೊ..’ ಅಂದ.

ಈ ಮಾತುಗಳಿಂದ ರಂಗಸ್ವಾಮಿಗೆ ಅಚ್ಚರಿಯಾಯಿತು. ‘ಯಾಕಪ್ಪಾ? ಯಾಕೆ ಹೀಗೆ ಹೇಳ್ತಿದೀಯ? ನಿನಗೆ ಏನಾದ್ರೂ ಕೊರತೆ ಆಯ್ತಾ? ನಾನು ನಿನಗೆ ಹೊರೆ ಅನ್ನಿಸಿಬಿಟ್ನಾ? ಏನಾದ್ರೂ ತಪ್ಪು ಮಾಡಿದೀನೇನೋ ನಾನು? ಎಲ್ಲವನ್ನೂ ನನ್ನ ಹೆಸರಿಗೇ ಮಾಡಿಸಿದೀಯಲ್ಲ ಯಾಕೋ..,

ಈ ಮಾತುಗಳನ್ನು ಅಷ್ಟಕ್ಕೇ ತಡೆದ ರಂಗಸ್ವಾಮಿಯ ಮಗ ಹೇಳಿದ: ಛೆ,ಛೆ ಖಂಡಿತ ನಿನ್ನಿಂದ ಯಾವುದೇ ತಪ್ಪಾಗಿಲ್ಲಪ್ಪಾ. ಪ್ರತಿ ಹೆಂಗಸು, ತನ್ನ ಗಂಡ ಮತ್ತು ಮಕ್ಕಳ ಬಗ್ಗೆ ಮಾತ್ರ ವಿಶೇಷ ಕಾಳಜಿ ವಹಿಸ್ತಾಳೆ. ಉಳಿದವರನ್ನು ನಿರ್ಲಕ್ಷ್ಯದಿಂದ ನೋಡೋದು ಅವಳಿಗೆ ಅಭ್ಯಾಸ ಆಗಿಬಿಟ್ಟಿರುತ್ತೆ. ಅಂಥದೊಂದು ನಿರ್ಲಕ್ಷ್ಯದ ಅನುಭವ ನಿನಗೆ ಎಂದೆಂದೂ ಆಗದಿರಲಿ ಎಂಬ ಸದಾಶಯದಿಂದಲೇಇನ್ನೊಂದು ಮದುವೆ ಆಗು ಅಂತ ಒತ್ತಾಯಿಸ್ತಾ ಇದೀನಿ. ನಾಳೆಯಿಂದ ನಾನು ಹೆಂಡತಿಯೊಂದಿಗೆ ಬಾಡಿಗೆ ಮನೆಗೆ ಹೋಗ್ತೇನೆ. ಫ್ಯಾಕ್ಟರಿಗೆ ನೀನು ಎಂ.ಡಿ., ನೀನೇ ಸಿ.ಇ.ಒ. ನಾನು ಒಬ್ಬ ನೌಕರನಾಗಿ ಕೆಲಸ ಮಾಡ್ತೀನಿ. ನಮ್ಮಲ್ಲಿ ಎಂಜಿನಿಯರ್‌ಗಳಿಗೆ ಕೊಡ್ತೀಯಲ್ಲ; ಅಷ್ಟೇ ಸಂಬಳವನ್ನು ನನಗೂ ಕೊಡು. ಒಂದು ಬಟ್ಟಲಿನಷ್ಟು ಮೊಸರು ಸಂಪಾದಿಸಲು ಮನುಷ್ಯನಿಗೆ ಎಷ್ಟು ಕಷ್ಟ ಇದೆ ಎಂಬುದನ್ನು ನನ್ನ ಹೆಂಡತಿಗೆ ಪರಿಚಯ ಮಾಡಿಕೊಡಬೇಕು. ಅದರ ಜೊತೆಗೆ, ವೃದ್ಧಾಪ್ಯದಲ್ಲಿ ತುಂಬಾ ಮುತುವರ್ಜಿಯಿಂದ ನೋಡಿಕೊಳ್ಳುವ ಒಬ್ಬರು ನಿನ್ನೊಂದಿಗೆ ಇರುವಂತೆ ವ್ಯವಸ್ಥೆ ಮಾಡಬೇಕು. ಫ್ಯಾಕ್ಟರಿಯನ್ನು ನಿನ್ನ ಹೆಸರಿಗೆ ವರ್ಗಾಯಿಸಿದ್ದಕ್ಕೆ, ನಾಳೆಯಿಂದ ಒಬ್ಬ ಆರ್ಡಿನರಿ ನೌಕರನಾಗಿ ಕೆಲಸಕ್ಕೆ ಬರ್ತಿರೋದಕ್ಕೆ ಬೇರೆ ಯಾವ ಕಾರಣವೂ ಇಲ್ಲ. ಒಳ್ಳೇದಾಗ್ಲಿ ಅಂತ ಆಶೀರ್ವದಿಸಪ್ಪ...’

ರಂಗಸ್ವಾಮಿ ಏನೂ ಮಾತಾಡಲಿಲ್ಲ. ನಡೆದಿರುವುದೇನೆಂದು ತನಗೆ ಅರ್ಥವಾಗಿದೆ ಎಂಬಂತೆ ಮಗನನ್ನು ಮೆಚ್ಚುಗೆಯಿಂದ ನೋಡಿದ. ಅವನನ್ನು ಬಾಚಿ ತಬ್ಬಿಕೊಂಡು ಹಣೆಗೆ ಮುತ್ತಿಟ್ಟ...

Very beautiful message

A person started to walk on a rope tied between two tall towers. He was walking slowly, balancing a long stick in his hands. He had his son sitting on his shoulders.

Every one on the ground were watching him in bated breath and were very tense. When he slowly reached the second tower, every one clapped, whistled and welcomed him. They shook hands and took selfies.

He asked the crowd “do you all think I can walk back on the same rope now from this side to that side?”

Crowd shouted in one voice “Yes, Yes, you can.."

Do you trust me, he asked? They said yes, yes, we are ready to bet on you.

He said okay, can any one of you give your child to sit on my shoulder; I will take the child to the other side safely..

There was stunned silence. Every one became quiet.

*Belief is different. Trust is different. For Trust you need to surrender totally*

This is what we lack towards God in today’s world.

We believe in Almighty . But do we trust Him?
     
*Very beautiful message, worth pondering over and over again!*

ಭಕ್ತೆ ಮೀರಾದೇವಿ🌷

ಚಿಕ್ಕ ವಯಸ್ಸಿನಲ್ಲಿಯೇ ಭಕ್ತಳಾದ ಮೀರಾ ಅವರ ತಾಯಿಯ ಸಂಗಡ ಇರುವಾಗಲೇ ಅವರ ತಾಯಿ ಕೃಷ್ಣನನ್ನೇ ನಿನ್ನ ಪತಿ ಎಂದು ತೋರಿಸಿದಳು. ಅದೇ ಆಕೆಗೆ ಶಾಶ್ವತ ಬೋಧ ಆಯಿತು, ಲಗ್ನವಾಯಿತು. ಆಗಲು ಗಿರಿಧರ ಗೋಪಾಲನೇ ನನ್ನ ಪತಿ ಎನ್ನುತ್ತಿದ್ದಳು. ಪತಿಯು ಮಹಾರಾಜನಾದರೂ ಸಾಮಾನ್ಯರ ಜೊತೆಯಲ್ಲಿ ಕುಳಿತು ಗಿರಿಧರ ಗೋಪಾಲನ ಭಜನೆ ಮಾಡುತ್ತಿದ್ದಳು. ಅದನ್ನು ಏನು ಮಾಡಿದರೂ ಬಿಡಿಸಲಾಗಲಿಲ್ಲ. ಆಕೆಯ ರಾಜಮನೆತನದವರಾರು ಸಾಮಾನ್ಯರ ಜೊತೆಯಲ್ಲಿ ಕುಳಿತು ಭಜನೆ ಮಾಡುವುದು ಅವರಿಗೆ ಸರಿ ಕಾಣಲಿಲ್ಲ. ಅವರು ಎಷ್ಟೇ ವಿರೋಧಿಸಿದರೂ ಅವಳು ಸಾಮಾನ್ಯರ ಜೊತೆಯಲ್ಲಿ ಭಜನೆ ಮಾಡುವುದನ್ನು ಬಿಡಲಿಲ್ಲ. ಒಂದು ಸಾರಿ ಒಂದು ಪೆಟ್ಟಿಗೆಯಲ್ಲಿ ಮಿಡಿ ನಾಗರ ಸರ್ಪವನ್ನು ಹಾಕಿ ಬೃಂದಾವನದಿಂದ ಶ್ರೀ ಗಿರಿಧರ ಗೋಪಾಲನು ಬಂದಿದ್ದಾನೆ ತೆಗೆದುಕೊ ಎಂದಾಗ ಆಕೆಗೆ ಬಹಳ ಸಂತೋಷವಾಗಿ ಗಿರಿಧರ ಗೋಪಾಲ ಎಂದು ಕಣ್ಣು ತುಂಬ ನೀರನ್ನು ಹರಸುತ್ತಾ ಮುಟ್ಟುತ್ತಾಳೆ. ಅದು ನಿಜವಾದ ಗಿರಿಧರ ಗೋಪಾಲನೇ ಆಗುತ್ತದೆ. ಆಕೆಯ ಸ್ಥಿತಿ ಅಂತಹ ಉತ್ತಮ ಮಟ್ಟಕ್ಕೆ ಏರಿತ್ತು. ಎಲ್ಲೆಲ್ಲಿಯೂ ಗಿರಿಧರ ಗೋಪಾಲನನ್ನೇ ನೋಡುತ್ತಿದ್ದಳು. ಬೃಂದಾವನದಿಂದ ಗಿರಿಧರ ಗೋಪಾಲನ ತೀರ್ಥ ಬಂದಿದೆ ಎಂದು ವಿಷವನ್ನು ಕೊಟ್ಟರು. ಆಗ ಆಕೆ ಬಹಳ ಆನಂದದಿಂದ ಆ ತೀರ್ಥವನ್ನು ಕುಡಿದಳು. ಅದು ತೀರ್ಥವೇ ಆಗಿತ್ತು. “ಯಾದೃಶಿ ಬಾವನ ಯಸ್ಯ ಸಿದ್ಧಿರ್ಭವತಿ ತಾದೃಶಿ” ಯಾರು ಯಾರಿಗೆ ಯಾವ ಯಾವ ಭಾವನೆ ಇರುತ್ತದೆಯೋ ಅವರಿಗೆ ಹಾಗೆಯೇ ಆಗುತ್ತದೆ. ಎಲ್ಲೆಲ್ಲಿಯೂ ಆ ಗಿರಿಧರ ಗೋಪಾಲನನ್ನೇ ನೋಡುತ್ತಿದ್ದಳು. ಸಾಮಾನ್ಯರಂತೆ ಆ ಭಗವಂತನ ನಾಮವನ್ನು ಹೇಳುತ್ತಾ ಕುಣಿಯುತ್ತಿದ್ದಳು. ಎಲ್ಲೆಲ್ಲಿಯೂ ಭಗವಂತನನ್ನು ನೋಡಿರಿ. ಆಗ ನೀವು ಆನಂದವಾಗಿರುತ್ತೀರಿ.

*ಹಿರಿಯರು ಹೇಳಿಕೊಟ್ಟ ಊಟದ ಕಲೆ* ನಿಯಮಗಳು

1)  ಕಾರೆ ಸೊಪ್ಪನ್ನು ತಿಂದರೂ ಕಾಯಕದಿಂದಲೇ ಗಳಿಸಿರಬೇಕು. ....
2)  ಊಟಕ್ಕೆ ಕುಳಿತುಕೊಳ್ಳುವ ಮೊದಲು ಕುಳಿತುಕೊಳ್ಳುವ ಜಾಗ ಶುಚಿಯಾಗಿರಬೇಕು…..
 3)  ಬಾಯಿ ಮುಕ್ಕಳಿಸಿ ಶುಚಿಯಾಗಿ ಕೈತೊಳೆದುಕೊಳ್ಳಬೇಕು....
4)  ಗುರುನಾಮ ಸ್ಮರಣೆ ಮಾಡಿ ನೆಲದ ಮೇಲೆಯೇ ಚಕ್ಕಂಬಕ್ಕಾಲು ಹಾಕಿ ಕುಳಿತುಕೊಳ್ಳಬೇಕು.....
5)  ಊಟಕ್ಕೆ ಕುಳಿತಾಗ ನೆತ್ತಿಯ ಮೇಲೆ ಪೇಟ - ಪಟಗಾ ಸುತ್ತಿರುವುದಾಗಲೀ…. ಟೋಪಿಯಾಗಲೀ  ಇರಬಾರದು….
6) ಕರವಸ್ತ್ರವಾಗಲೀ ಒಲ್ಲಿ ಟವಲ್ ಆಗಲೀ ನಿಮ್ಮ ಜೊತೆಗಿರಬೇಕು……
6)  ಊಟದೆಲೆ ಅಥವಾ ತಟ್ಟೆ ಈಗಾಗಲೇ ಶುಚಿಯಾಗಿಟ್ಟಿದ್ದರೂ ಮತ್ತೊಮ್ಮೆ ಕೊಂಚ ನೀರಿನಲ್ಲಿ ತೊಳೆಯಬೇಕು. …
7) ಊಟಕ್ಕೆ ಕುಳಿತಾಗ ಪಾದರಕ್ಷೆಗಳನ್ನು ಧರಿಸಿರಬಾರದು…..
8) ಊಟ ಮಾಡುವ ವೇಳೆಯಲ್ಲಿ ಕಸ ಗುಡಿಸಬಾರದು…… ಒಂದೇ ಸಮನೆ ದಿಟ್ಟಿಸಬಾರದು….
9) ಯಾರೊಬ್ಬರೂ ಅತ್ತಿಂದಿತ್ತ ಓಡಾಡಬಾರದು…..
10) ಕುಡಿಯುವ ನೀರು ತುಂಬಿದ ಚೆಂಬು -ಲೋಟ ಪಕ್ಕದಲ್ಲಿರಬೇಕು,….
11) ಗಂಟಲು ಮೇಲೆತ್ತಿ ಲೋಟದಲ್ಲಿಯೇ ನೀರು ಕುಡಿಯಬೇಕು,…. ಕಚ್ಚಿ ಕುಡಿಯಬಾರದು……
12) ನಾಯಿಮರಿ ಅಥವಾ ನಮ್ಮ ಜೀವಿಗಳಿಗಾಗಿ ಮೊದಲು ಒಂದು ತುತ್ತು ತೆಗೆದಿರಿಸಬೇಕು.....
13)  ಊಟದ ವೇಳೆಗೆ ಯಾರಾದರೂ ಬಳಿಗೆ ಬಂದರೆ ಮೊದಲು ಅವರಿಗೆ ಊಟ ನೀಡಲು ಆದ್ಯತೆ ಕೊಡಬೇಕು...
14)  ನೀರು ಅಥವಾ ಸಾರಿನಲ್ಲಿ ಒಮ್ಮೆ ಅಂಗೈ ತೇವ ಮಾಡಿಕೊಳ್ಳಬೇಕು…..
15)  ಅಂಗೈ ಮುಂಗೈ ಮೂತಿಗಳಿಗೆ ಅನ್ನ - ಮುದ್ದೆ ಅಥವಾ ತಿನ್ನುವ ಯಾವುದೂ ಮೆತ್ತಿಕೊಳ್ಳದಂತೆ ನಾಜೂಕಾಗಿರಬೇಕು…...
16)  ತೊಡೆಯ ಮೇಲಾಗಲೀ ನೆಲದ ಮೇಲಾಗಲೀ ದರ್ಬಾರಿನಂತೆ ಎಡಗೈ ಹೂರಿಕೊಂಡಿರಬಾರದು.... 
17)  ತಲೆ ಮೈಕೈ ಕೆರೆದುಕೊಳ್ಳಬಾರದು…. ಕಣ್ಣು ಉಜ್ಜಬಾರದು…. ಅತ್ತಲಿತ್ತ ಪದೇ ಪದೇ ತಲೆ ಎತ್ತಿ ನೋಡಬಾರದು
18)  ನಾವು ತಿನ್ನುವ ಶಬ್ಧ ಪಕ್ಕದಲ್ಲಿ ಕುಳಿತವರಿಗೆ ಕೇಳಿಸಬಾರದು.... ಲೊಸ ಲೊಸ ಲೊಸಗುಟ್ಟುತ್ತಾ ಅಥವಾ ಗಬಗಬ ಬುಕ್ಕಬಾರದು...
19)  ಉಣ್ಣುವ ತುತ್ತು ಎಣಿಸಬಾರದು.....ಮುದ್ದೆ - ರೊಟ್ಟಿ ಎಣಿಸಬಾರದು.... ಊಟಕ್ಕೆ ನೀಡುವಾಗಲೇ ಆಳು ನೋಡಿ ಅನ್ನ ಬಡಿಸಬೇಕು
20) ಇಷ್ಟು ತಿಂದ - ಅಷ್ಟು ತಿಂದ ಎಂದು ಮಾತನಾಡಬಾರದು....
21) ಗಂಭೀರವಾದ ಯಾವ ಸಂಗತಿಗಳನ್ನೂ ಪ್ರಸ್ತಾಪಿಸಬಾರದು.... (ಈಗಿನ ಸೇರ್ಪಡೆ: ಟೀವಿ ಮೊಬೈಲ್ ಇತ್ಯಾದಿ ನೋಡಬಾರದು)
22)  ನೆತ್ತಿಗೇರಿಸಿಕೊಳ್ಳುವಂತೆ ನಗುವುದಾಗಲೀ ಮಾತಾಡುವುದಾಗಲೀ ಮಾಡಬಾರದು…..
23) ಊಟಕ್ಕೆ ನೀಡುವ ವ್ಯಕ್ತಿಯನ್ನು ಹೊರತುಪಡಿಸಿ ಕುಟುಂಬದ ಸದಸ್ಯರೆಲ್ಲರೂ ಒಟ್ಟಿಗೆ ಊಟಕ್ಕೆ ಕುಳಿತುಕೊಳ್ಳಬೇಕು….
24) ಕುಳಿತು ಸಾವಧಾನವಾಗಿ ತಿನ್ನಬೇಕೇ ಹೊರತು ನಿಂತುಕೊಂಡು, ಓಡಾಡುತ್ತಾ ಅಥವಾ ಪ್ರಯಾಣಿಸುತ್ತಾ ತಿನ್ನಬಾರದು….
25)  ಮಧ್ಯದಲ್ಲಿ ಅವಶ್ಯಕವಿದ್ದರೆ ಅರ್ಥಮಾಡಿಕೊಂಡು ಊಟಕ್ಕೆ ಬಡಿಸುವವರು ನೀಡಬೇಕೇ ಹೊರತು ಇಷ್ಟು ಸಾಕ - ಅಷ್ಟು ಸಾಕ ಎಂದು ಅಳತೆ ಪ್ರಮಾಣಗಳಲ್ಲಿ ತೋರಿಸಿ ಕೇಳಬಾರದು.
26)  ತಂಗಳಾದರೂ ಸರಿಯೇ ಬಿಸಿಯೆಂದು ಭಾವಿಸಿ ಕಣ್ಣಿಗೊತ್ತಿಕೊಂಡು ಆರೋಗಿಸಬೇಕು...... ಒಂದು ಅಗುಳನ್ನೂ ವ್ಯರ್ಥ ಮಾಡಬಾರದು
27)  ತಿನ್ನುವ ಪದಾರ್ಥವನ್ನು ಇಲಿ ಗೆಬರಾಡಿದಂತೆ ತರಿದು ತಿನ್ನಬಾರದು….. ಅಥವಾ ಕೈನಲ್ಲಿ ತೂಗಿಸಿಕೊಂಡು ತಿನ್ನಬಾರದು…..
28) ಊಟದೆಲೆ ತಟ್ಟೆಯ ಪಕ್ಕದಲ್ಲಿ ಪದಾರ್ಥ ಚೆಲ್ಲಾಡಬಾರದು…..
29) ಬಿಸಿ ಆರಿಸಿಕೊಂಡು ತಿನ್ನಬೇಕು….. ತುಟಿಗಳನ್ನು ಮುಚ್ಚಿಡಿದು ಬಾಯೊಳಗೇ ನಮುಲಿ ನುಂಗಬೇಕು….
30) ಒಮ್ಮೆ ಬಾಯಿಗಿರಿಸಿಕೊಳ್ಳಲು ಎಷ್ಟು ಬೇಕೋ ಅಷ್ಟನ್ನು ಮಾತ್ರ ಬೆರಳುಗಳಿಂದ ತೆಗೆದುಕೊಳ್ಳಬೇಕೇ ಹೊರತು ಅಂಗೈ ಬಳಸಬಾರದು….
31) ಊಟ ಮುಗಿದ ಬಳಿಕ ಅಗತ್ಯವಿರುವಷ್ಟು ನೀರು ಕುಡಿಯಬೇಕು…..
32) ಊಟದ ಬಳಿಕ ಅಭ್ಯಾಸವಿದ್ದಲ್ಲಿ ತಾಂಬೂಲ ಸವಿಯಬೇಕು….  ಕಳ್ಳೇಬೀಜ, ಚಿನಕ್ಹುರುಳಿ, ಹಣ್ಣು ಮುಂತಾದವು ಸೇವಿಸಬಹುದು…..
33)  ಊಟ ಕೊಟ್ಟವರ ಬಳಿ ಕೃತಜ್ಞತೆಯ ನಾಲ್ಕು ಮಾತಾಡಬೇಕು...
34) ಊಟ ಮುಗಿದ ಕೂಡಲೇ.. ಊಟಕ್ಕೆ ಕುಳಿತ ಜಾಗದಲ್ಲಿ ಅರೆಗಳಿಗೆಯೂ ಕೂರಬಾರದು...
 35) ಕೈತೊಳೆದುಕೊಂಡು ಊಟ ಮಾಡಿದವರೇ ಊಟದ ತಟ್ಟೆಯನ್ನು ತೊಳೆದಿಡಬೇಕು....
36) ಹೊತ್ತು ಮೀರಿಯಾಗಲೀ ಹೊತ್ತಿಗೆ ಮುಂಚಿತವಾಗಲೀ ಊಟ ಮಾಡಬಾರದು...
37) ಉಪ್ಪು ಹುಳಿ ಖಾರ ಯಾವುದೇ ವ್ಯತ್ಯಾಸಗಳಿದ್ದರೂ ಅಸಮಾಧಾನ ವ್ಯಕ್ತಪಡಿಸುವುದಾಗಲೀ ಸಿಟ್ಟಿಗೇಳುವುದಾಗಲೀ ಮಾಡಬಾರದು....
38) ಊಟ ಮಾಡುವಾಗ ಊಟವನ್ನಷ್ಟೇ ಮಾಡಬೇಕು ಹೊರತು ಇನ್ನೊಂದು ಮತ್ತೊಂದು ಕೆಲಸ ಮಾಡಬಾರದು....
39) ಇನ್ನೊಂದು ಮಾಡಿಕೊಂಡೇ ಊಟ ಮಾಡಬಾರದು.... ಅಥವಾ ಊಟ ಮಾಡಿಕೊಂಡೇ ಇನ್ನೊಂದು ಮಾಡಬಾರದು.
40) ಊಟ ಮಾಡಿ ಮೈ ಮುರಿಯಬಾರದು
41) ಊಟದ ಬಳಿಕ ಗಾಳಿಗೆ ಮೈಯೊಡ್ಡಿ ನಾಲ್ಕೆಜ್ಜೆ ನಡೆದರೆ ಚೆಂದ
42) ಎದೆ ಬಗ್ಗಿಸಿ ಊಟ ಮಾಡಬೇಕೇ ಹೊರತು ಎದೆ ಸೆಟೆದು (ಸೇದಿಕೊಂಡು) ಊಟ ಮಾಡಬಾರದು
43) ಎಂಜಲ ಕೈನಲ್ಲಿ ತಟ್ಟೆ ಲೋಟ ಇತರೆ ಯಾವುದೇ ಪಾತ್ರೆ ಪಗಡಿ ಮುಟ್ಟಬಾರದು
44) ಸಾರಿನ ಚೌಟು ಅನ್ನಕ್ಕೂ ಅನ್ನದ ಚಮಚವನ್ನು ಪಾಯಸಕ್ಕೂ ಮುಟ್ಟಿಸದೆ ಹೀಗೆ ಎಲ್ಲವೂ ಪ್ರತ್ಯೇಕವಾಗಿ ಇರಿಸಬೇಕು
45) ಎಂಜಲು ಮಾಡಿದ ಪದಾರ್ಥಗಳನ್ನು ಇತರರಿಗೆ ನೀಡಬಾರದು
46) ಊಟದ ಬಳಿಕವೂ ಬಾಯಿ ಮುಕ್ಕಳಿಸುವುದನ್ನು ಮರೆಯಬಾರದು
47) ಊಟ ಮಾಡಿದ ತಕ್ಷಣವೇ ಮಲಗಬಾರದು ಅಥವಾ ಮಲಗಿಕೊಂಡು ಏನನ್ನೂ ತಿನ್ನಬಾರದು
48) ಊಟದ ನಡುವೆ ಇನ್ನೂ ಹೆಚ್ಚಿನ ಅಗತ್ಯ ಅಹಾರ ಬೇಗ ಬರಲಿಲ್ಲವೆಂದು ಕೂಗುವುದಾಗಲೀ ಪಾತ್ರೆ ಶಬ್ದ ಮಾಡುವುದಾಗಲೀ ಮುಂತಾದ ಅಸಮಾಧಾನ ತೋರಬಾರದು.
49) ನಿದ್ರೆಗಣ್ಣಿನಲ್ಲಿ ತೂಕಡಿಸುತ್ತಾ ಊಟ ಮಾಡಬಾರದು.
50) ಮೊದಲು ತಟ್ಟೆಯಲ್ಲಿ ಬಡಿಸಿದ ಆಹಾರವನ್ನು ನೋಡಿಕೊಂಡು, ಇನ್ನೂ ಬೇಕೆನಿಸಿದರೆ ಮಾತ್ರ ಹಾಕಿಸಿಕೊಳ್ಳಬೇಕು. ತಟ್ಟೆಯಲ್ಲಿ ಸ್ವಲ್ಪವೂ ಉಳಿಯದಂತೆ ಊಟ ಮಾಡಬೇಕು.
ಊಟದ ಕಲೆ ಅಂದರೆ 'ಊಟ ಮಾಡುವುದೂ ಒಂದು ಕಲೆ' .
ಯಾರಾದರೂ ಈ ಕಲೆಗಳನ್ನು ರೂಢಿಸಿಕೊಂಡರೆ ಉಂಡ ಅನ್ನಹಾರ ಚೆನ್ನಾಗಿ ಪಚನವಾಗಿ ದೇಹಕ್ಕೆ ಶಕ್ತಿಯನ್ನು ಕೊಡುತ್ತದೆ.
ಈ ರೀತಿ ಊಟ ಮಾಡುವವರನ್ನು ನೋಡಿ, ನಾವೂ ಹೀಗೆಯೇ ಊಟ ಮಾಡಬೇಕು ಅಂತ ಬೇರೆಯವರು ಭಾವಿಸುವಂತೆ ಊಟ ಮಾಡಬೇಕು.

Wednesday 27 May 2020

ವಂಶವೃಕ್ಷ..

ಬ್ರಹ್ಮನ ಮಗ ಮರೀಚಿ
• ಮರೀಚಿಯ ಮಗ ಕಾಶ್ಯಪ
• ಕಾಶ್ಯಪರ ಮಗ ಸೂರ್ಯ
• ಸೂರ್ಯನ ಮಗ ಮನು
• ಮನುವಿನ ಮಗ ಇಕ್ಷ್ವಾಕು
• ಇಕ್ಷ್ವಾಕುವಿನ ಮಗ ಕುಕ್ಷಿ
• ಕುಕ್ಷಿಯ ಮಗ ವಿಕುಕ್ಷಿ
• ವಿಕುಕ್ಷಿಯ ಮಗ ಬಾಣ
• ಬಾಣನ ಮಗ ಅನರಣ್ಯ
• ಅನರಣ್ಯನ ಮಗ ಪೃಥು
• ಪೃಥುವಿನ ಮಗ ತ್ರಿಶಂಕು
• ತ್ರಿಶಂಕುವಿನ ಮಗ ದುಂಧುಮಾರ.(ಯುವನಾಶ್ವ)
• ದುಂಧುಮಾರುವಿನ ಮಗ ಮಾಂಧಾತ
• ಮಾಂಧಾತುವಿನ ಮಗ ಸುಸಂಧಿ
• ಸುಸಂಧಿಯ ಮಗ ಧೃವಸಂಧಿ
• ಧೃವಸಂಧಿಯ ಮಗ ಭರತ
• ಭರತನ ಮಗ ಅಶೀತಿ
• అಶೀತಿಯ ಮಗ ಸಗರ
• ಸಗರನ ಮಗ ಅಸಮಂಜಸ*
• ಅಸಮಂಜಸನ ಮಗ ಅಂಶುಮಂತ
• ಅಂಶುಮಂತನ ಮಗ ದಿಲೀಪ
• ದಿಲೀಪನ ಮಗ ಭಗೀರಥ
• ಭಗೀರಥನ ಮಗ ಕಕುತ್ಸು
• ಕಕುತ್ಸುವಿನ ಮಗ ರಘು
• ರಘುವಿನ ಮಗ ಪ್ರವುರ್ಧ
• ಪ್ರವುರ್ಧನ ಮಗ ಶಂಖನು
• ಶಂಖನುವಿನ ಮಗ ಸುದರ್ಶನ
• ಸುದರ್ಶನನ ಮಗ ಅಗ್ನಿವರ್ಣ
• ಅಗ್ನಿವರ್ಣನ ಮಗ ಶೀಘ್ರವೇದ
• ಶೀಘ್ರವೇದನ ಮಗ ಮರು
• ಮರುವಿನ ಮಗ ಪ್ರಶಿಷ್ಯಕ
• ಪ್ರಶಿಷ್ಯಕನ ಮಗ ಅಂಬರೀಶ
• ಅಂಬರೀಶನ ಮಗ ನಹುಶ
• ನಹುಶನ ಮಗ ಯಯಾತಿ
• ಯಯಾತಿಯ ಮಗ ನಾಭಾಗ
• ನಾಭಾಗನ ಮಗ ಅಜ
• ಅಜನ ಮಗ ದಶರಥ*

ದಶರಥನ ಮಗ #ರಾಮ...

ರಾಮನಿಗೆ ಲವ-ಕುಶರೀರ್ವರು ಮಕ್ಕಳು..

• ಭರತನಿಗೆ ತಕ್ಷ-ಪುಷ್ಕಲರು..
• ಲಕ್ಷ್ಮಣನಿಗೆ ಅಂಗದ-ಚಂದ್ರಕೇತುಗಳು..
• ಶತ್ರುಘ್ನನಿಗೆ ಸುಬಾಹು-ಶತ್ರುಪಾತಿಗಳು..
• ಇವರಲ್ಲಿ ಹಿರಿಯವನಾದ ಕುಶನು ಕುಮುದ್ವತಿಯನ್ನು ವರಿಸಿ ಕುಶಾವತಿ ಅಥವಾ ಕುಶಸ್ಥಲಿಯಲ್ಲಿ ರಾಜ್ಯವಾಳುತ್ತಾನೆ..
• ಲವನು ಶ್ರಾವಸ್ತಿ ಅಥವಾ ಲವಸ್ಥಲಿಯಲ್ಲಿ, ತಕ್ಷನು ತಕ್ಷಶಿಲೆಯಲ್ಲಿ, ಪುಷ್ಕಲನು ಪುಷ್ಕಲಾವತದಲ್ಲಿ, ಅಂಗದನು ಕಾರುಪಥದಲ್ಲಿ,ಚಂದ್ರಕೇತುವು ಚಂದ್ರಕಾಂತದಲ್ಲಿ, ಸುಬಾಹು ಮಧುರಾನಗರಿಯಲ್ಲಿ, ಶತ್ರುಪಾತಿಯು ವಿದಿಶಾನಗರಿಯಲ್ಲಿ ರಾಜ್ಯವಾಳಿದರು..
• ಕುಶ-ಕುಮುದ್ವತೀ ದಂಪತಿಗಳಿಂದ ಅತಿಥಿ.
• ಅವನಿಂದ ನಿಷಧ
• ನಭ
• ಪುಂಡರೀಕ
• ಕ್ಷೇಮಧನ್ವಾ
• ದೇವಾನೀಕ
• ಅನೀಹ
• ಪಾರಿಯಾತ್ರ
• ಬಲಸ್ಥಲ
• ಇವನಿಗೆ ಸೂರ್ಯನ ಅಂಶವನ್ನು ಪಡೆದ ವಜ್ರನಾಭನು ಮಗನಾಗಿ ಹುಟ್ಟಿದ.
• ಇವನ ಮಗ ಖಗಣ
• ವಿಧೃತಿ
• ಹಿರಣ್ಯನಾಭ. ಇವನು ಮಹರ್ಷಿಜೈಮಿನಿಯ ಶಿಷ್ಯನಾಗಿ ಯೋಗಾಚಾರ್ಯನೆಂದು ಖ್ಯಾತನಾಗಿದ್ದ.ಕೋಸಲದೇಶದ ಯಾಜ್ಞವಲ್ಕ್ಯಮಹರ್ಷಿಯು ಹಿರಣ್ಯನಾಭನಿಂದ ಅಧ್ಯಾತ್ಮಶಿಕ್ಷಣವನ್ನು ಪಡೆದ.
• ಹಿರಣ್ಯನಾಭನ ಮಗ ಪುಷ್ಯ
• ಧ್ರುವಸಂಧಿ
• ಸುದರ್ಶನ
• ಅಗ್ನಿವರ್ಣ
• ಶೀಘ್ರ
• ಮರು.ಈ ಮರುವು ಯೋಗಸಮಾಧಿಯಲ್ಲಿ ಸಿದ್ಧಿಯನ್ನು ಪಡೆದಿದ್ದ.ಈಗಲೂ ಈ ಮರುಮಹಾರಾಜನು ಕಲಾಪವೆಂಬ ಗ್ರಾಮದಲ್ಲಿವಾಸಿಸುತ್ತಿದ್ದಾನೆ.ಕಲಿಯುಗದ ಅಂತ್ಯದಲ್ಲಿ ಸೂರ್ಯವಂಶವು ನಷ್ಟವಾದಾಗ ಇವನು ಪುನರಪಿ ಸೂರ್ಯವಂಶವನ್ನು ಬೆಳೆಸುತ್ತಾನೆ.
• ಮರುವಿನ ಮಗ ಪ್ರಸುಶ್ರುತ
• ಸಂಧಿ
• ಅಮರ್ಷಣ
• ಮಹಸ್ವಂತ
• ವಿಶ್ವಸಾಹ್ವ
• ಪ್ರಸೇನಜಿತ್
• ತಕ್ಷಕ
• ಬೃಹದ್ಬಲ-ಈ ಬೃಹದ್ಬಲನನ್ನು ಕುರುಕ್ಷೇತ್ರಯುದ್ಧದಲ್ಲಿ ಅಭಿಮನ್ಯುವು ಸಂಹರಿಸಿದ.
• ಬೃಹದ್ಬಲನ ಮಗ ಬೃಹದ್ರಣ
• ಉರುಕ್ರಿ
• ವತ್ಸವೃದ್ಧ
• ಪ್ರತಿವ್ಯೋಮ
• ಭಾನು
• ದಿವಾಕ
• ಸಹದೇವ
• ಬೃಹದಶ್ವ
• ಭಾನುಮಂತ
• ಪ್ರತೀಕಾಶ್ವ
• ಸುಪ್ರತೀಕ
• ಮರುದೇವ
• ಸುನಕ್ಷತ್ರ
• ಪುಷ್ಕರ
• ಅಂತರಿಕ್ಷ
• ಸುತಪಸ
• ಅಮಿತ್ರಜಿತ್
• ಬೃಹದ್ರಾಜ
• ಬರ್ಹಿ
• ಕೃತಂಜಯ
• ರಣಂಜಯ
• ಸಂಜಯ
• ಶಾಕ್ಯ
• ಶುದ್ಧೋದ
• ಲಾಂಗಲ
• ಪ್ರಸೇನಜಿತ್
• ಕ್ಷುದ್ರಕ
• ರಣಕ
• ಸುರಥ..
ಈ ಸುರಥನಿಗೆ ಸೂರ್ಯವಂಶದ ಕೊನೆಯ ರಾಜನಾದ ಸುಮಿತ್ರನು ಮಗನಾಗಿ ಹುಟ್ಟಿದನು.
ಇವರೆಲ್ಲರೂ ಇಕ್ಷ್ವಾಕು ವಂಶಸಂಭೂತರು.
ಸುಮಿತ್ರನ ನಂತರ ಕಲಿಯುಗದಲ್ಲಿ ಈ ವಂಶವು ಮರೆಯಾಯಿತು.

Thursday 21 May 2020

🐩 ಸುಖವೆಂಬ ಮರೀಚಿಕೆಯ ಬೆನ್ನು ಹತ್ತಿ ಕೊನೆಗೆ ಜಿಗುಪ್ಸೆ ಹೊಂದಿದ್ದ ಯಯಾತಿ 🐦

ಮಹಾಭಾರತ ಮತ್ತು ಭಾಗವತ ಭಾರತ ಭೂಮಿಯ ಸಂಸ್ಕೃತಿ ಮತ್ತು ವೈಚಾರಿಕತೆಗಳ ಜೀವಂತ ಪ್ರತಿಬಿಂಬಗಳು. ಈ ಮಹಾಕಥಾನಕಗಳಲ್ಲಿ ಬರುವ ಸಹಸ್ರಾರು ಉಪಕಥೆಗಳು ಮಾನವ ಜೀವನದ ಅನೇಕ ಸಂಕೀರ್ಣ ಪಾತ್ರಗಳನ್ನು ಜನರ ಮುಂದಿಡುತ್ತವೆ. ಈ ಪಾತ್ರಗಳು ಅನೇಕ ಪಾಠಗಳನ್ನು ಹೇಳುತ್ತವೆ. ಭಾಗವತದಲ್ಲಿ ಬರುವ ಋಷಭದೇವ, ಅಜಾಮಿಳ, ವೃತ್ರಾಸುರ, ಗಜೇಂದ್ರ, ನಹುಷ ಮತ್ತು ಯಯಾತಿಯಂತಹ ವ್ಯಕ್ತಿತ್ವಗಳು ಚಿತ್ರಿಸುವ ಮಾನವ ಜೀವನದ ಸನ್ನಿವೇಶಗಳು ಮತ್ತು ಅವುಗಳಿಂದ ಹೊರಬಂದು ಮುಕ್ತನಾಗುವ ಪರಿ ಇಂದಿಗೂ ಪ್ರಸ್ತುತ.

ಅಧುನಿಕತೆಯ "Materialism"ನ ಮೃಗಜಲದ ಬೆನ್ನು ಹತ್ತಿ ಸುಖವನ್ನು ಅರಸುತ್ತ ನಡೆಯುತ್ತಿರುವ ನಮಗೆಲ್ಲರಿಗೂ ಅತ್ಯಂತ ಪ್ರಸ್ತುತವೆನಿಸುವ ಒಂದು ಕಥೆ ಯಯಾತಿ ರಾಜನದು. ಯಯಾತಿ ರಾಜ ಪುರಾಣ ಪ್ರಸಿದ್ಧ ನಹುಷ ರಾಜ ಮತ್ತು ಸಾಕ್ಷಾತ್ ಮಹಾದೇವ ಮತ್ತು ಪಾರ್ವತಿ ಮಾತೆಯ ಪುತ್ರಿಯಾದ ಅಶೋಕಸುಂದರಿಯರ ಸುಪುತ್ರ.

ನಹುಷ ರಾಜನಿಗೆ ಆರು ಜನ ಗಂಡು ಮಕ್ಕಳು. ನಹುಷನಿಗೆ ವಿರಜೆಯಲ್ಲಿ ಹುಟ್ಟಿದ ಹಿರಿಯವನಾದ ಯತಿ ಚಿಕ್ಕಂದಿನಿಂದಲೇ ವಿರಾಗಿ. ಚಿನ್ನದ ಚಮಚವನ್ನು ಕಚ್ಚಿಕೊಂಡು ಹುಟ್ಟಿದವನಾದರೂ ರಾಜಸಹಜವಾದ ಭೋಗ ಭಾಗ್ಯಗಳಲ್ಲಿ ಅವನಿಗೆ ಎಳ್ಳಷ್ಟೂ ಮೋಹವಿರಲಿಲ್ಲ. ಅವನು ಪಾರಂಪರಿಕವಾಗಿ ಒದಗಿದ ರಾಜ ಪಟ್ಟವನ್ನು ತಿರಸ್ಕರಿಸಿ ತಪಸ್ಸು ಮಾಡಲು ಅಡವಿಗೆ ಹೊರಟು ಹೋದ. ಎರಡನೇಯವನಾದ ಯಯಾತಿ ಮಹಾರಾಜನಾದ.

ಯಯಾತಿ ಮಹಾರಾಜನಾಗಿ ಇಡೀ ಜಗತ್ತನ್ನೇ ಗೆದ್ದು ಚಕ್ರವರ್ತಿ ಎನಿಸಿಕೊಳ್ಳುತ್ತಾನೆ. ತನ್ನ ನಾಲ್ಕು ತಮ್ಮಂದಿರನ್ನು ನಾಲ್ಕು ದಿಕ್ಕುಗಳ ರಾಜ್ಯಗಳನ್ನೆಲ್ಲಾ ಮೇಲ್ವಿಚಾರಣೆ ಮಾಡಲು ನೇಮಕ ಮಾಡುತ್ತಾನೆ. ಅಂತಹ ಚಕ್ರವರ್ತಿ ಕ್ಷತ್ರಿಯವೀರ ಯಯಾತಿ ಅಸುರರ ಗುರುವಾದ ಶುಕ್ರಾಚಾರ್ಯರ ಮಗಳು ದೇವಯಾನಿಯನ್ನು ಮದುವೆಯಾದನೆಂಬ ಕಥೆ ಅನೇಕರಿಗೆ ಗೊತ್ತು. ತನ್ನ ತಂದೆಯ ಶಿಷ್ಯನಾದ ಮತ್ತು ದೇವಗುರು ಬೃಹಸ್ಪತಿಯ ಮಗ ಕಚನಿಂದ ತಿರಸ್ಕೃತಳಾದ ದೇವಯಾನಿ ಮುಂಗೋಪಿ. ತನ್ನ ಅತಿ ಕೋಪದಿಂದಲೇ ಕಚನನ್ನು ಶಪಿಸಿ ಆತನಿಂದ ಮರುಶಪಿತಳಾದ ದೇವಯಾನಿ ಮತ್ತೊಮ್ಮೆ ತನ್ನ ಕೋಪದ ಪ್ರಭಾವದಿಂದಲೇ ತನ್ನ ಗೆಳತಿ ಮತ್ತು ದಾನವರಾಜ ವೃಷಪರ್ವನ ಮಗಳು ಶರ್ಮಿಷ್ಠೆಯನ್ನು ತನ್ನ ಬಟ್ಟೆಗಳನ್ನು ಹಾಕಿಕೊಂಡಿದ್ದಕ್ಕಾಗಿ ನಿಂದಿಸುತ್ತಾಳೆ. ರಾಜಕುವರಿ ಶರ್ಮಿಷ್ಠೆ, ದೇವಯಾನಿಯ ಅಹಂಕಾರದ ಮಾತುಗಳಿಂದ ಕೆರಳಿ, ಅವಳ ಬಟ್ಟೆಗಳನ್ನ ಕಿತ್ತುಕೊಂಡು ನಗ್ನಳಾದ ಅವಳನ್ನು ಪಾಳು ಬಿದ್ದ ಭಾವಿಯೊಂದಕ್ಕೆ ತಳ್ಳಿ ಬಿಟ್ಟು ಅಲ್ಲಿಂದ ಹೊರಟು ಹೋಗಿ ಬಿಡುತ್ತಾಳೆ.


ವನವಿಹಾರಕ್ಕೆ ಬಂದ ಚಕ್ರವರ್ತಿ ಯಯಾತಿ ಪಾಳುಭಾವಿಯಿಂದ ಬರುತ್ತಿದ್ದ ಆರ್ತನಾದವನ್ನು ಕೇಳಿ ಅಲ್ಲಿಗೆ ಹೋಗಿ ನೋಡಲು ನಗ್ನ ಸುಂದರಿಯಾದ ದೇವಯಾನಿ ಕಾಣುತ್ತಾಳೆ. ತನ್ನ ಹೊದಿಕೆಯನ್ನು ಅವಳಿಗೆ ಕೊಟ್ಟು, ಅವಳ ಕೈ ಹಿಡಿದು ಅವಳನ್ನು ಮೇಲಕ್ಕೆತ್ತುತ್ತಾನೆ. ತನ್ನ ಕೈಹಿಡಿದ ಮಹಾರಾಜ ಯಯಾತಿಯೇ ತನ್ನ ಪತಿ ಎಂದು ದೇವಯಾನಿ ಭಾವಿಸುತ್ತಾಳೆ. ದೇವಯಾನಿಯ ಅಪೂರ್ವ ಸೌಂದರ್ಯವನ್ನು ಕಂಡು ಪರವಶನಾದ ಯಯಾತಿ ಕೂಡ ಆಕೆ ತನಗೆ ಒಲಿದುದನ್ನು ತನ್ನ ಭಾಗ್ಯ ಎಂದುಕೊಳ್ಳುತ್ತಾನೆ.

ದೇವಯಾನಿ ಮನೆಗೆ ಮರಳಿ ತಂದೆಗೆ ಶರ್ಮಿಷ್ಠೆ ಮಾಡಿದ ಕೃತ್ಯವನ್ನು ಹೇಳಿ, ಅವಳ ತಂದೆಯ ರಾಜ್ಯವನ್ನು ತಾನು ಬಿಟ್ಟು ಹೋಗುವುದಾಗಿ ಹೇಳುತ್ತಾಳೆ. ಮಗಳ ಪ್ರೀತಿಯಲ್ಲಿ ಅಂಧರಾದ ಶುಕ್ರಾಚಾರ್ಯರು ಅವಳೊಂದಿಗೆ ದೇಶ ಬಿಟ್ಟು ಹೊರಟು ನಿಲ್ಲುತ್ತಾರೆ. ತನ್ನ ರಾಜ್ಯಕ್ಕೆ ಅವರ ಅಗತ್ಯವನ್ನು ಅರಿತ ವೃಷಪರ್ವ ಮಹಾರಾಜನು ಶುಕ್ರಾಚಾರ್ಯರಿಗೆ ತಮ್ಮ ತಪ್ಪುಗಳನ್ನು ಕ್ಷಮಿಸಬೇಕೆಂದು ಕೇಳಿಕೊಳ್ಳುತ್ತಾನೆ. ಕೊನೆಗೆ ವೃಷಪರ್ವನ ಮಗಳು ಶರ್ಮಷ್ಠೆ ದೇವಯಾನಿಯ ದಾಸಿಯಾಗಿರಲು ಒಪ್ಪಿಕೊಂಡ ಮೇಲೆ ಶುಕ್ರಾಚಾರ್ಯರು ದಾನವಗುರುವಾಗಿ ಮುಂದುವರೆಯಲು ಅಂಗೀಕರಿಸುತ್ತಾರೆ.

ಮುಂದೆ ದೇವಯಾನಿಯ ಇಚ್ಛೆಯಂತೆ ಶುಕ್ರಾಚಾರ್ಯರು ಅವಳನ್ನು ಚಕ್ರವರ್ತಿ ಯಯಾತಿಗೆ ಧಾರೆಯೆರೆದು ಕೊಡುತ್ತಾರೆ. ದೇವಯಾನಿಯ ಜೊತೆ ಅವಳ ದಾಸಿಯಾದ ಶರ್ಮಿಷ್ಠೆ ಕೂಡ ಚಕ್ರವರ್ತಿ ಯಯಾತಿಯ ರಾಜ್ಯಕ್ಕೆ ತೆರಳುತ್ತಾಳೆ. ದೇವಯಾನಿಯಂತಹ ಅದ್ಭುತ ಸುಂದರಿಯೊಂದಿಗೆ ಸಕಲ ಭೋಗ ಭಾಗ್ಯಗಳನ್ನು ಅನುಭವಿಸುತ್ತಿದ್ದರೂ ಯಯಾತಿಯ ಕಣ್ಣಿಗೆ ಶರ್ಮಿಷ್ಠೆ ಬಿದ್ದ ಮೇಲೆ ಅವನು ಅವಳಲ್ಲಿ ಕೂಡ ಅನುರಕ್ತನಾದ. ಅವಳು ಕೂಡ ಯಯಾತಿಯನ್ನು ಕಂಡು ಅವನ ಪ್ರೀತಿಯನ್ನು ಬಯಸುತ್ತಾಳೆ.

ದೇವಯಾನಿಗೆ ತಿಳಿಯದಂತೆ ಯಯಾತಿ ಶರ್ಮಿಷ್ಠೆಯನ್ನು ಕೂಡ ವರಿಸುತ್ತಾನೆ. ದೇವಯಾನಿಯಲ್ಲಿ ಯದು ಮತ್ತು ತುರ್ವಸುಗಳನ್ನು ಪುತ್ರರಾಗಿ ಪಡೆದರೆ, ಶರ್ಮಿಷ್ಠೆಯಲ್ಲಿ ದ್ರುಹ್ಯು, ಅನು ಮತ್ತು ಪುರುಗಳನ್ನು ಪುತ್ರರಾಗಿ ಪಡೆಯುತ್ತಾನೆ. ಆದರೆ ಯಯಾತಿ ಮತ್ತು ಶರ್ಮಿಷ್ಠೆಯರ ಸಂಗಮದ ವಿಷಯ ತಿಳಿದು ಕ್ರುದ್ಧಳಾದ ದೇವಯಾನಿ ತನ್ನ ತಂದೆ ಶುಕ್ರಾಚಾರ್ಯರಿಗೆ ದೂರು ನೀಡುತ್ತಾಳೆ. ಶುಕ್ರಾಚಾರ್ಯರು ಸಿಟ್ಟಿನಿಂದ ಯಯಾತಿಗೆ ವೃದ್ಧನಾಗಿ ಹೋಗೆಂದು ಶಪಿಸುತ್ತಾರೆ. ಯಯಾತಿ ಕ್ಷಮೆ ಬೇಡಲು ಬೇರೆ ಯಾರಾದರೂ ಅವನ ವೃದ್ಧಾಪ್ಯವನ್ನು ಪಡೆದುಕೊಂಡು ತಮ್ಮ ಯೌವನವನ್ನು ಅವನಿಗೆ ಕೊಡಲು ಒಪ್ಪಿದರೆ ಹಾಗಾಗಬಹುದು ಎಂಬ ಪರಿಹಾರವನ್ನು ಶುಕ್ರಾಚಾರ್ಯರು ನೀಡುತ್ತಾರೆ.

ಯಯಾತಿಗೆ ಇನ್ನೂ ಭೋಗ ಜೀವನದಲ್ಲಿ ಅಪಾರ ಆಸಕ್ತಿ. ಆದುದರಿಂದ ಆತನು ಆಗ ತಾನೇ ಯೌವನದ ಹೊಸ್ತಿಲಲ್ಲಿದ್ದ ತನ್ನ ಪುತ್ರರಿಗೆ ಅವರ ಯೌವನವನ್ನು ತನಗೆ ಧಾರೆಯೆರೆಯಲು ಕೇಳಿಕೊಳ್ಳುತ್ತಾರೆ. ಯದು ಮೊದಲಾದ ಬೇರಾವ ರಾಜಕುಮಾರರು ಅದನ್ನು ಒಪ್ಪುವುದಿಲ್ಲ. ಕೊನೆಯ ಪುತ್ರ ಪುರು ಮಾತ್ರ ತಂದೆಯ ಮಾತನ್ನು ಒಪ್ಪಿ ತನ್ನ ಯೌವನವನ್ನು ತಂದೆಗೆ ನೀಡಿ ತಾನು ವೃದ್ಧಾಪ್ಯವನ್ನು ಪಡೆದುಕೊಳ್ಳುತ್ತಾನೆ.

ಅನೇಕ ವರ್ಷಗಳ ಭೋಗ ಜೀವನದ ನಂತರವೂ ತಣಿಯದ ತನ್ನ ಭೋಗಾಸಕ್ತಿಯ ಮೇಲೆ ಕೊನೆಗೆ ಯಯಾತಿಗೆ ಜಿಗುಪ್ಸೆ ಉಂಟಾಗುತ್ತದೆ. ಯೌವನದ ಹೊಸ್ತಿಲಲ್ಲೇ ತನ್ನ ಮಗ ವೃದ್ಧಾಪ್ಯ ಅನುಭವಿಸುವಂತೆ ಮಾಡಿದ ಅವನಿಗೆ ಅಪಾರ ಪಶ್ಚಾತ್ತಾಪ ಉಂಟಾಗುತ್ತದೆ. ಕೊನೆಗೆ ಅವನು ತನ್ನ ವೃದ್ಧಾಪ್ಯವನ್ನು ಮಗನಿಂದ ವಾಪಸ್ಸು ಪಡೆದು ಅವನಿಗೆ ಯೌವನವನ್ನು ಮರಳಿಸಿ ಅವನಿಗೆ ರಾಜ್ಯಾಭಿಷೇಕ ಮಾಡಿ ತಾನು ತಪಸ್ಸಿಗೆ ಹೊರಟು, ಕೊನೆಗೆ ಲೌಕಿಕ ಲಾಲಸೆಗಳಿಂದ ಬಿಡುಗಡೆ ಪಡೆದು ಭಗವಂತನ ಕೃಪೆಯಿಂದ ಮುಕ್ತಿ ಪಡೆಯುತ್ತಾನೆ.


ಪುರಾಣ ಕಾಲದ ಯಯಾತಿ, ಸುಖವೆಂಬ ಮರೀಚಿಕೆಯ ಬೆನ್ನು ಹತ್ತಿ ತನ್ನ ಬದುಕಿನ ವೈಚಾರಿಕ ಮತ್ತು ಅಧ್ಯಾತ್ಮಿಕ ಆಯಾಮಗಳನ್ನು ತಿರಸ್ಕರಿಸಿ ಕೊನೆಗೆ ಜಿಗುಪ್ಸೆ ಹೊಂದುವ ಜನರ ಪ್ರತಿನಿಧಿಯಾಗುತ್ತಾನೆ. ಮಗನಿಂದ ತನ್ನ ಸುಖಕ್ಕಾಗಿ ಬಲಿದಾನ ಬಯಸುವ ಅನೇಕ ಮಹತ್ವಾಕಾಂಕ್ಷಿ ತಂದೆ ತಾಯಿಯರ ಪ್ರತಿನಿಧಿ ಕೂಡ ಆಗುತ್ತಾನೆ

TOP 10

  Top 10 Sites for your career 1. Linkedin 2. Indeed 3. Naukri 4. Monster 5. JobBait 6. Careercloud 7. Dice 8. CareerBuilder 9. Jibberjobber...